8:51 PM Thursday17 - July 2025
ಬ್ರೇಕಿಂಗ್ ನ್ಯೂಸ್
ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:…

ಇತ್ತೀಚಿನ ಸುದ್ದಿ

ತರೀಕೆರೆ ಶಾಸಕರ ಅಭಿನಂದನಾ ಸಭೆಯಲ್ಲಿ ಗಲಭೆ: ಚಾಕು ಇರಿತ: ಯುವಕ ಸಾವು, ಇಬ್ಬರಿಗೆ ಗಾಯ

04/06/2023, 09:39

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@mail.com

ತರೀಕೆರೆಯ ನೂತನ ಕಾಂಗ್ರೆಸ್ ಶಾಸಕರ ಅಭಿನಂದನಾ ಸಮಾರಂಭದಲ್ಲಿ ಆರ್ಕೆಸ್ಟ್ರಾದಲ್ಲಿ ಹಾಡು ಬದಲಿಸುವ ವಿಚಾರದಲ್ಲಿ ನಡೆದ ಗಲಾಟೆ ಯುವಕನೋರ್ವನ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದಲ್ಲಿ ನಡೆದಿದೆ.
ಚಾಕು ಇರಿತದಿಂದ ವರುಣ್ (28) ಎಂಬಾತ ಸಾವಿಗೀಡಾಗಿದ್ದಾನೆ.


ಮಂಜು ಹಾಗೂ ಸಂಜು ಎಂಬುವರು ಗಾಯಗೊಂಡಿದ್ದಾರೆ.
ತರೀಕೆರೆ ಶಾಸಕ ಶ್ರೀನಿವಾಸ್ ಗೆ ಅಭಿಮಾನಿಗಳು ಅಭಿನಂದನಾ ಸಮಾರಂಭ ಏರ್ಪಡಿಸಿದ್ದರು. ಆರ್ಕೆಸ್ಟ್ರಾದ ಹಾಡಿನ ವಿಚಾರದಲ್ಲಿ ಕಬಾಬ್ ಮೂರ್ತಿ ಹಾಗೂ ವರುಣ್ ಮಧ್ಯೆ ಗಲಾಟೆ ನಡೆಯಿತು. ಮಾತಿಗೆ ಮಾತು ಬೆಳೆದು ಎರಡು ಗುಂಪುಗಳ ಮಧ್ಯೆ ಘರ್ಷಣೆ ನಡೆಯಿತು.
ಆರ್ಕೆಸ್ಟ್ರಾ ಮುಗಿಯುತ್ತಿದ್ದಂತೆ ವರುಣ್ ಗೆ ಡ್ರ್ಯಾಗರ್ ಹಾಕಲಾಯಿತು.
ಮಂಜು ಹಾಗೂ ಸಂಜು ಕೈ ಹಾಗೂ ಕಾಲಿಗೆ ಚಾಕು ಇರಿತ ಉಂಟಾಗಿದೆ. ವರುಣ್ ಗೆ ಹೊಟ್ಟೆ ಹಾಗೂ ಪಕ್ಕಕೆಗೆ ಚಾಕುವಿನಿಂದ ಕಬಾಬ್ ಮೂರ್ತಿ ಇರಿದಿರುವುದಾಗಿ ಆರೋಪಿಸಲಾಗಿದೆ. ಗಾಯಾಳು ವರುಣ್ ಅವರನ್ನು ತಕ್ಷಣ ಶಿವಮೊಗ್ಗ ಆಸ್ಪತ್ರೆಗೆ ಕೊಂಡೊಯ್ದರೂ ಅವರು ಸಾವನ್ನಪ್ಪಿದ ರು ಎಂದು ತಿಳಿದು ಬಂದಿದೆ.
ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸ್ಥಳಕ್ಕೆ ಎಸ್‌ ಪಿ ಉಮಾ ಪ್ರಶಾಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು