11:32 PM Sunday11 - May 2025
ಬ್ರೇಕಿಂಗ್ ನ್ಯೂಸ್
Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ…

ಇತ್ತೀಚಿನ ಸುದ್ದಿ

ಅಥಣಿ ಶಾಸಕ ಲಕ್ಷ್ಮಣ ಸವದಿಗೆ ಶ್ರೀ ಮರುಳ ಸಿದ್ದ ಮಹಾಸ್ವಾಮಿ ಸನ್ಮಾನ: ಸಚಿವ ಸ್ಥಾನ ದೊರಕಲು ಆಶೀರ್ವಾದ

03/06/2023, 21:03

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಆಡಳಿತ ಕಾಂಗ್ರೆಸ್ ಪಕ್ಷದಿಂದ ನೂತನ ಶಾಸಕರಾಗಿ ಆಯ್ಕೆಯಾದ ಲಕ್ಷ್ಮಣ ಸವದಿ ಅವರಿಗೆ ಇಂದು ಅಥಣಿ ತಾಲೂಕಿನ ಶೆಟ್ಟರ್ ಮಠದ ಆವರಣದಲ್ಲಿ ಇಂದು ಶ್ರೀ ಮರುಳ ಸಿದ್ದ ಮಹಾಸ್ವಾಮಿಜಿ ಅವದು ಸನ್ಮಾನಿಸಿ ಗೌರವಿಸಿದರು.

ಈ ವೇಳೆ ಮಾತನಾಡಿದ ಮಾಜಿ ಉಪ ಮುಖ್ಯಮಂತ್ರಿ ಹಾಗೂ ಶಾಸಕ ಲಕ್ಷ್ಮಣ ಸವದಿ ಅವರು, ಇಡೀ ರಾಜ್ಯದಲ್ಲಿ ಅತಿ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸಿ ರಾಜ್ಯದಲ್ಲಿ ಎರಡನೆ ಸ್ಥಾನದಲ್ಲಿ ಗುರುತಿಸಿ ಕೊಟ್ಟಿರುವ ಅಥಣಿ ತಾಲೂಕಿನ ಮಹಾ ಜನತೆ ಹಾಗೂ ಪೂಜ್ಯರುಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ. ಕ್ಷೇತ್ರದಲ್ಲಿ ಅನೇಕ ಅಭಿವೃದ್ಧಿಯ ಕೆಲಸಗಳನ್ನ ಮಾಡುವದಿದ್ದು ಬರುವ ಸಂದರ್ಭದಲ್ಲಿ ತಮ್ಮೆಲ್ಲರ ಸಹಾಯ ಮತ್ತು ಸಹಕಾರ ನನಗೆ ಯಾವತ್ತೂ ಬೇಕು ಒಟ್ಟಿಗೆ ಸೇರಿ ಕ್ಷೇತ್ರವನ್ನು ಅಭಿವೃದ್ಧಿಯ ಪಥದತ್ತ ಸಾಗಿಸೋಣ ಎಂದು ಹೇಳಿದರು.
ಆಶೀರ್ವಚನ ನೀಡಿದ ಶೆಟ್ಟರ ಮಠದ ಶ್ರೀ ಮರುಳ ಶಿದ್ದ ಮಹಾಸ್ವಾಮಿಜಿಯವರೂ ತಾವು ಅಥಣಿ ಮತಕ್ಷೇತ್ರದಲ್ಲಿ ಹಲವು ಬಾರಿ ಜಯಶಾಲಿಯಾಗಿ ಒಳ್ಳೆ ರೀತಿಯಲ್ಲಿ ಕ್ಷೇತ್ರದ ಸೇವೆಯನ್ನು ಮಾಡಿದ್ದೀರಿ. ಮತ್ತೆ ನಿಮಗೆ ಶಿವಯೋಗಿಗಳ ಆಶೀರ್ವಾದ ದೊರಕಿದೆ. ಬರುವ ದಿನಗಳಲ್ಲಿ ತಮಗೆ ಮಂತ್ರಿ ಸ್ಥಾನ ದೊರಕಲಿ ಎಂದು ಆಶೀರ್ವದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು