12:47 PM Thursday17 - July 2025
ಬ್ರೇಕಿಂಗ್ ನ್ಯೂಸ್
ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:… ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ…

ಇತ್ತೀಚಿನ ಸುದ್ದಿ

ಬಿಸಿಲಿನ ಝಳಕ್ಕೆ ಕೊತಕೊತ ಕುದಿಯುತ್ತಿದ್ದ ಮಂಗಳೂರಿನಲ್ಲಿ ಬಿರುಸಿನ ಮಳೆ ಆರಂಭ: ಸ್ಮಾರ್ಟ್ ಸಿಟಿಯ ರಸ್ತೆಯೇ ತೋಡು!

10/06/2023, 11:49

ಮಂಗಳೂರು(reporterkarnataka.com): ಕಾದ ಬಣಲೆಯಂತಾಗಿದ್ದ ಕರಾವಳಿ ಜಿಲ್ಲೆಗಳಲ್ಲಿ ಕೊನೆಗೂ ಮಳೆ ಅಬ್ಬರ ಶುರುವಾಗಿದೆ. ಮಂಗಳೂರು ಸೇರಿದಂತೆ ದ.ಕ. ಜಿಲ್ಲೆಯಲ್ಲಿ ಶನಿವಾರ ಬೆಳಗ್ಗಿನಿಂದಲೇ ಮೋಡ ಕವಿದ ವಾತಾವರಣ ನೆಲೆಸಿದ್ದು, ಗುಡುಗು ಸಹಿತ ಅಬ್ಬರದ ಮಳೆ ಆರಂಭವಾಗಿದೆ.
ಮಂಗಳೂರಿನಲ್ಲಿ ಬಿದ್ದ ಮೊದಲ ಸಾಧಾರಣ ಮಳೆಗೆ ರಸ್ತೆಯಲ್ಲಿ ತೋಡಿನ ತರಹ ನೀರು ಹರಿಯಲಾರಂಭಿಸಿದೆ. ಇದು ಹಂಪನಕಟ್ಟೆ, ಸ್ಟೇಟ್ ಬ್ಯಾಂಕ್, ಲಾಲ್ ಬಾಗ್ ಪ್ರದೇಶಗಳಿಗೆ ಮಾತ್ರ ಸೀಮಿತವಾಗಿರದೆ, ಇಂತಹ ರಮಣೀಯ ದೃಶ್ಯವನ್ನು ನಗರದ 60 ವಾರ್ಡ್ ಗಳ ಬಹುತೇಕ ಗಲ್ಲಿ ಗಲ್ಲಿಗಳಲ್ಲಿಯೂ ಕಂಡು ಕಣ್ಣು ತುಂಬಿಸಿಕೊಳ್ಳಬಹುದು.
ಮಳೆ ನೀರು ಹರಿದು ಹೋಗಲು ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದಿರುವುದು, ಚರಂಡಿ ಇದ್ದ ಕಡೆ ಕಟ್ಟಡ ಕಾಮಗಾರಿ, ರಸ್ತೆ ಕಾಂಕ್ರೀಟಿಕರಣ ಮುಂತಾದ ಕಾರಣಗಳಿಂದ ಚರಂಡಿ ಬ್ಲಾಕ್ ಆಗಿರುವುದು, ಇನ್ನೂ ಹಲವು ಕಡೆ ತೋಡು ಸ್ವಚ್ಛತೆ ಸಮರ್ಪಕವಾಗಿ ನಡೆಯದಿರುವುದು ಇಲ್ಲಿನ ಮಳೆಗಾಲದ ಸಮಸ್ಯೆ ಹೊರತು ಬಿರುಸಿನ ಮಳೆ ಬೀಳುವುದು ಕಾರಣವಲ್ಲ. ಇದೀಗ ಮುಂಗಾರುನೊಂದಿಗೆ ಅರಬ್ಬಿ ಸಮುದ್ರದ ಆಗ್ನೇಯ ಭಾಗದಲ್ಲಿ ಉಂಟಾಗಿದ್ದ ವಾಯುಭಾರ ಕುಸಿತವು ಚಂಡಮಾರುತವಾಗಿ ರೂಪಾಂತರಗೊಂಡಿದೆ. ಗೋವಾದಿಂದ ಸುಮಾರು 920 ಕಿಮೀ ದೂರದಲ್ಲಿ ಚಂಡಮಾರುತವು ಕೇಂದ್ರೀಕೃತವಾಗಿದೆ. ಮುಂಬೈನಿಂದ ನೈಋತ್ಯಕ್ಕೆ 1050 ಕಿ.ಮೀ, ಪೋರಬಂದರ್‌ನಿಂದ ದಕ್ಷಿಣ-ನೈಋತ್ಯಕ್ಕೆ 1130 ಕಿ.ಮೀ ದೂರದಲ್ಲಿ ಚಂಡಮಾರುತವಿದೆ. ಚಂಡಮಾರುತಕ್ಕೆ ಬಿಪರ್ಜೋಯ್'(Beeparjoy) ಎಂಬ ಹೆಸರನ್ನು ಬಾಂಗ್ಲಾದೇಶ ನೀಡಿದೆ. ಇದರಿಂದ ಮುಂದಿನ ದಿನಗಳಲ್ಲಿ ಮಳೆ ಇನ್ನಷ್ಡು ಬಿರುಸುಗೊಳ್ಳುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು