11:38 AM Saturday18 - May 2024
ಬ್ರೇಕಿಂಗ್ ನ್ಯೂಸ್
ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,…

ಇತ್ತೀಚಿನ ಸುದ್ದಿ

ಕೋಮು ಸಂಘರ್ಷದ ಮಾತು ಬಿಡಿ, ಮಂಗಳೂರು ಅಭಿವೃದ್ಧಿ ಕಡೆ ಗಮನ ಕೊಡಿ: ಶಾಸಕ ವೇದವ್ಯಾಸ ಕಾಮತ್ ಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ತಿರುಗೇಟು

10/06/2023, 17:24

ಮಂಗಳೂರು(reporterkarnataka.com): ರಾಜ್ಯದಲ್ಲಿ ಮತ್ತೆ ಕೋಮು ಸಂಘರ್ಷ ವಾತಾವರಣ ಸೃಷ್ಟಿಯಾಗುವ ಭೀತಿ ಇದೆ ಎಂದು ಮಂಗಳೂರು ದಕ್ಷಿಣ ಶಾಸಕ ಡಿ.ವೇದವ್ಯಾಸ ಕಾಮತ್ ಜನತೆಯಲ್ಲಿ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರ ವಹಿಸಿಕೊಂಡ ಸಮಯದಿಂದ ಅಭಿವೃದ್ಧಿ ವಿಷಯ ಬಗ್ಗೆ ಯಾವುದೇ ಚಕಾರ ಎತ್ತದೆ, ಸುಖಾಸಮ್ಮನ್ನೆ ಆರೋಪ ಮಾಡುತ್ತಿದ್ದಾರೆ. ಇನ್ನೇನು ಮಳೆಗಾಲ ಆರಂಭವಾಗಲಿದ್ದು, ಅವರದ್ದೇ ಬಿಜೆಪಿ ನೇತೃತ್ವದ ಸರ್ಕಾರದ ಅವಧಿಯಲ್ಲಿ ಮಾಡಿದ ಎಡವಟ್ಟಿನಿಂದ ನಗರದಲ್ಲಿ ಪ್ರವಾಹ ಭೀತಿ ಎದುರಾಗಿದೆ. ಈ ಈ ಬಗ್ಗೆ ಮೊದಲು ಗಮನಹರಿಸಲಿ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಹೇಳಿದ್ದಾರೆ.
ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ರಾಜ್ಯಾದ್ಯಂತ ಜನತೆ ಕೋಮು ಸಾಮರಸ್ಯದಿಂದ ಬದುಕುತ್ತಿದ್ದಾರೆ. ಕಾಂಗ್ರೆಸ್‌ಗೂ ಸಂಸ್ಕೃತಿ, ಸಂಸ್ಕಾರದ ಬಗ್ಗೆ ಅರಿವು ಇದೆ. ಬಿಜೆಪಿವರು ಭಾವನಾತ್ಮಕವಾಗಿ ಜನತೆಯನ್ನು ಮರುಳು ಮಾಡುವುದನ್ನು ಕೈಬಿಡಲಿ ಎಂದು ಅವರು ನುಡಿದಿದ್ದಾರೆ.
ಭಾವನಾತ್ಮಕ ಮಾತುಗಳ ಮೂಲಕ ಜನತೆಯಲ್ಲಿ ಸಂಘರ್ಷದ ವಾತಾವರಣ ಸೃಷ್ಟಿಸುವುದೇ ಬಿಜೆಪಿಯವರಿಗೆ ಚಾಲಿಯಾಗಿದೆ. ಆದರೆ ಈ ಭಾರಿ ನಿಮ್ಮ ನಾಟಕ ನಡೆಯುವುದಿಲ್ಲ. ಕಾಂಗ್ರೆಸ್ ಎಂದಿಗೂ ಬಡವರ ಪರವಾಗಿದ್ದು, ದೇಶದಲ್ಲೇ ಮಾದರಿಯಾಗಿ ರೂಪಿಸಿ, ಅಭಿವೃದ್ಧಿಯಲ್ಲೂ ನಂಬರ್ ವನ್ ರಾಜ್ಯವನ್ನಾಗಿಸುವ ಗುರಿಯನ್ನು ಹೊಂದಿದೆ ಎಂದು ಪದ್ಮರಾಜ್ ಹೇಳಿದ್ದಾರೆ.
ಶಾಸಕ ವೇದವ್ಯಾಸ ಕಾಮತ್‌ವರು ಅವರದೇ ಸರ್ಕಾರ ಅಧಿಕಾರದಲ್ಲಿದ್ದರೂ ಮಂಗಳೂರು ನಗರವನ್ನು ಅಭಿವೃದ್ಧಿ ಮಾಡುವಲ್ಲಿ ಎಡವಿದ್ದಾರೆ. ಕಳೆದ ಐದು ವರ್ಷವೂ ಕೇವಲ ಭಾವನಾತ್ಮಕ ವಿಷಯದ ಬಗ್ಗೆ ಮಾತನಾಡಿ ಜನತೆಯನ್ನು ಯಾಮಾರಿಸಿದ್ದಾರೆ. ನಗರದಾದ್ಯಂತ ನಡೆದ ಅವೈಜ್ಞಾನಿಕ ಕಾಮಗಾರಿಯಿಂದ ನಗರದಲ್ಲಿ ಕೃತಕ ನೆರೆ ಭೀತಿ ಸಾಧ್ಯತೆ ಇದೆ. ಈ ಬಗ್ಗೆ ಮೊದಲು ಗಮನಹರಿಸಿ ಕೆಲಸ ಮಾಡಲಿ ಎಂದು ಹೇಳಿಕೆಯೊಂದರಲ್ಲಿ ಪದ್ಮರಾಜ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು