2:20 AM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಮಂಗಳೂರು ವಿವಿ ಕಾಲೇಜ್‌ನಲ್ಲಿ ‘ಅಟಿಲ್-೨೦೨೩’ ಆಹಾರ ಮೇಳ

08/06/2023, 10:14

ಚಿತ್ರ/ವರದಿ: ಅನುಷ್ ಪಂಡಿತ್ ಮಂಗಳೂರು
ಮಂಗಳೂರು (Reporter Karnataka)ದಕ್ಷಿಣ ಕನ್ನಡದ ಪ್ರವಾಸೋದ್ಯಮ,ಆಹಾರ ಮತ್ತು ಸಂಸ್ಕೃತಿ ಒಂದಕ್ಕೊಂದು ಸಂಬಂಧಿಸಿದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ವಿಶೇಷ ಅಧಿಕಾರಿ ಡಾ.ಶೇಖರ್ ನಾಯ್ಕ್ ಹೇಳಿದರು.
ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಬಿ.ಬಿ.ಎ ಮತ್ತು ಬಿ.ಎ ಪ್ರವಾಸೋದ್ಯಮ ವಿಭಾಗದ ವತಿಯಿಂದ ಇತ್ತೀಚೆಗೆ ನಡೆದ ಆಹಾರ ಮೇಳೈ- “ಅಟಿಲ್ 2K23” ಇದರ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.


ಖಂಡಿಗೆ ಬೀಡಿನ ಶ್ರೀ ಧರ್ಮ ಅರಸು ಉಲ್ಲಾಯ ಕ್ಷೇತ್ರದ ಗಡಿ ಪ್ರಧಾನರಾದ ಶ್ರೀ ಆದಿತ್ಯ ಮುಕ್ಕಾಲ್ದಿ ಅವರು ಆಹಾರ ಮೇಳವನ್ನು ಉದ್ಘಾಟಿಸಿದರು.




ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಿನ್ಸಿಪಾಲ್ ಡಾ.ಅನಸೂಯ ರೈ ವಹಿಸಿದ್ದರು. ಬಿ.ಬಿ.ಎ ವಿಭಾಗ ಮುಖ್ಯಸ್ಥ ಡಾ. ಯತೀಶ್ ಕುಮಾರ್ ಹಾಗು ಬಿ.ಎ ಪ್ರವಾಸೋದ್ಯಮ ವಿಭಾಗದ ಮುಖ್ಯಸ್ಥೆ ಡಾ.ಮೀನಾಕ್ಷಿ ಎಂ.ಎಂ, ಉಪನ್ಯಾಸಕರಾದ ಶ್ರೀರಾಜ್ ಬಿ ಎಸ್, ಪರಿಣಿತಾ ಶೆಟ್ಟಿ, ರೊವೀನಾ ಸೋನ್ಸ್, ಸುಹಾನಾ ಖುಲ್ಸಂ ,
ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಡಾ.ನಾಗರತ್ನ ಕೆ.ಎ ಮೊದಲಾದವರು ಉಪಸ್ಥಿತರಿದ್ದರು.



ಆಹಾರ ಮೇಳದಲ್ಲಿ ಸುಮಾರು 65 ಕ್ಕೂ ಅಧಿಕ ಬಗೆಯ ಆಹಾರ ಖಾದ್ಯಗಳು ಪ್ರದರ್ಶನಕ್ಕಿದ್ದವು. ವಿದ್ಯಾರ್ಥಿಗಳಿಗೆ ತುಳುನಾಡ್ ಕೇಟರರ್ಸ್ ಸಾಥ್ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು