3:19 AM Saturday7 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ಸುಳ್ಳು ಕೇಸು ದಾಖಲು ಆರೋಪ: ಜೂನ್ 6ರಂದು ಬೃಹತ್ ಮೆರವಣಿಗೆ, ನಗರ ಪಾಲಿಕೆ ಚಲೋ

04/06/2023, 19:31

ಮಂಗಳೂರು(reporterkarnataka.com): ಜನಪರ ಹೋರಾಟಗಾರರು, ಬೀದಿ ಬದಿ ವ್ಯಾಪಾರಸ್ಥರ ಸಂಘದ ಗೌರವಧ್ಯಕ್ಷ ಬಿ.ಕೆ. ಇಮ್ತಿಯಾಝ್ ಹಾಗೂ ಮುಖಂಡರ ಮೇಲೆ ಮಂಗಳೂರು ಮಹಾನಗರ ಪಾಲಿಕೆಯ ಆರೋಗ್ಯ ವಿಭಾಗದ ಅಧಿಕಾರಿಗಳು ಸುಳ್ಳು ಕೇಸು ದಾಖಲಿಸಿರುವ ಕ್ರಮವನ್ನು ವಿರೋಧಿಸಿ ಜೂನ್ 6ರಂದು ಬೆಳಿಗ್ಗೆ 10ಕ್ಕೆ ನಗರದ ಜೈಲ್ ರೋಡ್ ಬಳಿಯಿಂದ ಲಾಲ್ ಭಾಗ್ ನಗರಪಾಲಿಕೆಯ ಕಚೇರಿ ವರೆಗೆ ಬೃಹತ್ ಮೆರವಣಿಗೆ ಮತ್ತು ಪ್ರತಿಭಟನೆ ನಡೆಯಲಿದೆ.

ಬಡ ಬೀದಿಬದಿ ವ್ಯಾಪಾರಿಗಳಿಗೆ ಕಾನೂನು ಬದ್ದವಾಗಿ ದೊರಕಿರುವ ಐಡಿ ಕಾರ್ಡ್, ಪ್ರಮಾಣ ಪತ್ರಗಳನ್ನು ವಿತರಿಸದೆ ಪಾಲಿಕೆಯ ಆರೋಗ್ಯ ವಿಭಾಗದ ಅಧಿಕಾರಿಗಳು ದಬ್ಬಾಳಿಕೆ ನಡೆಸಿ ಅವರ ಕನಿಷ್ಠ ಬದುಕುವ ಹಕ್ಕಿನ ಮೇಲೆ ದಾಳಿ ನಡೆಸುತ್ತಿದ್ದಾರೆ. ನಗರಪಾಲಿಕೆಯಲ್ಲಿ 14 ವರ್ಷದ ಹಿಂದೆ ನಿವೃತ್ತಿ ಆಗಿರುವ ಅಧಿಕಾರಿಯನ್ನೇ ಆರೋಗ್ಯ ಅಧಿಕಾರಿಯಾಗಿ ಮುಂದುವರಿಸುತ್ತಿದ್ದಾರೆ, ಆರೋಗ್ಯ ಅಧಿಕಾರಿಗೆ ಕೆಳ ಅಧಿಕಾರಿಗಳ ಮೇಲೆ ನಿಯಂತ್ರಣ ಇಲ್ಲ, ಪಾಲಿಕೆಯ ಬೀದಿಬದಿ ವ್ಯಾಪಾರದ ಕಾನೂನು, ನಿಯಮಗಳ ಜ್ಞಾನ ಇಲ್ಲ ಅಧಿಕಾರಿಗಳು ರಾಜಕಾರಣಿಗಳ ತಾಳಕ್ಕೆ ತಕ್ಕಂತೆ ಕುಣಿಯುತ್ತ ಬಡ ಬೀದಿ ವ್ಯಾಪಾರಿಗಳ ಹೊಟ್ಟೆಗೆ ಹೊಡೆಯುತ್ತಿದ್ದಾರೆ. ಅವರ ಹಕ್ಕುಗಳ ಬಗ್ಗೆ ಹೋರಾಟ ನಡೆಸಿದರೆ ಅವರ ಮೇಲೆ ಸುಳ್ಳು ಕೇಸು ದಾಖಲಿಸಿ ಹೋರಾಟಗಾರರ ಧ್ವನಿ ಅಡಗಿಸುವ ಪ್ರಯತ್ನ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬೀದಿ ವ್ಯಾಪಾರಿಗಳ ಮೇಲಿನ ಸುಳ್ಳು ಮೊಕದ್ದಮೆ ವಾಪಸ್ ಪಡೆಯಲು ಒತ್ತಾಯಿಸಿ ನಗರ ಪಾಲಿಕೆ ಚಲೋ ಹೋರಾಟವನ್ನು ಹಮ್ಮಿಕೊಳ್ಳಲಾಗಿದ್ದು ಬೀದಿ ವ್ಯಾಪಾರಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವೃದ್ಧಿ ಸಂಘದ ಅಧ್ಯಕ್ಷರಾದ ಮೊಹಮ್ಮದ್ ಮುಸ್ತಫಾ ಅವರು ಪತ್ರಿಕಾ ಹೇಳಿಕೆಯಲ್ಲಿ ವಿನಂತಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು