2:42 PM Wednesday21 - January 2026
ಬ್ರೇಕಿಂಗ್ ನ್ಯೂಸ್
ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,…

ಇತ್ತೀಚಿನ ಸುದ್ದಿ

ನಿವೃತ್ತ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಎಚ್.ಎಂ. ಪೂವಪ್ಪ ಅವರಿಗೆ ಬೀಳ್ಕೊಡುಗೆ

04/06/2023, 19:46

ಮಂಗಳೂರು(reporterkarnataka.com): ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಆಗಿ ಬಜಪೆ ಪೊಲೀಸ್ ಠಾಣೆಯಲ್ಲಿ ನಿವೃತ್ತರಾದ ಎಚ್.ಎಂ.ಪೂವಪ್ಪ ಅವರಿಗೆ ಬೀಳ್ಕೊಡುಗೆ ನಡೆಯಿತು.
ಎಚ್.ಎಂ.ಪೂವಪ್ಪ ಅವರನ್ನು ಸನ್ಮಾನಿಸಿ, ಸ್ಮರಣಿಕೆ ನೀಡಿ ಗೌರವಿಸಿದ ಮಂಗಳೂರು ಸಹಾಯಕ ಪೊಲೀಸ್ ಆಯುಕ್ತ ಮನೋಜ್ ಕುಮಾರ್ ಅವರು ಮಾತನಾಡಿ, ಉತ್ತಮ ಸೇವಾ ಹಿನ್ನೆಲೆಯೊಂದಿಗೆ ಎಚ್.ಎಂ. ಪೂವಪ್ಪ ಅವರು ಸೇವೆಯಿಂದ ನಿವೃತ್ತರಾಗುತ್ತಿರುವುದು ಸಂತೋಷದ ವಿಷಯ. ನಿವೃತ್ತ ಜೀವನದಲ್ಲಿ ಕುಟುಂಬದ ಸದಸ್ಯರೊಂದಿಗೆ ಸೇವಾ ಅವಧಿಯ ಒಳ್ಳೆಯ ಅನುಭವಗಳನ್ನು ಮೆಲುಕು ಹಾಕುತ್ತಾ ಸಂತೃಪ್ತ ಜೀವನ ನಡೆಸುವಂತೆ ಶುಭ ಹಾರೈಸಿದರು.


ಪೂವಪ್ಪ ಅವರು ನಡೆಸಿರುವ 38 ವರ್ಷ ಎರಡು ತಿಂಗಳ ಸೇವಾವಧಿ ಸುದೀರ್ಘವಾಗಿದೆ. ಪೊಲೀಸ್ ಇಲಾಖೆಯ ಅಧಿಕಾರಿಗಳು ತಮ್ಮ ಸೇವಾಅವಧಿಯ ಸುಮಾರು ಶೇ.70 ಬಾಗವನ್ನು ಇಲಾಖೆ ಸಿಬ್ಬಂದಿ ಜೊತೆಯಲ್ಲೇ ಸಮವಸ್ತ್ರದೊಂದಿಗೆ ಕಳೆದಿರುತ್ತಾರೆ. ಕುಟುಂಬದ ಜೊತೆಗೆ ಕಳೆದಿರುವುದು ಕಡಿಮೆ. ಈ ವೃತ್ತಿಯಲ್ಲಿ ಇಲಾಕೆ ಸಿಬ್ಬಂದಿ ಮತ್ತು ಕುಟುಂಬದ ಸದಸ್ಯರ ತ್ಯಾಗ ಅನನ್ಯವಗಿದೆ ಎಂದು ಅವರು ಹೇಳಿದರು.
ಇಲಾಖೆಯ ಗೌರವ ಸ್ವೀಕರಿಸಿ ಮಾತನಾಡಿದ ಎಚ್.ಎಂ.ಪೂವಪ್ಪ ಅವರು, ಬಜಪೆ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಕಾನ್‌ಸ್ಟೇಬಲ್ ಆಗಿ 38 ವರ್ಷಗಳ ಹಿಂದೆ ವೃತ್ತಿ ಜೀವನ ಆರಂಭಿಸಿದ ತಾನು ಅದೇ ಬಜಪೆ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ಆಗಿ ನಿವೃತ್ತಿಯಾಗುತ್ತಿದ್ದೇನೆ. ಸೇವಾ ಅವಧಿಯನ್ನು ಪೂರ್ಣಗೊಳಿಸಿದ ಸಂತೃಪ್ತಿಯಿದೆ. ಇಲಾಖೆ ಹಿರಿಯ ಅಧಿಕಾರಿಗಳು, ಸಹದ್ಯೋಗಿ ಮಿತ್ರರು ತೋರಿದ ಪ್ರೀತಿ, ವಿಶ್ವಾಸ, ಸಹಕಾರಕ್ಕೆ ಅಭಾರಿಯಾಗಿದ್ದೇನೆ ಎಂದು ಹೇಳಿದರು.
ಹಿರಿಯ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ನಿವೃತ್ತರ ಜೊತೆಗಿನ ಅನುಭವ ಹಂಚಿಕೊಂಡರು.
ಬಜಪೆ ಪೊಲೀಸ್ ಸರ್ಕಲ್ ಇನ್ಸ್‌ಪೆಕ್ಟರ್ ಪ್ರಕಾಶ್ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಸರ್ಕಲ್ ಇನ್ಸ್‌ಪೆಕ್ಟರ್ ಕೆ.ಆರ್.ನಾಯಕ್ ಕೆ.ಆರ್.ನಾಯಕ್ ಮುಖ್ಯ ಅತಿಥಿಗಳಾಗಿದ್ದರು. ನಿವೃತ್ತ ಎಚ್.ಎಂ.ಪೂವಪ್ಪ ಅವರ ಪತ್ನಿ ಶಕುಂತಳಾ ಪೂವಪ್ಪ ಅವರು ಉಪಸ್ಥಿತರಿದ್ದರು.
ನಿವೃತ್ತ ಸಬ್ ಇನ್ಸ್‌ಪೆಕ್ಟರ್ ರಾಜಾರಾಂ ಕಾರ್ಯಕ್ರಮ ನಿರ್ವಹಿಸಿದರು. ಕೆಂಚಪ್ಪ ವಂದಿಸಿದರು.
…..

ಇತ್ತೀಚಿನ ಸುದ್ದಿ

ಜಾಹೀರಾತು