1:31 PM Friday6 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ… ರಾಜ್ಯ ಸರ್ಕಾರಿ ಉದ್ಯೋಗ ನೇಮಕಾತಿಗೆ 5 ವರ್ಷಗಳ ಸಡಿಲಿಕೆ : ಸಿಎಂ ಸಿದ್ದರಾಮಯ್ಯ… ರಾಜ್ಯ ಬಜೆಟ್ 2026-27: ಸರ್ವರ ಸಬಲೀಕರಣ, ಅವಕಾಶಗಳ ಅನಾವರಣ, ನವ ಕರ್ನಾಟಕದ ನಿರ್ಮಾಣ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ…

ಇತ್ತೀಚಿನ ಸುದ್ದಿ

ಉತ್ತರ ಕರ್ನಾಟಕದಲ್ಲಿ ಕಾರಹುಣ್ಣಿಮೆ ಸಂಭ್ರಮ: ಗಡಿ ಭಾಗದಲ್ಲಿ ಮಣ್ಣೆತ್ತಿನ ಖರೀದಿ ಜೋರು; ಹಸುಗಳಿಗೆ ಬಣ್ಣದ ಹಗ್ಗ ಗೊಂಡೆಗೆ ಮುಗಿಬಿದ್ದ ರೈತರು

03/06/2023, 21:14

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ರಾಜ್ಯದಲ್ಲಿ ಕಾರ ಹುಣ್ಣಿಮೆಯನ್ನ ಸಂಭ್ರಮದಿಂದ ಆಚರಿಸಲ್ಪಡುತ್ತದೆ. ಅದರಲ್ಲು ಉತ್ತರ ಕರ್ನಾಟಕದಲ್ಲಿ ತನ್ನದೇ ವಿಶೇಷತೆಯಿಂದ ಆಚರಿಸಲ್ಪಡುತ್ತದೆ. ಇದರಂಗವಾಗಿ ಮಣ್ಣೆತ್ತಿನ ಖರೀದಿಯು ಜೋರಾಗಿಯೇ ನಡೆಯಿತು.
ಬೆಳಗಾವಿಯ ಕಾಗವಾಡ ವಿಧಾನ ಸಭಾ ಕ್ಷೇತ್ರದ ಸಂಬರಗಿ ಗ್ರಾಮದಲ್ಲಿ ಕಾರಹುಣ್ಣಿಮೆ ನಿಮಿತ್ಯ ಬಣ್ಣ ಬಣ್ಣದ ಹಗ್ಗ ಗೊಂಡೆಗಳನ್ನ ತೆಗೆದುಕೊಳ್ಳಲು ರೈತರು ಅಂಗಡಿ ಮುಂಗ್ಗಟ್ಟಿಗೆ ಮುಗಿ ಬಿದಿದ್ದರು. ಗ್ರಾಮದ ಕುಂಬಾರರ ಮನೆಯಲ್ಲಿನ ಮಣ್ಣೆತ್ತಿನ ಪೂಜೆ ಮಾಡುವುದು ವಾಡಿಕೆ ಇದೆ ಅದರಂತೆ ಮಣ್ಣೆತ್ತಿನ ಖರೀದಿಯು ಜೋರಾಗಿ ಇತ್ತು.

ಸುಮಾರು ಮೂರು ದಿನಗಳ ಕಾಲ ಆಚರಿಸುವ ಕಾರಹುಣ್ಣಿಮೆ ಮಳೆಗಾಲದ ಮೊದಲ ಹಬ್ಬವನ್ನಾಗಿ ಆಚರಿಸಲಾಗುತ್ತದೆ. ಮೊದಲನೆ ದಿನ ಹೊನ್ನಹುಗ್ಗಿ, ಎರಡನೆ ದಿನ ಕಾರ ಹುಣ್ಣಿಮೆ ಹಾಗೂ ಮೂರನೇ ದಿನ ಕರಿ ಹರಿಯುವಿಕೆ ಅಂತಾ ಆಚರಿಸಲ್ಪಡುತ್ತದೆ. ಕಾರ ಹುಣ್ಣಿಮೆ ಆಚರಣೆಗೆ ತನ್ನದೇ ಪುರಾತನ ಹಿನ್ನೆಲೆಯು ಇದೆ.
ಒಮ್ಮೆ ಕೈಲಾಸದಲ್ಲಿ ಪಾರ್ವತಿ ದೇವಿಯು ಹುಗ್ಗಿ ( ಪಾಯಸ ) ಮಾಡುವಾಗ ಬೆರಳಲ್ಲಿದ್ದ ಚಿನ್ನದ ಉಂಗುರ ಜಾರಿ ಪಾತ್ರೆಯಲ್ಲಿದ್ದ ಕುದಿಯುವ ಹುಗ್ಗಿ ( ಪಾಯಸ ) ದಲ್ಲಿ ಬಿಳ್ಳುತ್ತದೆ. ಅವಾಗ ಪಾರ್ವತಿ ದೇವಿಯು ಉಂಗುರ ಹೊರತೆಗೆಯಲು ಪ್ರಯತ್ನಿಸುತ್ತಾಳೆ. ಎಷ್ಟೇ ಪ್ರಯತ್ನ ಪಟ್ಟರು ಉಂಗುರ ಹೊರತೆಗೆಯಲು ಆಗದೆ ಇದ್ದಾಗ ಪಾರ್ವತಿ ದೇವಿಯು ಶಿವನ ಮೊರೆ ಹೋಗುತ್ತಾಳೆ. ಅವಾಗ ಶಿವನ ವಾಹನ ನಂದಿಗೆ ಶಿವ ಆದ್ನೇ ನೀಡುತ್ತಾನೆ. ಅವಾಗ ನಂದಿಯು ತನ್ನ ಕೊಂಬಿ ನಿಂದ ಕುದಿಯುತ್ತಿದ್ದ ಹುಗ್ಗಿ ( ಪಾಯಸ ) ದಿಂದ ಚಿನ್ನದ ಉಂಗುರ ಹೊರತೆಗೆದು ಪಾರ್ವತಿ ದೇವಿಗೆ ಕೊಡುತ್ತಾನೆ. ಅವಾಗ ಪಾರ್ವತಿ ದೇವಿಯು ಅಂದಿನಿಂದ ಈ ದಿನವನ್ನ ಕಾರ ಹುಣ್ಣಿಮೆ ಅಂತ ಆಚರಿಸಲಿ ಅಂತ ಆಶೀರ್ವಾದ ಮಾಡಿದಳು. ಕುದಿಯುವ ಪಾತ್ರೆಯಿಂದ ಹೊನ್ನ ಹೊರ ತೆಗೆದ ದಿನವನ್ನ ಹೊನ್ನಹುಗ್ಗಿ ಅಂತ ಆಚರಿಸಲಿ ಎಂದು ಆಶೀರ್ವದಿಸಿದ ದಿನದಿಂದ ಕಾರ ಹುಣ್ಣಿಮೆ ಆಚರಿಸಲಾಗುತ್ತದೆ ಅಂತ ಪ್ರತೀತಿ ಇದೆ ಎಂದು ಹೇಳಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು