5:36 PM Friday17 - May 2024
ಬ್ರೇಕಿಂಗ್ ನ್ಯೂಸ್
ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,…

ಇತ್ತೀಚಿನ ಸುದ್ದಿ

ಶ್ರೀಕ್ಷೇತ್ರ ಕೇಮಾರಿನಲ್ಲಿ “ಟೆಲಿಬರವು” ತಂತ್ರಾಂಶ ಲೋಕಾರ್ಪಣೆ*

12/06/2023, 20:18

ಮಂಗಳೂರು(reporterkarnataka.com):ಸಂಸ್ಕೃತಿ ಮುಖ್ಯ, ದೇಶ ವಿದೇಶಕ್ಕೂ ಹೋದರೂ ತುಳು ಸಂಸ್ಕೃತಿಯನ್ನು ಮರೆಯಬಾರದು. ಆದರೆ ತುಳು ಭಾಷೆಯನ್ನು ಎಂಟನೇ ಪರೀಚ್ಛೇಧದಲ್ಲಿ ಸೇರಿಸುವಲ್ಲಿ ಈತನಕವೂ ಆಗದೇ ರಾಜಕಾರಣಿಗಳು ಕೇವಲ ಬಂಡಲ್ ಬಿಡುವಲ್ಲೇ ಕಾಲ ಕಳೆದರು ಎಂದು ಕೇಮಾರು ಸಾಂದೀಪನಿ ಸಾಧನಾಶ್ರಮದ ಶ್ರೀ ಶ್ರೀ ಈಶ ವಿಠಲದಾಸ ಸ್ವಾಮೀಜಿ ಖೇದ ವ್ಯಕ್ತಪಡಿಸಿದರು.
ಜೈ ತುಲುನಾಡ್(ರಿ.) ಇದರ ನೇತೃತ್ವದಲ್ಲಿ ಶ್ರೀಕ್ಷೇತ್ರ ಕೇಮಾರಿನಲ್ಲಿ ಭಾನುವಾರ ‘ಟೆಲಿಬರವು’ ಎಂಬ ಆಪ್ ಲೋಕಾರ್ಪಣೆಗೊಳಿಸಿ ಅವರು ಆಶೀರ್ವಚನ ನೀಡಿ ಮಾತನಾಡಿದರು.
ಈ ವೇಳೆ ‘ಟೆಲಿಬರವು’ ತಂತ್ರಾಂಶದ ರಚನೆಕಾರರಾದ ಜ್ಙಾನೇಶ ದೇರಳಕಟ್ಟೆ ಇವರನ್ನು ಸನ್ಮಾನಿಸಲಾಯಿತು. ಈ ತಂತ್ರಾಂಶದಲ್ಲಿ ಕನ್ನಡದಲ್ಲಿ ಬರೆದಂತಹ ಅಕ್ಷರಗಳು ತುಳು ಲಿಪಿಗೆ ಪರಿವರ್ತನೆಯಾಗುತ್ತದೆ ಎಂದು ಸನ್ಮಾನಿತರಾದ ಜ್ಞಾನೇಶ್ ಹೇಳಿದರು. ಸುಮಂತ್ ಹೆಬ್ರಿ ತಂತ್ರಾಂಶದ ಬಗ್ಗೆ ಮಾಹಿತಿ ನೀಡಿದರು..
ಈ ಸಂಧರ್ಭ ಕೇಮಾರ್ ಕ್ಷೇತ್ರದ ನಾಮಪಲಕವನ್ನು ತುಲುಲಿಪಿಯಲ್ಲಿ ಅಳವಡಿಸಿ ಉದ್ಘಾಟಿಸಲಾಯಿತು.
ಜೈ ತುಲುನಾಡ್ ಸಂಘಟನೆಯ ಅಧ್ಯಕ್ಷ ವಿಶು ಶ್ರೀಕೇರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಐಕಳ ಗ್ರಾಮ ಪಂಚಾಯತ್‌ನ ಉಪಾಧ್ಯಕ್ಷ ರಾಜೇಶ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಜೈ ತುಲುನಾಡ್ ಸಂಘಟನೆಯ ಉಪಾಧ್ಯಕ್ಷ ಉದಯ್ ಪೂಂಜಾ ಉಪಸ್ಥಿತರಿದ್ದರು. ಪೂರ್ಣಿಮಾ ಬಂಟ್ವಳಾ ಸನ್ಮಾನ ಪತ್ರ ವಾಚಿಸಿದರು. ಪವಿತ್ರ ಪೂಜಾರಿ ಸ್ವಾಗತಿಸಿ ಅಕ್ಷತ ಧನ್ಯವಾದ ಅರ್ಪಿಸಿದರು. ಕಿರಣ್ ತುಲುವೆ ಕಾರ್ಯಕ್ರಮ ನಿರೂಪಿಸಿದರು.

*ಟೆಲಿಬರವು*
ತುಲು ಭಾಷೆಗೆ ಯೂನಿಕೋಡ್ ಇಲ್ಲದಿರುವ ಕಾರಣ ಪರ್ಯಾಯವಾಗಿ ಆಂಗ್ಲ ಭಾಷೆಯ ಫಾಂಟ್ ಅನ್ನು ಜೈತುಲುನಾಡ್ ಸಂಘಟನೆಯು ಮರುವಿನ್ಯಾಸ ಗೊಳಿಸಿ ಸಿದ್ಧಪಡಿಸಿದಂತಃ ಫಾಂಟ್ ಮೂಲಕ ತುಲು ಅಕ್ಷರವನ್ನು ಬರೆಯಬಹುದು. ಆದರೆ ಅದನ್ನು ಬಳಸಲು ಜನಸಾಮಾನ್ಯರಿಗೆ ಅನಾನೂಕೂಲವಾಗುತ್ತಿತ್ತು. ಇದನ್ನರಿತ ಜೈತುಲುನಾಡ್ ಸಂಘಟನೆಯ ಉದಯೋನ್ಮುಖ ಯುವಕ ಜ್ಞಾನೇಶ್ ದೇರಳಕಟ್ಟೆ, ಎಲ್ಲರಿಗೂ ಸುಲಭವಾಗುವ ರೀತಿಯಲ್ಲಿ ಟೆಲಿಗ್ರಾಂ ಎನ್ನುವ ತಂತ್ರಾಂಶದಲ್ಲಿ ಟೆಲಿಬರವು ಅನ್ನು ಅಳವಡಿಸಿ ಸಿದ್ದಪಡಿಸಿದ ಈ ತಂತ್ರಾಂಶದ ವಿಶೇಷವೇನೆಂದರೆ, ಕನ್ನಡ ಅಕ್ಷರದಲ್ಲಿ ಬರೆದು ಕಳಿಸಿದರೆ ತುಳು ಅಕ್ಷರವಾ ಮಾರ್ಪಾಡಾಗಿ ಪಾರದರ್ಶಕ ಚಿತ್ರ(transparent png format image)ವಾಗಿ ನಿಮಗೆ ಸಿಗುತ್ತದೆ. ಈ ಚಿತ್ರವನ್ನು ಸುಲಭವಾಗಿ ಫೋಟೊ ಎಡಿಟಿಂಗ್ ಮಾಡಬಹುದಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು