10:41 AM Tuesday2 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಉತ್ತರ ಕರ್ನಾಟಕದಲ್ಲಿ ಕಾರಹುಣ್ಣಿಮೆ ಸಂಭ್ರಮ: ಗಡಿ ಭಾಗದಲ್ಲಿ ಮಣ್ಣೆತ್ತಿನ ಖರೀದಿ ಜೋರು; ಹಸುಗಳಿಗೆ ಬಣ್ಣದ ಹಗ್ಗ ಗೊಂಡೆಗೆ ಮುಗಿಬಿದ್ದ ರೈತರು

03/06/2023, 21:14

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ರಾಜ್ಯದಲ್ಲಿ ಕಾರ ಹುಣ್ಣಿಮೆಯನ್ನ ಸಂಭ್ರಮದಿಂದ ಆಚರಿಸಲ್ಪಡುತ್ತದೆ. ಅದರಲ್ಲು ಉತ್ತರ ಕರ್ನಾಟಕದಲ್ಲಿ ತನ್ನದೇ ವಿಶೇಷತೆಯಿಂದ ಆಚರಿಸಲ್ಪಡುತ್ತದೆ. ಇದರಂಗವಾಗಿ ಮಣ್ಣೆತ್ತಿನ ಖರೀದಿಯು ಜೋರಾಗಿಯೇ ನಡೆಯಿತು.
ಬೆಳಗಾವಿಯ ಕಾಗವಾಡ ವಿಧಾನ ಸಭಾ ಕ್ಷೇತ್ರದ ಸಂಬರಗಿ ಗ್ರಾಮದಲ್ಲಿ ಕಾರಹುಣ್ಣಿಮೆ ನಿಮಿತ್ಯ ಬಣ್ಣ ಬಣ್ಣದ ಹಗ್ಗ ಗೊಂಡೆಗಳನ್ನ ತೆಗೆದುಕೊಳ್ಳಲು ರೈತರು ಅಂಗಡಿ ಮುಂಗ್ಗಟ್ಟಿಗೆ ಮುಗಿ ಬಿದಿದ್ದರು. ಗ್ರಾಮದ ಕುಂಬಾರರ ಮನೆಯಲ್ಲಿನ ಮಣ್ಣೆತ್ತಿನ ಪೂಜೆ ಮಾಡುವುದು ವಾಡಿಕೆ ಇದೆ ಅದರಂತೆ ಮಣ್ಣೆತ್ತಿನ ಖರೀದಿಯು ಜೋರಾಗಿ ಇತ್ತು.

ಸುಮಾರು ಮೂರು ದಿನಗಳ ಕಾಲ ಆಚರಿಸುವ ಕಾರಹುಣ್ಣಿಮೆ ಮಳೆಗಾಲದ ಮೊದಲ ಹಬ್ಬವನ್ನಾಗಿ ಆಚರಿಸಲಾಗುತ್ತದೆ. ಮೊದಲನೆ ದಿನ ಹೊನ್ನಹುಗ್ಗಿ, ಎರಡನೆ ದಿನ ಕಾರ ಹುಣ್ಣಿಮೆ ಹಾಗೂ ಮೂರನೇ ದಿನ ಕರಿ ಹರಿಯುವಿಕೆ ಅಂತಾ ಆಚರಿಸಲ್ಪಡುತ್ತದೆ. ಕಾರ ಹುಣ್ಣಿಮೆ ಆಚರಣೆಗೆ ತನ್ನದೇ ಪುರಾತನ ಹಿನ್ನೆಲೆಯು ಇದೆ.
ಒಮ್ಮೆ ಕೈಲಾಸದಲ್ಲಿ ಪಾರ್ವತಿ ದೇವಿಯು ಹುಗ್ಗಿ ( ಪಾಯಸ ) ಮಾಡುವಾಗ ಬೆರಳಲ್ಲಿದ್ದ ಚಿನ್ನದ ಉಂಗುರ ಜಾರಿ ಪಾತ್ರೆಯಲ್ಲಿದ್ದ ಕುದಿಯುವ ಹುಗ್ಗಿ ( ಪಾಯಸ ) ದಲ್ಲಿ ಬಿಳ್ಳುತ್ತದೆ. ಅವಾಗ ಪಾರ್ವತಿ ದೇವಿಯು ಉಂಗುರ ಹೊರತೆಗೆಯಲು ಪ್ರಯತ್ನಿಸುತ್ತಾಳೆ. ಎಷ್ಟೇ ಪ್ರಯತ್ನ ಪಟ್ಟರು ಉಂಗುರ ಹೊರತೆಗೆಯಲು ಆಗದೆ ಇದ್ದಾಗ ಪಾರ್ವತಿ ದೇವಿಯು ಶಿವನ ಮೊರೆ ಹೋಗುತ್ತಾಳೆ. ಅವಾಗ ಶಿವನ ವಾಹನ ನಂದಿಗೆ ಶಿವ ಆದ್ನೇ ನೀಡುತ್ತಾನೆ. ಅವಾಗ ನಂದಿಯು ತನ್ನ ಕೊಂಬಿ ನಿಂದ ಕುದಿಯುತ್ತಿದ್ದ ಹುಗ್ಗಿ ( ಪಾಯಸ ) ದಿಂದ ಚಿನ್ನದ ಉಂಗುರ ಹೊರತೆಗೆದು ಪಾರ್ವತಿ ದೇವಿಗೆ ಕೊಡುತ್ತಾನೆ. ಅವಾಗ ಪಾರ್ವತಿ ದೇವಿಯು ಅಂದಿನಿಂದ ಈ ದಿನವನ್ನ ಕಾರ ಹುಣ್ಣಿಮೆ ಅಂತ ಆಚರಿಸಲಿ ಅಂತ ಆಶೀರ್ವಾದ ಮಾಡಿದಳು. ಕುದಿಯುವ ಪಾತ್ರೆಯಿಂದ ಹೊನ್ನ ಹೊರ ತೆಗೆದ ದಿನವನ್ನ ಹೊನ್ನಹುಗ್ಗಿ ಅಂತ ಆಚರಿಸಲಿ ಎಂದು ಆಶೀರ್ವದಿಸಿದ ದಿನದಿಂದ ಕಾರ ಹುಣ್ಣಿಮೆ ಆಚರಿಸಲಾಗುತ್ತದೆ ಅಂತ ಪ್ರತೀತಿ ಇದೆ ಎಂದು ಹೇಳಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು