1:32 PM Friday6 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ… ರಾಜ್ಯ ಸರ್ಕಾರಿ ಉದ್ಯೋಗ ನೇಮಕಾತಿಗೆ 5 ವರ್ಷಗಳ ಸಡಿಲಿಕೆ : ಸಿಎಂ ಸಿದ್ದರಾಮಯ್ಯ… ರಾಜ್ಯ ಬಜೆಟ್ 2026-27: ಸರ್ವರ ಸಬಲೀಕರಣ, ಅವಕಾಶಗಳ ಅನಾವರಣ, ನವ ಕರ್ನಾಟಕದ ನಿರ್ಮಾಣ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರಿನ ಬಾಳೂರು ಪೊಲೀಸ್ ಠಾಣೆ ಗೆ ಹೈಟೆಕ್ ಸ್ಪರ್ಶ: ಮಿನಿ ಪಾರ್ಕ್, ಟೆನ್ನಿಸ್, ಶೆಟಲ್ ಕಾಕ್ ಕೋರ್ಟ್

13/06/2023, 20:06

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಜನರಿಗೆ ಹೊಡೆದಾಟ, ಗಲಾಟೆಗಿಂತ ಪೊಲೀಸ್ಸು, ಪೊಲೀಸ್ ಸ್ಟೇಷನ್ ಅಂದ್ರೆನೆ ಭಯ. ಪೊಲೀಸರು ದುಡ್ಡಿದ್ದೋರ ಕಡೆ ಅನ್ನೋ ಆರೋಪ ಯಾವಾಗ್ಲೂ ಇದ್ದೇ ಇರುತ್ತೆ. ಹಾಗಾಗಿಯೇ, ಬಡಜನರಿಗೆ ಪೊಲೀಸ್ ಅಂದ್ರೆ ಭಯ. ಆದ್ರೆ, ಕಾಫಿನಾಡ ಆ ಪೊಲೀಸ್ ಠಾಣೆ ರಾಜ್ಯಕ್ಕೆ ಮಾದರಿ. ಒಂದು ಕಾಲದಲ್ಲಿ ಈ ಠಾಣೆ ನಕ್ಸಲ್ ಪೀಡಿತ ಪ್ರದೇಶದ ಸ್ಟೇಷನ್. ಹಾಗಾಗಿ, ಸಿಬ್ಬಂದಿಗಳು ವರ್ಗಾವಣೆಯಾಗಲು ಹಿಂದೇಟು ಹಾಕುತ್ತಿದ್ದ ಪೊಲೀಸರೇ ಇದೀಗ ನಾ ಮುಂದು, ತಾ ಮುಂದು ಅಂತ ಆ ಠಾಣೆಯನ್ನೇ ಬಯಸುತ್ತಿದ್ದಾರೆ. ಆ ಠಾಣೆ ಈ ಪರಿ ಫೇಮಸ್ ಆಗಲು ಕಾರಣ ಏನು ಅಂತೀರಾ… ಈ ಸ್ಟೋರಿ ನೋಡಿ…
ಕಾಫಿನಾಡು ಚಿಕ್ಕಮಗಳೂರು ಅಂದ್ರೆ ಥಟ್ ಅಂತ ನೆನಪಾಗೋದೆ ದಟ್ಟಡವಿ. ಮುಗಿಲೆತ್ತರದ ಬೆಟ್ಟಗುಡ್ಡಗಳು. ಅರಣ್ಯವನ್ನು ನಾಚಿಸುವಂತಹ ಕಾಫಿ ತೋಟಗಳು. ಅಪ್ಪಟ ಮಲೆನಾಡ. ಸದಾ ತಣ್ಣನೆಯ ಗಾಳಿ. ಮಳೆಗಾಲದಲ್ಲಿ ಮಲೆನಾಡ ಬದುಕು ನಿಜಕ್ಕೂ ಸಾಹಸ. ಅಲ್ಲಿನ ಪೊಲೀಸ್ ಠಾಣೆಗೆ ಸಿಬ್ಬಂದಿಗಳು ವರ್ಗಾವಣೆ ಆಗೋಕೂ ಪೊಲೀಸರು ಹಿಂದೇಟು ಹಾಕ್ತಿದ್ರು. ಯಾಕಂದ್ರೆ, ಒಂದು ಕಾಲದಲ್ಲಿ ಇದು ನಕ್ಸಲ್ ಪೀಡಿತ ಪ್ರದೇಶದ ಠಾಣೆ ಕೂಡ. ಆದರೆ, ಈಗ. ಆ ಸ್ಟೇಷನ್ ಫುಲ್ ಲಕ-ಲಕ ಅಂತಿದೆ. ಇದೇ ಆ ಠಾಣೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಾಳೂರು ಸ್ಟೇಷನ್. ಸುತ್ತಲೂ ಹಚ್ಚಹಸಿರು.‌ ದಟ್ಟ ಕಾಡು.‌ ಮಧ್ಯದಲ್ಲಿ ಸುಂದರ ಸ್ಟೇಷನ್.‌ ಇದಕ್ಕೆಲ್ಲಾ ಕಾರಣ ಪಿ.ಎಸ್.ಐ. ಪವನ್. ದಾನಿಗಳು ಹಾಗೂ ಸಿಬ್ಬಂದಿಗಳ ನೆರವಿನಿಂದ ಈಗ ಠಾಣೆಗೆ ಹೈಟೆಕ್ ಲುಕ್ ಸಿಕ್ಕಿದೆ. ದೂರು ನೀಡಲು ಬಂದ ದೂರುದಾರರಿಗೆ ವಿಶ್ರಾಂತಿ ಪಡೆಯಲು ಮಿನಿ ಪಾರ್ಕ್.‌ ಠಾಣೆಯ ಒಳಾಂಗಣಕ್ಕೆ ಹೈಟೆಕ್ ಸ್ಪರ್ಶದ ಜೊತೆ ಸಕಲ ವ್ಯವಸ್ಥೆ ಕಲ್ಪಿಸಿದ್ದಾರೆ. ಬಾಳೂರು ಗ್ರಾಮಸ್ಥರು ಹಾಗೂ ಸುತ್ತಮುತ್ತಲಿನ ಠಾಣಾ ವ್ಯಾಪ್ತಿಯ ಜನರಿಗೆ ಠಾಣೆಯ ಮೇಲಿದ್ದ ಭಯದ ಕಲ್ಪನೆಯನ್ನು ದೂರ ಮಾಡಿ ಮೆಚ್ಚುಗೆ ಕಾರಣವಾಗಿದೆ. ಪೊಲೀಸರ ಈ ಜನಸ್ನೇಹಿ ಪೊಲೀಸ್ ಠಾಣೆ ಕನಸಿಗೆ ಸ್ಥಳೀಯರು ಕೈಜೋಡಿಸಿದ್ದರಿಂದ ನಕ್ಸಲ್ ಪೀಡಿತ ಪ್ರದೇಶದ ಪೊಲೀಸ್ ಠಾಣೆಗೆ ಹೈಟೆಕ್ ಸ್ಪರ್ಶ ಸಿಕ್ಕಿದೆ.


ಇಷ್ಟೇ ಅಲ್ಲ.ಸಿಬ್ಬಂದಿಗಳು ವಿಶ್ರಾಂತಿಯ ವೇಳೆ ಆಟವಾಡಲು ಟೆನಿಸ್ ಹಾಗೂ ಶೆಟಲ್ ಕಾಕ್ ಕೋರ್ಟ್, ಸುಂದರ ಪಾರ್ಕ್, ಸೇರಿದಂತೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಪಡೆದಿರುವುದು ಠಾಣೆಯ ವಿಶೇಷ. ಬಾಳೂರು ಪೊಲೀಸ್ ಠಾಣೆಯ ಪಿ.ಎಸ್.ಐ ಪವನ್ ಕುಮಾರ್ ವಿವಿಧ ದಾನಿಗಳಿಂದ ನೆರವು ಪಡೆದು ಸಹ ಸಿಬ್ಬಂದಿಗಳ ನೆರವನಿಂದ ಠಾಣೆಗೆ ಹೈಟೆಕ್ ಸ್ಪರ್ಶ ನೀಡುವ ಮೂಲಕ ಆಕರ್ಷಣೀಯ ಕೇಂದ್ರ ಬಿಂದುವಾಗಿಸಿದ್ದಾರೆ. ಪಿ.ಎಸ್.ಐ ಪವನ್ ಕುಮಾರ್ ಕಾರ್ಯಕ್ಕೆ ಹಿರಿಯ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇತ್ತೀಚಿಗೆ ಮಲ್ಲಂದೂರು ಪೊಲೀಸ್ ಠಾಣೆಗೂ ಕೂಡ ಅಲ್ಲಿನ ಪಿಎಸ್ಐ ರವೀಶ್ ಇದೇ ರೀತಿ ಹೈಟೆಕ್ ಸ್ಪರ್ಶ ನೀಡಿದರು. ಎಸ್.ಪಿ.ಉಮಾ ಪ್ರಶಾಂತ್ ಎರಡು ಠಾಣೆಯ ಪಿ.ಎಸ್.ಐ.ಗಳ ಕೆಲಸಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು