10:57 AM Thursday18 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಆ್ಯಂಟಿ ಕಮ್ಯುನಲ್ ವಿಂಗ್: ಕಡಲನಗರಿಯಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್

06/06/2023, 17:57

ಮಂಗಳೂರು(reporterkarnataka.com): ಪೊಲೀಸ್ ಇಲಾಖೆ ನೈತಿಕ ಪೊಲೀಸ್ ಗಿರಿ ನಡೆಯಲು ಯಾವುದೇ ಕಾರಣಕ್ಕೂ ಅವಕಾಶವೇ ನೀಡಬಾರದು. ಈ ನಿಟ್ಟಿನಲ್ಲಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು.

ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಶ್ಚಿಮ ವಲಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದೇನೆ. ಕೋಮು ಸಾಮರಸ್ಯ ತರಲು ಸೂಚನೆ ನೀಡಿದ್ದೇನೆ. ನೈತಿಕ ಪೊಲೀಸ್ ಗಿರಿ ನಡೆದರೆ ರಾಜ್ಯಕ್ಕೆ ಕೆಟ್ಟ ಹೆಸರು ಬರುತ್ತದೆ. ಇದಕ್ಕೆ ಕಠಿಣ ಕ್ರಮ ತೆಗೆದುಕೊಳ್ಳಲು ಸೂಚನೆ ಕೊಟ್ಟಿದ್ದೇನೆ ಎಂದರು.
ಕರಾವಳಿ ಮಾತ್ರವಲ್ಲ ಕೋಮು ವೈಷಮ್ಯ ಇರುವ ಕಡೆಗಳಲ್ಲಿ ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪನೆ ಮಾಡುತ್ತೇವೆ. ಅದರ ರೂಪುರೇಷೆ ಬಗ್ಗೆ ಕಮಿಷನರ್ ತಯಾರಿಸುತ್ತಾರೆ. ಇದರ ಮುಖ್ಯ ಉದ್ದೇಶ ನೈತಿಕ ಪೊಲೀಸ್‌ಗಿರಿ ಹತ್ತಿಕ್ಕುವುದು. ಮೊದಲಿಗೆ ಮಂಗಳೂರು ಕಮಿಷನರ್ ವ್ಯಾಪ್ತಿಯಲ್ಲಿ ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪನೆ ಮಾಡುತ್ತೇವೆ. ಇಲ್ಲಿ ಯಶಸ್ವಿಯಾದರೆ ಇಡೀ ರಾಜ್ಯದಲ್ಲಿ ವಿಸ್ತರಣೆ ಮಾಡುತ್ತೇವೆ ಎಂದು ಅವರು ನುಡಿದರು.
ಬಿಜೆಪಿ ಆಡಳಿತದಲ್ಲಿ ಮತೀಯ ಕೊಲೆಗಳು ನಡೆದಾಗ ಪರಿಹಾರ ನೀಡುವಲ್ಲಿ ತಾರತಮ್ಯವಾಗಿದೆ. ಈ ತಾರತಮ್ಯವನ್ನು ಸರಿಪಡಿಸಲು ನಿರ್ಧರಿಸಲಾಗಿದೆ.‌ ಹತ್ಯೆಗೀಡಾದ ಫಾಝಿಲ್, ಮಸೂದ್ ಮತ್ತು ಜಲೀಲ್ ಕುಟುಂಬಗಳಿಗೆ ಪರಿಹಾರ ಕೊಡುವ ಬಗ್ಗೆ ಶೀಘ್ರ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಗೃಹ ಸಚಿವರು ಹೇಳಿದರು.
ಯುವ ಸಮೂಹದಲ್ಲಿ ಡ್ರಗ್ಸ್ ಗೆ ಬಲಿಯಾಗಿದೆ. ಡ್ರಗ್ಸ್ ದಂಧೆ ತಡೆಯೋಕೆ ಆಗದ ರೀತಿಯಲ್ಲಿ ಬೆಳೆಯುತ್ತಿದೆ. ಆಗಸ್ಟ್ 15ರೊಳಗೆ ಕರಾವಳಿಯಲ್ಲಿ ಯಾವುದೇ ಡ್ರಗ್ಸ್ ಸಿಗದಂತೆ ಕ್ರಮ ತೆಗೆದುಕೊಳ್ಳಲು ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ ಎಂದರು.
ಸರ್ವ ಜನಾಂಗದ ಶಾಂತಿಯ ತೋಟ ಎಂದು ಪ್ರಣಾಳಿಕೆ ಭರವಸೆ ಕೊಟ್ಟಿದ್ದೇವೆ. ಶಾಂತಿಯ ತೋಟಕ್ಕೆ ತೊಂದರೆ ಮಾಡುವ ಕೆಲಸ ಇತ್ತೀಚಿನ ದಿನಗಳಲ್ಲಿ ಅಲ್ಲಲ್ಲಿ ನಡೀತಿದೆ. ನಮಗೆ ಕೋಮು ಸಾಮರಸ್ಯ ಇರಬೇಕು. ಯಾರು ಪ್ರಚೋದನೆ ಮಾಡುತ್ತಾರೋ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲು ನಮ್ಮ ಬಳಿ ಕಾನೂನುಗಳಿವೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು