12:52 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ರಾಜ್ಯ ಸರಕಾರದಿಂದ ರಾಜಕೀಯ ದ್ವೇಷಕ್ಕಾಗಿ ಪಠ್ಯ ಪರಿಷ್ಕರಣೆ: ಶಾಸಕ ವೇದವ್ಯಾಸ ಕಾಮತ್ ಅಭಿಮತ

17/06/2023, 20:28

ಮಂಗಳೂರು(reporterkarnataka.com): ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಪ್ರತಿಯೊಂದು ನಿರ್ಧಾರವನ್ನೂ ರಾಜಕೀಯ ದ್ವೇಷದಿಂದಲೇ ಮಾಡುತ್ತಿದ್ದು, ಇದೀಗ ಪಠ್ಯ ಪರಿಷ್ಕರಣೆ ಮಾಡುವ ಮೂಲಕ ದೇಶದ ಸಾಮಾಜಿಕ ಹರಿಕಾರರಿಗೆ, ಸ್ವಾತಂತ್ರ್ಯ ಹೋರಾಟಗಾರರಿಗೆ ಅವಮಾನ ಮಾಡಿದೆ ಎಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ.ವೇದವ್ಯಾಸ್ ಕಾಮತ್ ಪ್ರತಿಕ್ರಿಯಿಸಿದ್ದಾರೆ.

ಶಿಕ್ಷಣ ಕ್ಷೆತ್ರವು ಪೂರ್ವಾಗ್ರಹಪೀಡಿತ ಮನಸ್ಥಿತಿಯಿಂದ ಹೊರಬರಬೇಕು. ಉತ್ತಮ ನಾಗರಿಕರನ್ನು ಶಿಕ್ಷಣ ತಯಾರು ಮಾಡಬೇಕು ಎಂಬ ದೃಷ್ಟಿಕೋನದಿಂದ ಬಿಜೆಪಿ ಸರಕಾರದ ಅವಧಿಯಲ್ಲಿ ಅನಗತ್ಯ ವಿಚಾರಗಳನ್ನು ಕೈ ಬಿಟ್ಟು ಒಳ್ಳೆಯ ವಿಚಾರಗಳನ್ನು ಪಠ್ಯಕ್ಕೆ ಸೇರಿಸಲಾಗಿತ್ತು. ಆದರೆ ದೇಶ ಪ್ರೇಮದ ಬಗ್ಗೆ ಒಲವಿಲ್ಲದ ಕಾಂಗ್ರೆಸ್ ಗೆ ಇದನ್ನು ಸಹಿಸಲು ಸಾಧ್ಯವಾಗದೆ ಇದೀಗ ಪಠ್ಯ ಪರಿಷ್ಕರಣೆಗೆ ಕೈ ಹಾಕಿದ್ದಾರೆ ಎಂದು ದೂರಿದರು.
‘ಭಾರತ ಮಾತೆಯ ಅಮೃತ ಪುತ್ರರು’ ಎಂಬ ಸೂಲಿಬೆಲೆ ಅವರ ಪಠ್ಯ ಮಕ್ಕಳಲ್ಲಿ ದೇಶಪ್ರೇಮವನ್ನು ಬೆಳೆಸುವ ವಿಷಯವಾಗಿತ್ತು. ಸಾವರ್ಕರ್, ಸುಖದೇವ್, ಭಗತ್‍ಸಿಂಗ್ ಅವರ ಸ್ವಾತಂತ್ರ್ಯ ಹೋರಾಟ, ಜೀವನ ಕಥನಗಳನ್ನು ಮಕ್ಕಳಿಗೆ ತಿಳಿಸುವ ಪಠ್ಯವಾಗಿತ್ತು. ಇನ್ನು `ನಿಜವಾದ ಆದರ್ಶ ಪುರುಷ ಯಾರಾಗಬೇಕು’ ಎಂಬ ಸ್ವಾತಂತ್ರ್ಯ ಹೋರಾಟಗಾರ, ಸಾಮಾಜಿಕ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಕೇಶವ ಬಲಿರಾಮ್ ಹೆಡಗೇವಾರ್ ಅವರ ಭಾಷಣದ ಪಠ್ಯ ಅಳವಡಿಸಲಾಗಿತ್ತು. ಆದರೆ ಕಾಂಗ್ರೆಸ್ ಸರಕಾರ ಅದರಲ್ಲೂ ರಾಜಕೀಯ ಹುಡುಕಿ, ಈ ವಿಷಯಗಳಿಗೆ ಕತ್ತರಿ ಹಾಕಿ ಮಕ್ಕಳ ಪಠ್ಯಲ್ಲಿ ಕಾಂಗ್ರೆಸ್ ಮನಸ್ಥಿತಿಯ ವಿಚಾರಧಾರೆಗಳನ್ನು ತುರುಕಿಸಲು ಯತ್ನಿಸುತ್ತಿದೆ ಎಂದು ಆರೋಪಿಸಿದರು.
ಶಿಕ್ಷಣ ಕ್ಷೆತ್ರದಲ್ಲಿ ಸಮಗ್ರವಾಗಿ ಅವಲೋಕನ ಮಾಡದೆ, ಸಾಧಕ ಬಾಧಕ ಅಧ್ಯಯನ ಮಾಡದೆ, ರಾಜಕೀಯ ಕಾರಣಕ್ಕಾಗಿ ಪೂರ್ವಾಗ್ರಹಪೀಡಿತರಾಗಿ ಪಠ್ಯ ಪರಿಷ್ಕರಣೆ ಮಾಡುತ್ತಿರುವುದು ಖಂಡನೀಯ. ನಮ್ಮ ಅವಧಿಯಲ್ಲಿ ಮೊದಲಿನ ತಪ್ಪುಗಳನ್ನು ತಿದ್ದುವ ಕೆಲಸ ಆಗಿತ್ತು. ಈಗ ಬಿಜೆಪಿ, ಆರೆಸ್ಸೆಸ್ ಮೇಲಿನ ದ್ವೇಷದಿಂದ ಪಠ್ಯ ಬದಲಾವಣೆ ಮಾಡಿದರೆ ಅದರಿಂದ ಮಕ್ಕಳು, ಪೋಷಕರ ಮೇಲೆ ದುಷ್ಪರಿಣಾಮ ಬೀರಲಿದೆ. ಬದಲಾವಣೆ ಮಾಡುವುದಿದ್ದರೆ ಸಮಗ್ರವಾಗಿ ವಿಮರ್ಶಿಸಿ ಮಾಡಬೇಕಿತ್ತು. ಆದರೆ ರಾಜಕೀಯ ಕಾರಣಕ್ಕೋಸ್ಕರ ಬದಲಾವಣೆ ಮಾಡುವುದು ಅಕ್ಷ್ಯಮ್ಯ ಎಂದು ಅವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು