2:55 AM Saturday18 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ಬೊಂದೆಲ್ ಲಾಫ್ಟರ್ ಕ್ಲಬ್‌: ವಿದ್ಯಾರ್ಥಿಗಳ ಮಾನಸಿಕ ಒತ್ತಡ ನಿವಾರಿಸಲು 2 ದಿನಗಳ ನಗೆ ಸೆಶನ್‌

05/06/2023, 21:39

ಮಂಗಳೂರು(reporterkarnataka.com):ನಗರದ ಬೊಂದೆಲ್ ಜಂಕ್ಷನ್‌ನಲ್ಲಿರುವ ಜಾನ್ಲಿನ್ ಕಾಟೇಜ್‌ನಲ್ಲಿ ಕಳೆದ 20 ವರುಷಗಳಿಂದ ಲಾಫ್ಟರ್ ಕ್ಲಬ್‌ಗಳನ್ನು ನಡೆಸುತ್ತಿರುವ ಬೊಂದೆಲ್ ಲಾಫ್ಟರ್ ಕ್ಲಬ್ ಇವರು ಲಕ್ಷ್ಮೀ ಮೆಮೋರಿಯಲ್ ಕಾಲೇಜ್ ಆಫ್ ನರ್ಸಿಂಗ್ ಇದರ 100 ವಿದ್ಯಾರ್ಥಿಗಳಿಗೆ ಜೂನ್ 3 ಮತ್ತು 5ರಂದು ಲಾಫ್ಟರ್ ಸೆಶನ್‌ಗಳನ್ನು ನಡೆಸಿತು.


ಬೊಂದೆಲ್ ಕ್ಲಬ್ಬಿನ ಸಂಸ್ಥಾಪಕ ಜಾನ್ ಬಿ. ಮೊಂತೇರೊ ಮತ್ತು ಕ್ಲಬ್ಬಿನ ಹಿರಿಯ ಸದಸ್ಯರಾದ ನಿವೃತ್ತ ಪ್ರಾಧ್ಯಾಪಕ ಖಾಲಿದ್ ಅನ್ಸಾರಿ ಮತ್ತು ಬೊನವೆಂಚರ್ ಡಿಸೋಜಾ ಅವರು ವಿದ್ಯಾರ್ಥಿ ಮತ್ತು ಅಧ್ಯಾಪಕರಿಗೆ ಮಾರ್ಗದರ್ಶನ ನೀಡಿದರು. ಇದಕ್ಕೂ ಮುನ್ನ ಎಪ್ರಿಲ್ 4ರಂದು ಜಾನ್ ಮೊಂತೇರೊ ಮತ್ತು ಪ್ರೊ. ಖಾಲಿದ್ ಅನ್ಸಾರಿ ಅವರನ್ನು ಬಲ್ಮಠ ಎ.ಜೆ. ಟರ‍್ಸ್ನ ಕಾಲೇಜು ಆವರಣದಲ್ಲಿ ಬೋಧಕರಿಗಾಗಿ ನಗೆ ಅಧಿವೇಶನವನ್ನು ನಡೆಸಲು ಆಹ್ವಾನಿಸಲಾಗಿತ್ತು. ಪ್ರಾಂಶುಪಾಲೆ ಡಾ. ಲರಿಸ್ಸಾ ಮಾರ್ಥಾ ಸ್ಯಾಮ್ಸ್ ಅವರ ಮಾರ್ಗದರ್ಶನದಲ್ಲಿ ಮಾನಸಿಕ ಆರೋಗ್ಯ ವಿಭಾಗದ ಉಪನ್ಯಾಸಕಿ ಶ್ರೀರಂಜನಿ ಅವರು ಕಾರ್ಯಕ್ರಮವನ್ನು ಸಂಯೋಜಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು