6:13 PM Sunday9 - November 2025
ಬ್ರೇಕಿಂಗ್ ನ್ಯೂಸ್
ಕಬ್ಬು ಬೆಳೆಗಾರರ ಕಿವಿಗೆ ಹೂವು ಇಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಿಗೆ ಸಿಎಂ ಪತ್ರ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ

ಇತ್ತೀಚಿನ ಸುದ್ದಿ

ಪಾಲಿಕೆ ಮಾಡಬೇಕಿದ್ದ ಕೆಲಸವನ್ನು ಪೊಲೀಸ್ ಇಲಾಖೆ ಮಾಡಿತು!: ಕೆಪಿಟಿ ವೃತ್ತದಲ್ಲಿ ರಸ್ತೆಗೆ ಅಡ್ಡವಾಗಿದ್ದ ಅಲಂಕಾರಿಕ ಗಿಡ ತೆರವು

17/06/2023, 15:03

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ರಸ್ತೆಯ ಡಿವೈಡರ್ ಮತ್ತು ಸರ್ಕಲ್ ಗಳಲ್ಲಿ ನಿರ್ಮಿಸಿದ ಮಿನಿ ಗಾರ್ಡನ್ ಗಳು ನಗರದ ಸುಂದರವನ್ನು ವೃದ್ಧಿಸಿದರೆ, ಕೆಲವೊಮ್ಮೆ ನಗರದೊಳಗೆ ವಾಹನ ಅಪಘಾತಕ್ಕೂ ಕಾರಣವಾಗುತ್ತದೆ. ಡಿವೈಡರ್ ಮತ್ತು ಸರ್ಕಲ್ ನಲ್ಲಿ ನಿರ್ಮಿಸಿದ ಗಾರ್ಡ್ ನ ಎದುರುಗಡೆಯ ರಸ್ತೆಗೆ ಅಡ್ಡವಾಗಿ ಬೆಳೆದರೆ ಅದು ಅಪಾಯಕಾರಿಯಾಗಿ ಪರಿಣಮಿಸುತ್ತದೆ. ಅಂಥದೊಂದು ಸನ್ನಿವೇಶ ನಗರದ ಕೆಪಿಟಿ ಜಂಕ್ಷನ್ ನಲ್ಲಿ ನಡೆದಿದೆ.
ಕೆಪಿಟಿ ಜಂಕ್ಷನ್ ನಲ್ಲಿರುವ ಸಣ್ಣ ವೃತ್ತದಲ್ಲಿ ಗಾರ್ಡನ್ ಬೆಳೆಸಲಾಗಿದೆ.


ಗಿಡಗಳು ಸೊಂಪಾಗಿ ದಟ್ಟವಾಗಿ ಎತ್ತರಕ್ಕೆ ಬೆಳೆದಿದೆ. ವೃತ್ತವೇನೋ ಗಾರ್ಡನ್ ನಿಂದ ತುಂಬಾ ಸೊಗಸಾಗಿ ಕಾಣುತ್ತಿದೆ. ಆದರೆ ದಟ್ಟವಾಗಿ, ಎತ್ತರಕ್ಕೆ ಬೆಳೆದ ಅಲಂಕಾರಿಗಳ ಗಿಡಗಳು ರಸ್ತೆಗೆ ಪೂರ್ತಿ ಅಡ್ಡವಾಗಿದೆ. ಬಿಜೈ ಕಡೆಯಿಂದ ನಂತೂರು ಭಾಗಕ್ಕೆ ಸಂಚರಿಸುವ ವಾಹನ ಸವಾರರಿಗೆ ಎದುರುಗಡೆಯ ರಸ್ತೆ ಕಾಣದಷ್ಟು ಅಲಂಕಾರಿಕ ಗಿಡಗಳು ಬೆಳೆದಿವೆ. ಇದೇ ಪರಿಸ್ಥಿತಿ ಏರ್ ಪೊರ್ಟ್ ರೋಡಿನಿಂದ ಬಿಜೈ ಕಡೆಗೆ ಬರುವ ವಾಹನ ಸವಾರರದ್ದಾಗಿದೆ. ಏರ್ ಪೊರ್ಟ್ ಕಡೆಯಿಂದ ಬಿಜೈಯತ್ತ ಸಾಗುವ ವಾಹನ ಸವಾರರಿಗೂ ಇಲ್ಲಿ ರಸ್ತೆ ಕಾಣೊಲ್ಲ. ಈ ಕುರಿತು ಸಾರ್ವಜನಿಕರೊಬ್ಬರು ಎಸಿಪಿ ಗೀತಾ ಕುಲಕರ್ಣಿ ಅವರಿಗೆ ದೂರು ನೀಡಿದ್ದರು. ಸುಗಮ ಸಂಚಾರದ ಹಿನ್ನೆಲೆಯಲ್ಲಿ ಎಸಿಪಿ ಗೀತಾ ಕುಲಕರ್ಣಿ ಅವರ ಮಾರ್ಗದರ್ಶನದಲ್ಲಿ ಸಬ್ ಇನ್ಸ್ ಪೆಕ್ಟರ್ ಗೋಪಾಲಕೃಷ್ಣ ಅವರ ನೇತೃತ್ದಲ್ಲಿ ರಸ್ತೆಗೆ ತಡೆಯಾಗಿ ಬೆಳೆದು ನಿಂತಿದ್ದ ಅಲಂಕಾರಿಕ ಗಿಡಗಳನ್ನು ಸೋಮವಾರ ಟ್ರಿಮ್ ಮಾಡಲಾಯಿತು. ಪಾಲಿಕೆ ಮಾಡಬೇಕಾದ ಕೆಲಸವನ್ನು ಪೊಲೀಸ್ ಇಲಾಖೆಯೇ ಮಾಡಿತು. ಕಾನ್ ಸ್ಟೇಬಲ್ ಒಬ್ಬರು ಗಿಡಗಳನ್ನು ಟ್ರಿಮ್ ಮಾಡಿ ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟರು.

ಇತ್ತೀಚಿನ ಸುದ್ದಿ

ಜಾಹೀರಾತು