3:26 PM Friday3 - May 2024
ಬ್ರೇಕಿಂಗ್ ನ್ಯೂಸ್
ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:…

ಇತ್ತೀಚಿನ ಸುದ್ದಿ

ಒಡಿಸ್ಸಾ ರೈಲು ದುರಂತ: ಕಳಸದಿಂದ ಸಮೇದ್ ಶಿಖರ್ಜಿ ಯಾತ್ರೆಗೆ ತೆರಳಿದ್ದ 110 ಮಂದಿ ಯಾತ್ರಾರ್ಥಿಗಳು

03/06/2023, 19:56

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಒಡಿಶಾದ ಬಹನಾಗ ರೈಲ್ವೆ ನಿಲ್ದಾಣದಲ್ಲಿ ದುರಂತಕ್ಕೀಡಾದ
ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಚಿಕ್ಕಮಗಳೂರು ಜಿಲ್ಲೆಯ
ಕಳಸ ತಾಲೂಕಿನ 110 ಮಂದಿ
ಕಳಸದಿಂದ ಸಮೇದ್ ಶಿಖರ್ಜಿ ಯಾತ್ರೆಗೆ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ.
ಕಳಸ, ಹೊರನಾಡು, ಬಲಿಗೆ, ಯಡೂರು, ಸಂಸೆ, ಸುತ್ತ ಮುತ್ತಲ ಪ್ರದೇಶದ 110 ಜನ ಯಾತ್ರಿಕರು ರೈಲಿನಲ್ಲಿದ್ದರು. ಇವರಲ್ಲಿ ಹೆಂಗಸರು, ಮಕ್ಕಳು, ಹಿರಿಯ ನಾಗರಿಕರು ಕೂಡ ಸೇರಿದ್ದರು. ಒಟ್ಟಿಗೆ ಒಂದೇ ಕುಟುಂಬದ ಸದಸ್ಯರಂತೆ ಪ್ರಯಾಣ ಬೆಳೆಸಿದ್ದರು. ಅದೃಷ್ಟವಶಾತ್ ಕಳಸದ ಇವರೆಲ್ಲ ಸೇಫ್ ಆಗಿದ್ದಾರೆ.
ಗುರುವಾರ ಬೆಳಗ್ಗೆ 11:30ಕ್ಕೆ ಬೆಂಗಳೂರಿನ ಯಶವಂತಪುರದಿಂದ ರೈಲು ಹೊರಟಿತ್ತು. ಹೊರನಾಡಿನ ಅಜಿತ್ ಕುಮಾರ್ ಜೈನ್ ನೇತೃತ್ವದಲ್ಲಿ ಯಾತ್ರೆ ಹೊರಟಿತ್ತು.
ಮಲೆನಾಡಿನ ಸಂತ ಎಂದೇ ಖ್ಯಾತಿ ಪಡೆದಿದ್ದ ಮಹಿಮಾ ಸಾಗರ್ ಮುನಿ ಮಹಾರಾಜ್ ದರ್ಶನಕ್ಕೆ ಯಾತ್ರಾರ್ಥಿಗಳು ತೆರಳಿದ್ದರು. ಜೊತೆಗೆ 24 ತೀರ್ಥಂಕರರ ಮೋಕ್ಷ ಹೊಂದಿದ ಸ್ಥಳದ ದರ್ಶನ ಕೂಡ ಇತ್ತು. ಜೈನ ಕಾಶಿ ಎಂದೇ ಪ್ರಸಿದ್ಧಿಯಾದ ಸಮೇದ್ ಶಿಖರ್ಜಿ ಯಾತ್ರಾ ಸ್ಥಳವಾಗಿದೆ.
ಒಡಿಶಾ ಮೂಲಕ ಜಾರ್ಖಂಡ್ ತಲುಪಿ ಸಮೇದ್ ಶಿಖರ್ಜಿ ಯಾತ್ರಿಗಳು ತೆರಳಬೇಕಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು