8:57 PM Sunday15 - February 2026
ಬ್ರೇಕಿಂಗ್ ನ್ಯೂಸ್
ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ!

ಇತ್ತೀಚಿನ ಸುದ್ದಿ

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮಣಿಸಲು ಗೇಮ್ ಪ್ಲಾನ್ ಸಿದ್ದವಾಗುತ್ತಿದೆಯೇ?: ಜೆಡಿಎಸ್ – ಬಿಜೆಪಿಯ ರಣತಂತ್ರ ಏನು?

07/06/2023, 10:25

ಅಶೋಕ್ ಕಲ್ಲಡ್ಕ ಮಂಗಳೂರು
ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ರಾಜ್ಯ ವಿಧಾನಸಭೆ ಚುನಾವಣೆಯ ಬಳಿಕ ಮತ್ತೊಂದು ರಾಜಕೀಯ ಧ್ರುವೀಕರಣಕ್ಕೆ ವೇದಿಕೆ ಸಿದ್ಧವಾಗುತ್ತಿದೆ. ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿದ ಬಿಜೆಪಿ ಹಾಗೂ ಪಾತಾಳಕ್ಕೆ ಕುಸಿದ ಜೆಡಿಎಸ್ ಹೊಸ ಗೇಮ್ ಪ್ಲಾನ್ ಸಿದ್ದಪಡಿಸುತ್ತಿದೆ. ಮುಂಬರುವ ಲೋಕಸಭೆ ಚುನಾವಣೆಗಾಗಿ ಈ ಮೆಗಾ ಡೀಲ್ ತಯಾರಿಯಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಕಳೆದ ಲೋಕಸಭೆ ಚುನಾವಣೆಯಲ್ಲಿ 25 ಕ್ಷೇತ್ರಗಳನ್ನು ಬಾಚಿಕೊಂಡಿದ್ದ ಬಿಜೆಪಿ ಈ ಬಾರಿ ಕನಿಷ್ಠ 20 ಸೀಟುಗಳನ್ನಾದರೂ ಉಳಿಸಿಕೊಳ್ಳುವ ಟಾರ್ಗೆಟ್ ಹಾಕಿಕೊಂಡಿದೆ. ಅದೇ ರೀತಿ ವಿಧಾನಸಭೆ ಚುನಾವಣೆಯಲ್ಲಿ ಹಳೆ ಮೈಸೂರು ಭಾಗದಲ್ಲೇ ಕುಸಿತ ಕಂಡ ಜೆಡಿಎಸ್ ಗೆ
ತನ್ನ ಅಸ್ತಿತ್ವ ಉಳಿಸಿಕೊಳ್ಳುವುದು ದೊಡ್ಡ ಸವಾಲಾಗಿದೆ. ಜೆಡಿಎಸ್ ತನ್ನ ಮಾನ ಉಳಿಸಿಕೊಳ್ಳಬೇಕಾದರೆ ಕನಿಷ್ಠ 5 ಲೋಕಸಭೆ ಕ್ಷೇತ್ರಗಳನ್ನು ಗೆಲ್ಲಬೇಕಾಗಿದೆ. ಆದರೆ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರ ಜೋಡೆತ್ತಿನ ರಾಜ್ಯ ಸರಕಾರದ ಮುಂದೆ ಬಿಜೆಪಿಯಾಗಲಿ, ಜೆಡಿಎಸ್ ಆಗಲಿ ತನ್ನ ಟಾರ್ಗೆಟ್ ಮುಟ್ಟುವುದು ಅಷ್ಟು ಸುಲಭದ ಮಾತಲ್ಲ. ಪ್ರಧಾನಿ ಮೋದಿ ವರ್ಚಸ್ಸು, ಹಿಂದುತ್ವ ವರ್ಕ್ ಔಟ್ ಆಗೊಲ್ಲ ಎಂಬುದು ಈಗಾಗಲೇ ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಮಣಿಸಲು ಹೊಸ ಪ್ಲಾನ್ ಸಿದ್ಧವಾಗಿದೆ.
ಲೋಕಸಭೆ ಚುನಾವಣೆಗೆ ಮೈತ್ರಿ ಮಾಡಿಕೊಂಡು ಕಾಂಗ್ರೆಸ್ ವಿರುದ್ಧ ಗೆಲುವು ಸಾಧಿಸಲು ಜೆಡಿಎಸ್ ನಾಯಕ ಕುಮಾರಸ್ವಾಮಿ ಹೊಸ ಪ್ಲಾನ್ ಸಿದ್ದಪಡಿಸಿದ್ದಾರೆ ಎಂಬ ಮಾಹಿತಿ ರಿಪೋರ್ಟರ್ ಕರ್ನಾಟಕಕ್ಕೆ ವಿಶ್ವಸನೀಯ ಮೂಲಗಳಿಂದ ಗೊತ್ತಾಗಿದೆ. ಕುಮಾರಸ್ವಾಮಿ ಅವರು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಜತೆ ಈ ಕುರಿತು ಒಂದು ಸುತ್ತಿನ ಮಾತುಕತೆ ಕೂಡ ನಡೆಸಿದ್ದಾರೆ ಎನ್ನಲಾಗಿದೆ. ಇದರ ಪ್ರಕಾರ ರಾಜ್ಯದ ಓಟ್ಟು 28 ಕ್ಷೇತ್ರಗಳ ಪೈಕಿ ಕನಿಷ್ಠ 5 ಕ್ಷೇತ್ರಗಳನ್ನು ಜೆಡಿಎಸ್ ಗೆ ಬಿಟ್ಟುಕೊಡಬೇಕು. ಉಳಿದ ಕಡೆ ಜೆಡಿಎಸ್ , ಬಿಜೆಪಿ ಅಭ್ಯರ್ಥಿಗಳಿಗೆ ಬೆಂಬಲಿಸುವುದು ಆಗಿದೆ. ಈ ವಿಷಯದಲ್ಲಿ ಕುಮಾರಸ್ವಾಮಿ ಮತ್ತು ಬಿ.ಎಲ್. ಸಂತೋಷ್ ಸಹಮತಕ್ಕೆ ಬಂದಿದ್ದಾರೆ. ಹಾಗೆ ಚೆಂಡನ್ನು ಬಿಜೆಪಿ ಹೈಕಮಾಂಡ್ ಅಂಗಳಕ್ಕೆ ತಳ್ಳಿದೆ. ಇನ್ನು ಕುಮಾರಸ್ವಾಮಿ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ಗೃಹ ಸಚಿವ ಅಮಿತ್ ಶಾ ಅವರ ಜತೆ ಮಾತುಕತೆ ನಡೆಸುವ ಸಾಧ್ಯತೆಗಳಿವೆ. ರಾಜಕೀಯದಲ್ಲಿ ಏನು ಬೇಕಾದರೂ ನಡೆಯಬಹುದು ಎನ್ನುವುದು ಬರೇ ಮಾತಲ್ಲ, ವಾಸ್ತವ ಕೂಡ ಹೌದು.

ಇತ್ತೀಚಿನ ಸುದ್ದಿ

ಜಾಹೀರಾತು