9:26 AM Saturday18 - May 2024
ಬ್ರೇಕಿಂಗ್ ನ್ಯೂಸ್
ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ದಿನವಿಡೀ ಧಾರಾಕಾರ ಜಡಿಮಳೆ: ಚಾರ್ಮಾಡಿ ಘಾಟಿಯಲ್ಲಿ ಮಂಜು ಮುಸುಕಿದ ವಾತಾವರಣ

10/06/2023, 22:32

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಬಣಕಲ್, ಚಾರ್ಮಾಡಿ ಘಾಟ್, ಕೊಟ್ಟಿಗೆಹಾರ ಸುತ್ತಮುತ್ತ ಪ್ರದೇಶದಲ್ಲಿ ಮೋಡ ಕವಿದ ವಾತಾವರಣ ಉಂಟಾಗಿ ದಿನವಿಡೀ ದಾರಾಕಾರ ಮಳೆಯಾಗುತ್ತಿದೆ.
ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್ ಭಾಗದಲ್ಲೂ ಮಂಜು ಮುಸುಕಿನ ವಾತಾವರಣವಿದ್ದು ಮುಂಗಾರು ಮಳೆ ಆರಂಭವಾದಂತೆ ಭಾಸವಾಗಿದೆ. ಸುರಿಯುತ್ತಿರುವ ಜಡಿ ಮಳೆಯಿಂದ ವಾತಾವರಣ ತಂಪಾಗಿದ್ದು ಕೃಷಿಗೆ ಅನುಕೂಲವಾಗಿದೆ.ಹದ ಮಳೆಯಾಗುತ್ತಿರುವುದರಿಂದ ಮನೆ ನಿರ್ಮಾಣ ಕಾರ್ಯಗಳು ವಿಳಂಬವಾಗಿದೆ.ಕೊಟ್ಟಿಗೆಹಾರದಲ್ಲಿ ಜಡಿ ಮಳೆ ಸುರಿಯುತ್ತಿರುವುದರಿಂದ ಕಾಫಿ ತೋಟಗಳಿಗೆ ಗೊಬ್ಬರ ಹಾಕಲು ಸಕಾಲವಾಗಿದೆ.


ಚಾರ್ಮಾಡಿ ಘಾಟ್ನಲ್ಲೀ ಮಂಜು ಮುಸುಕಿನ ವಾತಾವರಣ ಇರುವುದರಿಂದ ವಾಹನಗಳು ನಿಧಾನವಾಗಿ ಸಂಚರಿಸುತ್ತಿವೆ.ಚಂಡ ಮಾರುತದ ವೈಪರೀತ್ಯದಿಂದ ಮಳೆಯಾಗುತ್ತಿದ್ದು ಜನರು ಮಳೆಗಾಲಕ್ಕೆ ಸಿದ್ದರಾಗುವ ಮುನ್ನವೆ ಬಂದ ಮಳೆಯಿಂದ ಕಟ್ಟಡ ಕಾರ್ಮಿಕರಿಗೆ ಕೆಲಸ ನಿರ್ವಹಿಸಲು ತೊಂದರೆ ಉಂಟಾಯಿತು.ಜಡಿಮಳೆಯಿಂದ ಕೃಷಿ ಚಟುವಟಿಕೆಗಳು ಗರಿಗೆದರಿವೆ.ಮಳೆಯಿಂದ ಯಾವುದೇ ಹಾನಿ ಸಂಭವಿಸಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು