6:29 PM Sunday27 - July 2025
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಭಾರೀ ಮಳೆ: ತುಂಬಿ ತುಳುಕುತ್ತಿರುವ ಕಾವೇರಿ, ಕನ್ನಿಕೆ, ಸುಜ್ಜ್ಯತಿ ನದಿಗಳು; ತ್ರಿವೇಣಿ… ಕೊಡಗು: ಮಳೆ ಹಾನಿ ಪ್ರದೇಶಗಳಿಗೆ ಕಂದಾಯ ಸಚಿವ ಕೃಷ್ಣಬೈರೇ ಗೌಡ ಭೇಟಿ; ಪರಿಹಾರ… BJP Leader | ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ… ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ : ಸಿಎಂ… Mangaluru | ಸಂಸದ ತೇಜಸ್ವೀ ಸೂರ್ಯ ರಿಂದ ಲಾಲ್‌ಬಾಗ್‌ನಲ್ಲಿ ವೀಲ್‌ಚೇರ್ ಸ್ನೇಹಿ ಶೌಚಾಲಯ… Chikkamagaluru | ಕಳಸ: ಭದ್ರಾ ನದಿಯಲ್ಲಿ ಸತತ 23 ತಾಸುಗಳ ಶೋಧ ಬಳಿಕ… ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಕಡತ ಕಳವು ಪ್ರಕರಣ: ಗುತ್ತಿಗೆ ಸಿಬ್ಬಂದಿ ಕೈಚಳಕ ಸಿಸಿಟಿವಿ… Kodagu | ಕೊಡಗಿನಲ್ಲಿ ಮತ್ತಷ್ಟು ಬಿರುಸುಗೊಂಡ ಮಳೆ: ಹಲವೆಡೆ ರಸ್ತೆಗೆ ಉರುಳಿದ ಮರಗಳು;… ಕಳಸ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಭದ್ರಾ ನದಿಗೆ ಹಾರಿದ ಜೀಪ್; 23ರ… ಮೈಸೂರು ದಸರಾ: ಜಂಬೂ ಸವಾರಿಯ ಮೊದಲ ಹಂತದ ಸಾಕಾನೆಗಳ ಪಟ್ಟಿ ಬಿಡುಗಡೆ

ಇತ್ತೀಚಿನ ಸುದ್ದಿ

ಮಂಗಳೂರು ವಿವಿ ಕಾಲೇಜ್‌ನಲ್ಲಿ ‘ಅಟಿಲ್-೨೦೨೩’ ಆಹಾರ ಮೇಳ

08/06/2023, 10:14

ಚಿತ್ರ/ವರದಿ: ಅನುಷ್ ಪಂಡಿತ್ ಮಂಗಳೂರು
ಮಂಗಳೂರು (Reporter Karnataka)ದಕ್ಷಿಣ ಕನ್ನಡದ ಪ್ರವಾಸೋದ್ಯಮ,ಆಹಾರ ಮತ್ತು ಸಂಸ್ಕೃತಿ ಒಂದಕ್ಕೊಂದು ಸಂಬಂಧಿಸಿದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ವಿಶೇಷ ಅಧಿಕಾರಿ ಡಾ.ಶೇಖರ್ ನಾಯ್ಕ್ ಹೇಳಿದರು.
ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಬಿ.ಬಿ.ಎ ಮತ್ತು ಬಿ.ಎ ಪ್ರವಾಸೋದ್ಯಮ ವಿಭಾಗದ ವತಿಯಿಂದ ಇತ್ತೀಚೆಗೆ ನಡೆದ ಆಹಾರ ಮೇಳೈ- “ಅಟಿಲ್ 2K23” ಇದರ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.


ಖಂಡಿಗೆ ಬೀಡಿನ ಶ್ರೀ ಧರ್ಮ ಅರಸು ಉಲ್ಲಾಯ ಕ್ಷೇತ್ರದ ಗಡಿ ಪ್ರಧಾನರಾದ ಶ್ರೀ ಆದಿತ್ಯ ಮುಕ್ಕಾಲ್ದಿ ಅವರು ಆಹಾರ ಮೇಳವನ್ನು ಉದ್ಘಾಟಿಸಿದರು.




ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಿನ್ಸಿಪಾಲ್ ಡಾ.ಅನಸೂಯ ರೈ ವಹಿಸಿದ್ದರು. ಬಿ.ಬಿ.ಎ ವಿಭಾಗ ಮುಖ್ಯಸ್ಥ ಡಾ. ಯತೀಶ್ ಕುಮಾರ್ ಹಾಗು ಬಿ.ಎ ಪ್ರವಾಸೋದ್ಯಮ ವಿಭಾಗದ ಮುಖ್ಯಸ್ಥೆ ಡಾ.ಮೀನಾಕ್ಷಿ ಎಂ.ಎಂ, ಉಪನ್ಯಾಸಕರಾದ ಶ್ರೀರಾಜ್ ಬಿ ಎಸ್, ಪರಿಣಿತಾ ಶೆಟ್ಟಿ, ರೊವೀನಾ ಸೋನ್ಸ್, ಸುಹಾನಾ ಖುಲ್ಸಂ ,
ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಡಾ.ನಾಗರತ್ನ ಕೆ.ಎ ಮೊದಲಾದವರು ಉಪಸ್ಥಿತರಿದ್ದರು.



ಆಹಾರ ಮೇಳದಲ್ಲಿ ಸುಮಾರು 65 ಕ್ಕೂ ಅಧಿಕ ಬಗೆಯ ಆಹಾರ ಖಾದ್ಯಗಳು ಪ್ರದರ್ಶನಕ್ಕಿದ್ದವು. ವಿದ್ಯಾರ್ಥಿಗಳಿಗೆ ತುಳುನಾಡ್ ಕೇಟರರ್ಸ್ ಸಾಥ್ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು