8:37 PM Tuesday8 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಸುಳ್ಳು ಕೇಸು ದಾಖಲು ಆರೋಪ: ಜೂನ್ 6ರಂದು ಬೃಹತ್ ಮೆರವಣಿಗೆ, ನಗರ ಪಾಲಿಕೆ ಚಲೋ

04/06/2023, 19:31

ಮಂಗಳೂರು(reporterkarnataka.com): ಜನಪರ ಹೋರಾಟಗಾರರು, ಬೀದಿ ಬದಿ ವ್ಯಾಪಾರಸ್ಥರ ಸಂಘದ ಗೌರವಧ್ಯಕ್ಷ ಬಿ.ಕೆ. ಇಮ್ತಿಯಾಝ್ ಹಾಗೂ ಮುಖಂಡರ ಮೇಲೆ ಮಂಗಳೂರು ಮಹಾನಗರ ಪಾಲಿಕೆಯ ಆರೋಗ್ಯ ವಿಭಾಗದ ಅಧಿಕಾರಿಗಳು ಸುಳ್ಳು ಕೇಸು ದಾಖಲಿಸಿರುವ ಕ್ರಮವನ್ನು ವಿರೋಧಿಸಿ ಜೂನ್ 6ರಂದು ಬೆಳಿಗ್ಗೆ 10ಕ್ಕೆ ನಗರದ ಜೈಲ್ ರೋಡ್ ಬಳಿಯಿಂದ ಲಾಲ್ ಭಾಗ್ ನಗರಪಾಲಿಕೆಯ ಕಚೇರಿ ವರೆಗೆ ಬೃಹತ್ ಮೆರವಣಿಗೆ ಮತ್ತು ಪ್ರತಿಭಟನೆ ನಡೆಯಲಿದೆ.

ಬಡ ಬೀದಿಬದಿ ವ್ಯಾಪಾರಿಗಳಿಗೆ ಕಾನೂನು ಬದ್ದವಾಗಿ ದೊರಕಿರುವ ಐಡಿ ಕಾರ್ಡ್, ಪ್ರಮಾಣ ಪತ್ರಗಳನ್ನು ವಿತರಿಸದೆ ಪಾಲಿಕೆಯ ಆರೋಗ್ಯ ವಿಭಾಗದ ಅಧಿಕಾರಿಗಳು ದಬ್ಬಾಳಿಕೆ ನಡೆಸಿ ಅವರ ಕನಿಷ್ಠ ಬದುಕುವ ಹಕ್ಕಿನ ಮೇಲೆ ದಾಳಿ ನಡೆಸುತ್ತಿದ್ದಾರೆ. ನಗರಪಾಲಿಕೆಯಲ್ಲಿ 14 ವರ್ಷದ ಹಿಂದೆ ನಿವೃತ್ತಿ ಆಗಿರುವ ಅಧಿಕಾರಿಯನ್ನೇ ಆರೋಗ್ಯ ಅಧಿಕಾರಿಯಾಗಿ ಮುಂದುವರಿಸುತ್ತಿದ್ದಾರೆ, ಆರೋಗ್ಯ ಅಧಿಕಾರಿಗೆ ಕೆಳ ಅಧಿಕಾರಿಗಳ ಮೇಲೆ ನಿಯಂತ್ರಣ ಇಲ್ಲ, ಪಾಲಿಕೆಯ ಬೀದಿಬದಿ ವ್ಯಾಪಾರದ ಕಾನೂನು, ನಿಯಮಗಳ ಜ್ಞಾನ ಇಲ್ಲ ಅಧಿಕಾರಿಗಳು ರಾಜಕಾರಣಿಗಳ ತಾಳಕ್ಕೆ ತಕ್ಕಂತೆ ಕುಣಿಯುತ್ತ ಬಡ ಬೀದಿ ವ್ಯಾಪಾರಿಗಳ ಹೊಟ್ಟೆಗೆ ಹೊಡೆಯುತ್ತಿದ್ದಾರೆ. ಅವರ ಹಕ್ಕುಗಳ ಬಗ್ಗೆ ಹೋರಾಟ ನಡೆಸಿದರೆ ಅವರ ಮೇಲೆ ಸುಳ್ಳು ಕೇಸು ದಾಖಲಿಸಿ ಹೋರಾಟಗಾರರ ಧ್ವನಿ ಅಡಗಿಸುವ ಪ್ರಯತ್ನ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬೀದಿ ವ್ಯಾಪಾರಿಗಳ ಮೇಲಿನ ಸುಳ್ಳು ಮೊಕದ್ದಮೆ ವಾಪಸ್ ಪಡೆಯಲು ಒತ್ತಾಯಿಸಿ ನಗರ ಪಾಲಿಕೆ ಚಲೋ ಹೋರಾಟವನ್ನು ಹಮ್ಮಿಕೊಳ್ಳಲಾಗಿದ್ದು ಬೀದಿ ವ್ಯಾಪಾರಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವೃದ್ಧಿ ಸಂಘದ ಅಧ್ಯಕ್ಷರಾದ ಮೊಹಮ್ಮದ್ ಮುಸ್ತಫಾ ಅವರು ಪತ್ರಿಕಾ ಹೇಳಿಕೆಯಲ್ಲಿ ವಿನಂತಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು