3:46 PM Sunday26 - April 2026
ಬ್ರೇಕಿಂಗ್ ನ್ಯೂಸ್
ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ?

ಇತ್ತೀಚಿನ ಸುದ್ದಿ

ಬಿಸಿಲಿನ ಝಳಕ್ಕೆ ಕೊತಕೊತ ಕುದಿಯುತ್ತಿದ್ದ ಮಂಗಳೂರಿನಲ್ಲಿ ಬಿರುಸಿನ ಮಳೆ ಆರಂಭ: ಸ್ಮಾರ್ಟ್ ಸಿಟಿಯ ರಸ್ತೆಯೇ ತೋಡು!

10/06/2023, 11:49

ಮಂಗಳೂರು(reporterkarnataka.com): ಕಾದ ಬಣಲೆಯಂತಾಗಿದ್ದ ಕರಾವಳಿ ಜಿಲ್ಲೆಗಳಲ್ಲಿ ಕೊನೆಗೂ ಮಳೆ ಅಬ್ಬರ ಶುರುವಾಗಿದೆ. ಮಂಗಳೂರು ಸೇರಿದಂತೆ ದ.ಕ. ಜಿಲ್ಲೆಯಲ್ಲಿ ಶನಿವಾರ ಬೆಳಗ್ಗಿನಿಂದಲೇ ಮೋಡ ಕವಿದ ವಾತಾವರಣ ನೆಲೆಸಿದ್ದು, ಗುಡುಗು ಸಹಿತ ಅಬ್ಬರದ ಮಳೆ ಆರಂಭವಾಗಿದೆ.
ಮಂಗಳೂರಿನಲ್ಲಿ ಬಿದ್ದ ಮೊದಲ ಸಾಧಾರಣ ಮಳೆಗೆ ರಸ್ತೆಯಲ್ಲಿ ತೋಡಿನ ತರಹ ನೀರು ಹರಿಯಲಾರಂಭಿಸಿದೆ. ಇದು ಹಂಪನಕಟ್ಟೆ, ಸ್ಟೇಟ್ ಬ್ಯಾಂಕ್, ಲಾಲ್ ಬಾಗ್ ಪ್ರದೇಶಗಳಿಗೆ ಮಾತ್ರ ಸೀಮಿತವಾಗಿರದೆ, ಇಂತಹ ರಮಣೀಯ ದೃಶ್ಯವನ್ನು ನಗರದ 60 ವಾರ್ಡ್ ಗಳ ಬಹುತೇಕ ಗಲ್ಲಿ ಗಲ್ಲಿಗಳಲ್ಲಿಯೂ ಕಂಡು ಕಣ್ಣು ತುಂಬಿಸಿಕೊಳ್ಳಬಹುದು.
ಮಳೆ ನೀರು ಹರಿದು ಹೋಗಲು ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದಿರುವುದು, ಚರಂಡಿ ಇದ್ದ ಕಡೆ ಕಟ್ಟಡ ಕಾಮಗಾರಿ, ರಸ್ತೆ ಕಾಂಕ್ರೀಟಿಕರಣ ಮುಂತಾದ ಕಾರಣಗಳಿಂದ ಚರಂಡಿ ಬ್ಲಾಕ್ ಆಗಿರುವುದು, ಇನ್ನೂ ಹಲವು ಕಡೆ ತೋಡು ಸ್ವಚ್ಛತೆ ಸಮರ್ಪಕವಾಗಿ ನಡೆಯದಿರುವುದು ಇಲ್ಲಿನ ಮಳೆಗಾಲದ ಸಮಸ್ಯೆ ಹೊರತು ಬಿರುಸಿನ ಮಳೆ ಬೀಳುವುದು ಕಾರಣವಲ್ಲ. ಇದೀಗ ಮುಂಗಾರುನೊಂದಿಗೆ ಅರಬ್ಬಿ ಸಮುದ್ರದ ಆಗ್ನೇಯ ಭಾಗದಲ್ಲಿ ಉಂಟಾಗಿದ್ದ ವಾಯುಭಾರ ಕುಸಿತವು ಚಂಡಮಾರುತವಾಗಿ ರೂಪಾಂತರಗೊಂಡಿದೆ. ಗೋವಾದಿಂದ ಸುಮಾರು 920 ಕಿಮೀ ದೂರದಲ್ಲಿ ಚಂಡಮಾರುತವು ಕೇಂದ್ರೀಕೃತವಾಗಿದೆ. ಮುಂಬೈನಿಂದ ನೈಋತ್ಯಕ್ಕೆ 1050 ಕಿ.ಮೀ, ಪೋರಬಂದರ್‌ನಿಂದ ದಕ್ಷಿಣ-ನೈಋತ್ಯಕ್ಕೆ 1130 ಕಿ.ಮೀ ದೂರದಲ್ಲಿ ಚಂಡಮಾರುತವಿದೆ. ಚಂಡಮಾರುತಕ್ಕೆ ಬಿಪರ್ಜೋಯ್'(Beeparjoy) ಎಂಬ ಹೆಸರನ್ನು ಬಾಂಗ್ಲಾದೇಶ ನೀಡಿದೆ. ಇದರಿಂದ ಮುಂದಿನ ದಿನಗಳಲ್ಲಿ ಮಳೆ ಇನ್ನಷ್ಡು ಬಿರುಸುಗೊಳ್ಳುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು