1:50 PM Friday19 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಬಿಸಿಲಿನ ಝಳಕ್ಕೆ ಕೊತಕೊತ ಕುದಿಯುತ್ತಿದ್ದ ಮಂಗಳೂರಿನಲ್ಲಿ ಬಿರುಸಿನ ಮಳೆ ಆರಂಭ: ಸ್ಮಾರ್ಟ್ ಸಿಟಿಯ ರಸ್ತೆಯೇ ತೋಡು!

10/06/2023, 11:49

ಮಂಗಳೂರು(reporterkarnataka.com): ಕಾದ ಬಣಲೆಯಂತಾಗಿದ್ದ ಕರಾವಳಿ ಜಿಲ್ಲೆಗಳಲ್ಲಿ ಕೊನೆಗೂ ಮಳೆ ಅಬ್ಬರ ಶುರುವಾಗಿದೆ. ಮಂಗಳೂರು ಸೇರಿದಂತೆ ದ.ಕ. ಜಿಲ್ಲೆಯಲ್ಲಿ ಶನಿವಾರ ಬೆಳಗ್ಗಿನಿಂದಲೇ ಮೋಡ ಕವಿದ ವಾತಾವರಣ ನೆಲೆಸಿದ್ದು, ಗುಡುಗು ಸಹಿತ ಅಬ್ಬರದ ಮಳೆ ಆರಂಭವಾಗಿದೆ.
ಮಂಗಳೂರಿನಲ್ಲಿ ಬಿದ್ದ ಮೊದಲ ಸಾಧಾರಣ ಮಳೆಗೆ ರಸ್ತೆಯಲ್ಲಿ ತೋಡಿನ ತರಹ ನೀರು ಹರಿಯಲಾರಂಭಿಸಿದೆ. ಇದು ಹಂಪನಕಟ್ಟೆ, ಸ್ಟೇಟ್ ಬ್ಯಾಂಕ್, ಲಾಲ್ ಬಾಗ್ ಪ್ರದೇಶಗಳಿಗೆ ಮಾತ್ರ ಸೀಮಿತವಾಗಿರದೆ, ಇಂತಹ ರಮಣೀಯ ದೃಶ್ಯವನ್ನು ನಗರದ 60 ವಾರ್ಡ್ ಗಳ ಬಹುತೇಕ ಗಲ್ಲಿ ಗಲ್ಲಿಗಳಲ್ಲಿಯೂ ಕಂಡು ಕಣ್ಣು ತುಂಬಿಸಿಕೊಳ್ಳಬಹುದು.
ಮಳೆ ನೀರು ಹರಿದು ಹೋಗಲು ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದಿರುವುದು, ಚರಂಡಿ ಇದ್ದ ಕಡೆ ಕಟ್ಟಡ ಕಾಮಗಾರಿ, ರಸ್ತೆ ಕಾಂಕ್ರೀಟಿಕರಣ ಮುಂತಾದ ಕಾರಣಗಳಿಂದ ಚರಂಡಿ ಬ್ಲಾಕ್ ಆಗಿರುವುದು, ಇನ್ನೂ ಹಲವು ಕಡೆ ತೋಡು ಸ್ವಚ್ಛತೆ ಸಮರ್ಪಕವಾಗಿ ನಡೆಯದಿರುವುದು ಇಲ್ಲಿನ ಮಳೆಗಾಲದ ಸಮಸ್ಯೆ ಹೊರತು ಬಿರುಸಿನ ಮಳೆ ಬೀಳುವುದು ಕಾರಣವಲ್ಲ. ಇದೀಗ ಮುಂಗಾರುನೊಂದಿಗೆ ಅರಬ್ಬಿ ಸಮುದ್ರದ ಆಗ್ನೇಯ ಭಾಗದಲ್ಲಿ ಉಂಟಾಗಿದ್ದ ವಾಯುಭಾರ ಕುಸಿತವು ಚಂಡಮಾರುತವಾಗಿ ರೂಪಾಂತರಗೊಂಡಿದೆ. ಗೋವಾದಿಂದ ಸುಮಾರು 920 ಕಿಮೀ ದೂರದಲ್ಲಿ ಚಂಡಮಾರುತವು ಕೇಂದ್ರೀಕೃತವಾಗಿದೆ. ಮುಂಬೈನಿಂದ ನೈಋತ್ಯಕ್ಕೆ 1050 ಕಿ.ಮೀ, ಪೋರಬಂದರ್‌ನಿಂದ ದಕ್ಷಿಣ-ನೈಋತ್ಯಕ್ಕೆ 1130 ಕಿ.ಮೀ ದೂರದಲ್ಲಿ ಚಂಡಮಾರುತವಿದೆ. ಚಂಡಮಾರುತಕ್ಕೆ ಬಿಪರ್ಜೋಯ್'(Beeparjoy) ಎಂಬ ಹೆಸರನ್ನು ಬಾಂಗ್ಲಾದೇಶ ನೀಡಿದೆ. ಇದರಿಂದ ಮುಂದಿನ ದಿನಗಳಲ್ಲಿ ಮಳೆ ಇನ್ನಷ್ಡು ಬಿರುಸುಗೊಳ್ಳುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು