4:29 AM Saturday7 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ಕೆಎಸ್ಸಾರ್ಟಿಸಿ ಪುತ್ತೂರು ಡಿಪೋಗೆ ಹೆಚ್ಚುವರಿ ಬಸ್ ಮತ್ತು ಸಿಬ್ಬಂದಿ ನೇಮಕ ಮಾಡಿ; ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಗೆ ಶಾಸಕ ಅಶೋಕ್ ರೈ ಮನವಿ

08/06/2023, 20:51

ಪುತ್ತೂರು(reporterkarnataka.com): ಕೆಎಸ್ಸಾರ್ಟಿಸಿ ಪುತ್ತೂರು ಡಿಪೋಗೆ ಹೆಚ್ಚುವರಿ ಬಸ್ಸು, ಚಾಲನೆ ಮತ್ತು ತಾಂತ್ರಿಕ ಸಿಬ್ಬಂದಿಗಳನ್ನು ನೇಮಕ ಮಾಡುವಂತೆ ರಾಜ್ಯ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರಿಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ ಮಾಡಿದ್ದಾರೆ.
ಬೆಂಗಳೂರಿನಲ್ಲಿರುವ ಸಚಿವರ ಕಚೇರಿಗೆ ತೆರಳಿದ ಶಾಸಕರು ಈ ಹಿಂದೆ ಪುತ್ತೂರು ಘಟಕ ವ್ಯಾಪ್ತಿಯಲ್ಲಿ ಸರಕಾರಿ ಬಸ್ಸುಗಳ ಕೊರತೆ ಇರಲಿಲ್ಲ. ಇದರಿಂದ ಗ್ರಾಮೀಣ ಭಾಗದ ಜನರಿಗೆ, ವಿದ್ಯಾರ್ಥಿಗಳಿಗೆ ಮತ್ತು ಕಾರ್ಮಿಕರಿಗೆ ತುಂಬಾ ಪ್ರಯೋಜನವಾಗುತ್ತಿತ್ತು. ಆದರೆ ಕೋವಿಡ್ ಲಾಕ್‌ಡೌನ್ ನಂತರ ಬಸ್ಸುಗಳ ಓಡಾಟವನ್ನು ಕಡಿತಗೊಳಿಸಿರುವ ಕಾರಣ ಗ್ರಾಮೀಣ ಭಾಗದಲ್ಲಿ ಬಸ್ಸುಗಳ ಕೊರತೆ ಇದೆ. ಪುತ್ತೂರು ವಿಧಾನಸಭಾ ವ್ಯಾಪ್ತಿಯ ಬಹುತೇಕ ಗ್ರಾಮೀಣ ಭಾಗಗಳಲ್ಲಿ ಬಸ್ಸುಗಳ ಕೊರತೆಯಿಂದ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗಿದೆ. ಬಸ್ಸುಗಳಲ್ಲಿ ಚಾಲನಾ ಸಿಬಂದಿ ಮತ್ತು ತಾಂತ್ರಿಕ ಸಿಬ್ಬಂದಿಗಳ ಕೊರತೆಯೂ ಇದ್ದು . ಹೆಚ್ಚಿನ ಚಾಲಕರು ಮತ್ತು ಸಿಬಂದಿಗಳು ವರ್ಗಾವಣೆಯಾಗಿ ಬೇರೆಡೆಗೆ ತೆರಳಿದ್ದು ಇದರಿಂದಾಗಿ ಪುತ್ತೂರು ಡಿಪೋದಲ್ಲಿ ತೀವ್ರ ತರದ ಆಡಳಿತಾತ್ಮಕ ಸಮಸ್ಯೆಗಳು ಉಂಟಾಗಿದ್ದು . ಪುತ್ತೂರು ಡಿಪೋಗೆ ಸಲ್ಲಿಸಲಾಗಿದ್ದ ಬೇಡಿಕೆಯನ್ನು ಪರಿಗಣಿಸಿ ಸಮಸ್ಯೆಯನ್ನು ಬಗೆಹರಿಸುವಂತೆ ಸಚಿವರಿಗೆ ಶಾಸಕರು ಮನವಿ ಮಾಡಿದ್ದಾರೆ.
ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರಿಗೂ ಶಾಸಕರು ಮನವಿ ಸಲ್ಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು