9:58 AM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಸರಕಾರಿ ಬಸ್ ಕಾದು ಸುಸ್ತಾದ ಮಹಿಳೆಯರು : ಹೊರನಾಡಿಗೆ ಸಾಗಲು ಮಹಿಳೆಯರ ಪರದಾಟ

17/06/2023, 19:17

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@mail.com

ಸರ್ಕಾರ ಉಚಿತ ಬಸ್ ನಲ್ಲಿ ಹೊರನಾಡು ಪ್ರವಾಸಿ ತಾಣಕ್ಕೆ ಸಾಗಲು ಮಹಿಳೆಯರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ಬೆಳಿಗ್ಗೆಯಿಂದಲೇ ಹರಿಹರ, ಹೊಸಪೇಟೆ, ಶಿವಮೊಗ್ಗ, ಬೇಲೂರು ಮತ್ತಿತರ ಕಡೆಯಿಂದ ಸರ್ಕಾರಿ ಬಸ್ ನಲ್ಲಿ ಮಹಿಳೆಯರು ಕೊಟ್ಟಿಗೆಹಾರ ಬಸ್ ನಿಲ್ದಾಣಕ್ಕೆ ಬಂದಿಳಿದು ಹೊರನಾಡು ದೇವಸ್ಥಾನಕ್ಕೆ ಸಾಗಲು ಬಸ್ ಕಾಯುತ್ತಿದ್ದರು.
ಆದರೆ ಕೊಟ್ಟಿಗೆಹಾರದಿಂದ ಹೊರನಾಡಿಗೆ ಸರ್ಕಾರಿ ಬಸ್ ಸಂಜೆ 3.30ಗೆ ಕೆಲವೇ ಒಂದು ಬಸ್ ಗಳು ಇರುವುದರಿಂದ ಬಸ್ ಭರ್ತಿಯಾಗಿರುವ ಬರುತ್ತಿವೆ. ಇದರಿಂದ ಬೆಳಿಗ್ಗೆಯಿಂದಲೇ ವಿವಿಧ ಊರುಗಳಿಂದ ಬಂದ ಮಹಿಳೆಯರು ಬಸ್ ಕಾದು ಸುಸ್ತಾಗುತ್ತಿದ್ದಾರೆ. ಬಸ್ ಕಾಯುತ್ತೇವೆ ಇಲ್ಲವಾದರೆ ಬಸ್ ನಿಲ್ದಾಣದಲ್ಲೇ ಮಲಗುತ್ತೇವೆ. ಸರ್ಕಾರ ಹೊರನಾಡಿಗೆ ಹೆಚ್ಚು ಬಸ್ ಗಳನ್ನು ಬಿಟ್ಟು ಮಹಿಳೆಯರಿಗೆ ದೇವಸ್ಥಾನಕ್ಕೆ ತೆರಳಲು ಸಹಕರಿಸಬೇಕು ಎಂದು ಬೇಲೂರಿನ ಮಹಿಳೆ ಶಕುಂತಲಾ ರಿಪೋರ್ಟರ್ ಕರ್ನಾಟಕಕ್ಕೆ ತಿಳಿಸಿದ್ದಾರೆ.

ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ರಾಜ್ಯದ ಒಳಗಡೆ ಉಚಿತ ಪ್ರಯಾಣಕ್ಕೆ ಅನುವು ಮಾಡಿಕೊಟ್ಟಿರುವುದು ಸಂತಸ ತಂದಿದೆ.ಆದರೆ ಬಸ್ ಗಳ ಕೊರತೆಯಿಂದ ನಿರೀಕ್ಷಿತ ಸಮಯಕ್ಕೆ ತಲುಪಲಾಗುತ್ತಿಲ್ಲ. ಬಸ್ ಪ್ರಯಾಣಿಕರಿಂದ ಭರ್ತಿಯಾಗಿ ಬರುವುದರಿಂದ ಬಸ್ ಹತ್ತಲು ಆಗುತ್ತಿಲ್ಲ ಎಂದು ಬೇಸರ ವ್ಯಕ್ತ ಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು