8:48 AM Monday6 - May 2024
ಬ್ರೇಕಿಂಗ್ ನ್ಯೂಸ್
ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ…

ಇತ್ತೀಚಿನ ಸುದ್ದಿ

ನಿವೃತ್ತ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಎಚ್.ಎಂ. ಪೂವಪ್ಪ ಅವರಿಗೆ ಬೀಳ್ಕೊಡುಗೆ

04/06/2023, 19:46

ಮಂಗಳೂರು(reporterkarnataka.com): ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಆಗಿ ಬಜಪೆ ಪೊಲೀಸ್ ಠಾಣೆಯಲ್ಲಿ ನಿವೃತ್ತರಾದ ಎಚ್.ಎಂ.ಪೂವಪ್ಪ ಅವರಿಗೆ ಬೀಳ್ಕೊಡುಗೆ ನಡೆಯಿತು.
ಎಚ್.ಎಂ.ಪೂವಪ್ಪ ಅವರನ್ನು ಸನ್ಮಾನಿಸಿ, ಸ್ಮರಣಿಕೆ ನೀಡಿ ಗೌರವಿಸಿದ ಮಂಗಳೂರು ಸಹಾಯಕ ಪೊಲೀಸ್ ಆಯುಕ್ತ ಮನೋಜ್ ಕುಮಾರ್ ಅವರು ಮಾತನಾಡಿ, ಉತ್ತಮ ಸೇವಾ ಹಿನ್ನೆಲೆಯೊಂದಿಗೆ ಎಚ್.ಎಂ. ಪೂವಪ್ಪ ಅವರು ಸೇವೆಯಿಂದ ನಿವೃತ್ತರಾಗುತ್ತಿರುವುದು ಸಂತೋಷದ ವಿಷಯ. ನಿವೃತ್ತ ಜೀವನದಲ್ಲಿ ಕುಟುಂಬದ ಸದಸ್ಯರೊಂದಿಗೆ ಸೇವಾ ಅವಧಿಯ ಒಳ್ಳೆಯ ಅನುಭವಗಳನ್ನು ಮೆಲುಕು ಹಾಕುತ್ತಾ ಸಂತೃಪ್ತ ಜೀವನ ನಡೆಸುವಂತೆ ಶುಭ ಹಾರೈಸಿದರು.


ಪೂವಪ್ಪ ಅವರು ನಡೆಸಿರುವ 38 ವರ್ಷ ಎರಡು ತಿಂಗಳ ಸೇವಾವಧಿ ಸುದೀರ್ಘವಾಗಿದೆ. ಪೊಲೀಸ್ ಇಲಾಖೆಯ ಅಧಿಕಾರಿಗಳು ತಮ್ಮ ಸೇವಾಅವಧಿಯ ಸುಮಾರು ಶೇ.70 ಬಾಗವನ್ನು ಇಲಾಖೆ ಸಿಬ್ಬಂದಿ ಜೊತೆಯಲ್ಲೇ ಸಮವಸ್ತ್ರದೊಂದಿಗೆ ಕಳೆದಿರುತ್ತಾರೆ. ಕುಟುಂಬದ ಜೊತೆಗೆ ಕಳೆದಿರುವುದು ಕಡಿಮೆ. ಈ ವೃತ್ತಿಯಲ್ಲಿ ಇಲಾಕೆ ಸಿಬ್ಬಂದಿ ಮತ್ತು ಕುಟುಂಬದ ಸದಸ್ಯರ ತ್ಯಾಗ ಅನನ್ಯವಗಿದೆ ಎಂದು ಅವರು ಹೇಳಿದರು.
ಇಲಾಖೆಯ ಗೌರವ ಸ್ವೀಕರಿಸಿ ಮಾತನಾಡಿದ ಎಚ್.ಎಂ.ಪೂವಪ್ಪ ಅವರು, ಬಜಪೆ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಕಾನ್‌ಸ್ಟೇಬಲ್ ಆಗಿ 38 ವರ್ಷಗಳ ಹಿಂದೆ ವೃತ್ತಿ ಜೀವನ ಆರಂಭಿಸಿದ ತಾನು ಅದೇ ಬಜಪೆ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ಆಗಿ ನಿವೃತ್ತಿಯಾಗುತ್ತಿದ್ದೇನೆ. ಸೇವಾ ಅವಧಿಯನ್ನು ಪೂರ್ಣಗೊಳಿಸಿದ ಸಂತೃಪ್ತಿಯಿದೆ. ಇಲಾಖೆ ಹಿರಿಯ ಅಧಿಕಾರಿಗಳು, ಸಹದ್ಯೋಗಿ ಮಿತ್ರರು ತೋರಿದ ಪ್ರೀತಿ, ವಿಶ್ವಾಸ, ಸಹಕಾರಕ್ಕೆ ಅಭಾರಿಯಾಗಿದ್ದೇನೆ ಎಂದು ಹೇಳಿದರು.
ಹಿರಿಯ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ನಿವೃತ್ತರ ಜೊತೆಗಿನ ಅನುಭವ ಹಂಚಿಕೊಂಡರು.
ಬಜಪೆ ಪೊಲೀಸ್ ಸರ್ಕಲ್ ಇನ್ಸ್‌ಪೆಕ್ಟರ್ ಪ್ರಕಾಶ್ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಸರ್ಕಲ್ ಇನ್ಸ್‌ಪೆಕ್ಟರ್ ಕೆ.ಆರ್.ನಾಯಕ್ ಕೆ.ಆರ್.ನಾಯಕ್ ಮುಖ್ಯ ಅತಿಥಿಗಳಾಗಿದ್ದರು. ನಿವೃತ್ತ ಎಚ್.ಎಂ.ಪೂವಪ್ಪ ಅವರ ಪತ್ನಿ ಶಕುಂತಳಾ ಪೂವಪ್ಪ ಅವರು ಉಪಸ್ಥಿತರಿದ್ದರು.
ನಿವೃತ್ತ ಸಬ್ ಇನ್ಸ್‌ಪೆಕ್ಟರ್ ರಾಜಾರಾಂ ಕಾರ್ಯಕ್ರಮ ನಿರ್ವಹಿಸಿದರು. ಕೆಂಚಪ್ಪ ವಂದಿಸಿದರು.
…..

ಇತ್ತೀಚಿನ ಸುದ್ದಿ

ಜಾಹೀರಾತು