9:09 PM Tuesday4 - November 2025
ಬ್ರೇಕಿಂಗ್ ನ್ಯೂಸ್
ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ…

ಇತ್ತೀಚಿನ ಸುದ್ದಿ

ಮುಖ್ಯಮಂತ್ರಿ ಬದಲಾವಣೆ: ಯಡಿಯೂರಪ್ಪ ಜತೆಗೆ ಶೆಟ್ಟರ್, ಈಶ್ವರಪ್ಪ ಅವರಿಗೂ ಕೊಕ್; ನಳಿನ್  ಸ್ಫೋಟಕ ಆಡಿಯೋ ಬಹಿರಂಗ

19/07/2021, 07:57

ಬೆಂಗಳೂರು(reporterkarnataka news): ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಹುದ್ದೆಯಿಂದ ಕೆಳಗಿಳಿಸುವ ಜತೆಗೆ ಹಿರಿಯ ನಾಯಕರಾದ ಜಗದೀಶ್‌ ಶೆಟ್ಟರ್‌ ಹಾಗೂ ಈಶ್ವರಪ್ಪ ಅವರಿಗೂ ಸಂಪುಟದಿಂದ ಖಾಯಂ ಆಗಿ ಹೊರಗಿಡುವ ಮಾಹಿತಿ ಲಭಿಸಿದೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರದ್ದು ಎನ್ನಲಾದ ಆಡಿಯೋ ಮೂಲಕ ಈ ಸ್ಫೋಟಕ ಮಾಹಿತಿ ಹೊರಬಿದ್ದಿದೆ. ಇದರೊಂದಿಗೆ ರಾಜ್ಯ ಬಿಜೆಪಿಯಲ್ಲಿ ಮತ್ತೊಮ್ಮೆ ಭಾರಿ ಸಂಚಲನ ಮೂಡಿದೆ.

ನಳಿನ್ ಕುಮಾರ್ ಕಟೀಲ್ ಅವರು ತಮ್ಮ ಅಪ್ತರ ಜತೆ ತುಳು ಭಾಷೆಯಲ್ಲಿ ನಡೆಸಿದ ಸಂಭಾಷಣೆಯ ತುಣುಕು ರಿಪೋರ್ಟರ್ ಕರ್ನಾಟಕಕ್ಕೆ ಲಭ್ಯವಾಗಿದೆ.

ನಳಿನ್‌ ಅವರು ತುಳುವಿನಲ್ಲಿ ಸಂಭಾಷಣೆ ನಡೆಸುತ್ತಾ, ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪದಚ್ಯುತಿಯ ಸುಳಿವು ನೀಡಿದ್ದಾರಲ್ಲದೆ ಶೆಟ್ಟರ್, ಈಶ್ವರಪ್ಪ ಅವರನ್ನು ಕೈಬಿಡುವ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಯಡಿಯೂರಪ್ಪ ಅವರ ಜಾಗಕ್ಕೆ ಮೂವರ ಪೈಕಿ ಒಬ್ಬರು ಬರಲಿದ್ದಾರೆ ಎಂದು ನಳಿನ್‌  ಸುಳಿವು ನೀಡಿದ್ದಾರೆ.

ಯಾರಿಗೂ ಹೇಳಬೇಡ ಎಂದು ತುಳು ಭಾಷೆಯಲ್ಲಿ ಹೇಳುತ್ತಾ, ನಂತರ ನಾವು ಹೇಳಿದಂತೆಯೇ ನಡೆಯಲಿದೆ. ಯಾರೇ ಬಂದರೂ ನಮಗೆ ಬೇಕಾದವರೇ ಆಗಿರಲಿದ್ದು ಮೂರು ಜನರ ಹೆಸರು ಹೈಕಮಾಂಡ್‌ ಗಮನದಲ್ಲಿದೆ ಎಂದು ನಳಿನ್ ಮಾಹಿಯನ್ನು ತನ್ನ ಆಪ್ತರು ಜತೆ ಹಂಚಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು