2:37 PM Sunday26 - April 2026
ಬ್ರೇಕಿಂಗ್ ನ್ಯೂಸ್
ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ?

ಇತ್ತೀಚಿನ ಸುದ್ದಿ

ಸುಳ್ಳು ಕೇಸು ದಾಖಲು ಆರೋಪ: ಜೂನ್ 6ರಂದು ಬೃಹತ್ ಮೆರವಣಿಗೆ, ನಗರ ಪಾಲಿಕೆ ಚಲೋ

04/06/2023, 19:31

ಮಂಗಳೂರು(reporterkarnataka.com): ಜನಪರ ಹೋರಾಟಗಾರರು, ಬೀದಿ ಬದಿ ವ್ಯಾಪಾರಸ್ಥರ ಸಂಘದ ಗೌರವಧ್ಯಕ್ಷ ಬಿ.ಕೆ. ಇಮ್ತಿಯಾಝ್ ಹಾಗೂ ಮುಖಂಡರ ಮೇಲೆ ಮಂಗಳೂರು ಮಹಾನಗರ ಪಾಲಿಕೆಯ ಆರೋಗ್ಯ ವಿಭಾಗದ ಅಧಿಕಾರಿಗಳು ಸುಳ್ಳು ಕೇಸು ದಾಖಲಿಸಿರುವ ಕ್ರಮವನ್ನು ವಿರೋಧಿಸಿ ಜೂನ್ 6ರಂದು ಬೆಳಿಗ್ಗೆ 10ಕ್ಕೆ ನಗರದ ಜೈಲ್ ರೋಡ್ ಬಳಿಯಿಂದ ಲಾಲ್ ಭಾಗ್ ನಗರಪಾಲಿಕೆಯ ಕಚೇರಿ ವರೆಗೆ ಬೃಹತ್ ಮೆರವಣಿಗೆ ಮತ್ತು ಪ್ರತಿಭಟನೆ ನಡೆಯಲಿದೆ.

ಬಡ ಬೀದಿಬದಿ ವ್ಯಾಪಾರಿಗಳಿಗೆ ಕಾನೂನು ಬದ್ದವಾಗಿ ದೊರಕಿರುವ ಐಡಿ ಕಾರ್ಡ್, ಪ್ರಮಾಣ ಪತ್ರಗಳನ್ನು ವಿತರಿಸದೆ ಪಾಲಿಕೆಯ ಆರೋಗ್ಯ ವಿಭಾಗದ ಅಧಿಕಾರಿಗಳು ದಬ್ಬಾಳಿಕೆ ನಡೆಸಿ ಅವರ ಕನಿಷ್ಠ ಬದುಕುವ ಹಕ್ಕಿನ ಮೇಲೆ ದಾಳಿ ನಡೆಸುತ್ತಿದ್ದಾರೆ. ನಗರಪಾಲಿಕೆಯಲ್ಲಿ 14 ವರ್ಷದ ಹಿಂದೆ ನಿವೃತ್ತಿ ಆಗಿರುವ ಅಧಿಕಾರಿಯನ್ನೇ ಆರೋಗ್ಯ ಅಧಿಕಾರಿಯಾಗಿ ಮುಂದುವರಿಸುತ್ತಿದ್ದಾರೆ, ಆರೋಗ್ಯ ಅಧಿಕಾರಿಗೆ ಕೆಳ ಅಧಿಕಾರಿಗಳ ಮೇಲೆ ನಿಯಂತ್ರಣ ಇಲ್ಲ, ಪಾಲಿಕೆಯ ಬೀದಿಬದಿ ವ್ಯಾಪಾರದ ಕಾನೂನು, ನಿಯಮಗಳ ಜ್ಞಾನ ಇಲ್ಲ ಅಧಿಕಾರಿಗಳು ರಾಜಕಾರಣಿಗಳ ತಾಳಕ್ಕೆ ತಕ್ಕಂತೆ ಕುಣಿಯುತ್ತ ಬಡ ಬೀದಿ ವ್ಯಾಪಾರಿಗಳ ಹೊಟ್ಟೆಗೆ ಹೊಡೆಯುತ್ತಿದ್ದಾರೆ. ಅವರ ಹಕ್ಕುಗಳ ಬಗ್ಗೆ ಹೋರಾಟ ನಡೆಸಿದರೆ ಅವರ ಮೇಲೆ ಸುಳ್ಳು ಕೇಸು ದಾಖಲಿಸಿ ಹೋರಾಟಗಾರರ ಧ್ವನಿ ಅಡಗಿಸುವ ಪ್ರಯತ್ನ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬೀದಿ ವ್ಯಾಪಾರಿಗಳ ಮೇಲಿನ ಸುಳ್ಳು ಮೊಕದ್ದಮೆ ವಾಪಸ್ ಪಡೆಯಲು ಒತ್ತಾಯಿಸಿ ನಗರ ಪಾಲಿಕೆ ಚಲೋ ಹೋರಾಟವನ್ನು ಹಮ್ಮಿಕೊಳ್ಳಲಾಗಿದ್ದು ಬೀದಿ ವ್ಯಾಪಾರಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವೃದ್ಧಿ ಸಂಘದ ಅಧ್ಯಕ್ಷರಾದ ಮೊಹಮ್ಮದ್ ಮುಸ್ತಫಾ ಅವರು ಪತ್ರಿಕಾ ಹೇಳಿಕೆಯಲ್ಲಿ ವಿನಂತಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು