7:30 AM Thursday6 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಸುಲಿಗೆ ಪ್ರಕರಣ: ಪಣಂಬೂರು ಪೊಲೀಸರ ಕ್ಷಿಪ್ರ ಕಾರ್ಯಾಚರಣೆ; ಆರೋಪಿ ಬಂಧನ

18/06/2023, 13:05

ಮಂಗಳೂರು(reporterkarnataka.com): ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೊಬ್ಬನನ್ನು ಪಣಂಬೂರು ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಬಂಧಿಸಲಾಗಿದೆ.
ಪಣಂಬೂರು ಠಾಣೆ ಪೊಲೀಸ್ ನಿರೀಕ್ಷಕರ ನೇತೃತ್ವದ ತಂಡ ನಡೆಸಿದ ಕಾರ್ಯಚರಣೆಯಲ್ಲಿ ಸುಲಿಗೆ ಪ್ರಕರಣದ ಆರೋಪಿ ನಿಹಾಲ್ ಎಂಬಾತನನ್ನು ದಸ್ತಗಿರಿ ಮಾಡಲಾಗಿದೆ.
ಬೈಕಂಪಾಡಿ ರೈಲ್ವೇ ಟ್ರ್ಯಾಕ್ ಎಂಬಲ್ಲಿ ಚಿನ್ನದ ಸರ ಮತ್ತು ಮೊಬೈಲ್ ಪೋನ್ ಸುಲಿಗೆ ಮಾಡಿದ್ದ ಆರೋಪಿಗಳ ಪೈಕಿ ನಿಹಾಲ್ ನನ್ನು ಬಂಧಿಸಲಾಗಿದೆ.
ಮಂಗಳೂರು ತಾಲೂಕು ಮತ್ತು ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಪ್ರಕರಣ ವರದಿಯಾದ ಕೆಲವೇ ಗಂಟೆಗಳಲ್ಲಿ ಪಣಂಬೂರು ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಸೋಮಶೇಖರ್ ರವರ ನೇತ್ರತ್ವದ ಪೊಲೀಸ್ ತಂಡ ಪತ್ತೆ ಮಾಡಿ ರೂಪಾಯಿ 35,000/- ಮೌಲ್ಯದ ಸುಮಾರು 5,95 ಗ್ರಾಂ ತೂಕದ ಚಿನ್ನದ ಸರ ಹಾಗೂ ರೂಪಾಯಿ 10,000/- ಮೌಲ್ಯದ ಮೊಬೈಲ್ ಪೋನ್ ಸೇರಿದಂತೆ ಒಟ್ಟು 45,000/-ಮೌಲ್ಯದ ಸ್ವತ್ತುಗಳನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಾಧೀನಪಡಿಸಿಕೊಂಡಿರುತ್ತಾರೆ.
ಆರೋಪಿಯು ಈ ಪ್ರಕರಣದ ದೂರುದಾರರ ಮಗ ಪರಿಚಯದ ವ್ಯಕ್ತಿಯಾಗಿದ್ದು, ದೂರದಾರರ ಮಗನನ್ನು ಬೈಕಂಪಾಡಿ ಹತ್ತಿರದ ರೈಲ್ವೇ ಟ್ರಾಕ್ ಗೆ ಫೋನ್ ಮಾಡಿ ಕರೆಸಿಕೊಂಡು ಆತನ ಸ್ನೇಹಿತ ಕಾನೂನಿನೊಂದಿಗೆ ಸಂಘರ್ಷಕ್ಕೆ ಇಳಿದ ಬಾಲಕನೊಂದಿಗೆ ಸೇರಿ ದೂದುದಾರರನ ಮಗನ ಕಣ್ಣಿಗೆ ಮೆಣಸಿನ ಹುಡಿ ಎರಚಿ ಅವನ ಮೊಬೈಲ್ ಮತ್ತು ಚಿನ್ನದ ಸರವನ್ನು ಸುಲಿಗೆ ನಡೆಸಿರುತ್ತಾನೆ. ಈ ಪ್ರಕರಣದ ಪತ್ತೆ ಕಾರ್ಯವು ಮಂಗಳೂರು
ಪೊಲೀಸು ಆಯುಕ್ತ ಕುಲದೀಪ್ ಕುಮಾರ್ ಆರ್ ಜೈನ್ ನಿರ್ದೇಶನದಂತೆ ಉಪ ಪೊಲೀಸ್ ಆಯುಕ್ತರಾದ ಅಂಶು ಕುಮಾರ್, ದಿನೇಶ್ ಕುಮಾರ್ ಬಾರಿಕೆ, ಸಹಾಯಕ ಪೊಲೀಸ್ ಆಯುಕ್ತ
ಮನೋಜ್ ಕುಮಾರ್ ನಾಯ್ಕ ಅವರ ನೇತೃತ್ವದಲ್ಲಿ ಪಣಂಬೂರು ಠಾಣಾ ಪೊಲೀಸ್ ನಿರೀಕ್ಷಕರಾದ ಸೋಮಶೇಖರ್ ಜೆ.ಸಿ, ಪೊಲೀಸ್‌ ಉಪ ನಿರೀಕ್ಷಕ
ಕುಮಾರೇಶನ್, ಜ್ಞಾನಶೇಖರ್ ಹಾಗೂ ಪಣಂಬೂರು ಪೊಲೀಸ್ ಠಾಣಾ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು