5:43 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಬಿಸಿಲಿನ ಝಳಕ್ಕೆ ಕೊತಕೊತ ಕುದಿಯುತ್ತಿದ್ದ ಮಂಗಳೂರಿನಲ್ಲಿ ಬಿರುಸಿನ ಮಳೆ ಆರಂಭ: ಸ್ಮಾರ್ಟ್ ಸಿಟಿಯ ರಸ್ತೆಯೇ ತೋಡು!

10/06/2023, 11:49

ಮಂಗಳೂರು(reporterkarnataka.com): ಕಾದ ಬಣಲೆಯಂತಾಗಿದ್ದ ಕರಾವಳಿ ಜಿಲ್ಲೆಗಳಲ್ಲಿ ಕೊನೆಗೂ ಮಳೆ ಅಬ್ಬರ ಶುರುವಾಗಿದೆ. ಮಂಗಳೂರು ಸೇರಿದಂತೆ ದ.ಕ. ಜಿಲ್ಲೆಯಲ್ಲಿ ಶನಿವಾರ ಬೆಳಗ್ಗಿನಿಂದಲೇ ಮೋಡ ಕವಿದ ವಾತಾವರಣ ನೆಲೆಸಿದ್ದು, ಗುಡುಗು ಸಹಿತ ಅಬ್ಬರದ ಮಳೆ ಆರಂಭವಾಗಿದೆ.
ಮಂಗಳೂರಿನಲ್ಲಿ ಬಿದ್ದ ಮೊದಲ ಸಾಧಾರಣ ಮಳೆಗೆ ರಸ್ತೆಯಲ್ಲಿ ತೋಡಿನ ತರಹ ನೀರು ಹರಿಯಲಾರಂಭಿಸಿದೆ. ಇದು ಹಂಪನಕಟ್ಟೆ, ಸ್ಟೇಟ್ ಬ್ಯಾಂಕ್, ಲಾಲ್ ಬಾಗ್ ಪ್ರದೇಶಗಳಿಗೆ ಮಾತ್ರ ಸೀಮಿತವಾಗಿರದೆ, ಇಂತಹ ರಮಣೀಯ ದೃಶ್ಯವನ್ನು ನಗರದ 60 ವಾರ್ಡ್ ಗಳ ಬಹುತೇಕ ಗಲ್ಲಿ ಗಲ್ಲಿಗಳಲ್ಲಿಯೂ ಕಂಡು ಕಣ್ಣು ತುಂಬಿಸಿಕೊಳ್ಳಬಹುದು.
ಮಳೆ ನೀರು ಹರಿದು ಹೋಗಲು ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದಿರುವುದು, ಚರಂಡಿ ಇದ್ದ ಕಡೆ ಕಟ್ಟಡ ಕಾಮಗಾರಿ, ರಸ್ತೆ ಕಾಂಕ್ರೀಟಿಕರಣ ಮುಂತಾದ ಕಾರಣಗಳಿಂದ ಚರಂಡಿ ಬ್ಲಾಕ್ ಆಗಿರುವುದು, ಇನ್ನೂ ಹಲವು ಕಡೆ ತೋಡು ಸ್ವಚ್ಛತೆ ಸಮರ್ಪಕವಾಗಿ ನಡೆಯದಿರುವುದು ಇಲ್ಲಿನ ಮಳೆಗಾಲದ ಸಮಸ್ಯೆ ಹೊರತು ಬಿರುಸಿನ ಮಳೆ ಬೀಳುವುದು ಕಾರಣವಲ್ಲ. ಇದೀಗ ಮುಂಗಾರುನೊಂದಿಗೆ ಅರಬ್ಬಿ ಸಮುದ್ರದ ಆಗ್ನೇಯ ಭಾಗದಲ್ಲಿ ಉಂಟಾಗಿದ್ದ ವಾಯುಭಾರ ಕುಸಿತವು ಚಂಡಮಾರುತವಾಗಿ ರೂಪಾಂತರಗೊಂಡಿದೆ. ಗೋವಾದಿಂದ ಸುಮಾರು 920 ಕಿಮೀ ದೂರದಲ್ಲಿ ಚಂಡಮಾರುತವು ಕೇಂದ್ರೀಕೃತವಾಗಿದೆ. ಮುಂಬೈನಿಂದ ನೈಋತ್ಯಕ್ಕೆ 1050 ಕಿ.ಮೀ, ಪೋರಬಂದರ್‌ನಿಂದ ದಕ್ಷಿಣ-ನೈಋತ್ಯಕ್ಕೆ 1130 ಕಿ.ಮೀ ದೂರದಲ್ಲಿ ಚಂಡಮಾರುತವಿದೆ. ಚಂಡಮಾರುತಕ್ಕೆ ಬಿಪರ್ಜೋಯ್'(Beeparjoy) ಎಂಬ ಹೆಸರನ್ನು ಬಾಂಗ್ಲಾದೇಶ ನೀಡಿದೆ. ಇದರಿಂದ ಮುಂದಿನ ದಿನಗಳಲ್ಲಿ ಮಳೆ ಇನ್ನಷ್ಡು ಬಿರುಸುಗೊಳ್ಳುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು