9:54 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಸುಲಿಗೆ ಪ್ರಕರಣ: ಪಣಂಬೂರು ಪೊಲೀಸರ ಕ್ಷಿಪ್ರ ಕಾರ್ಯಾಚರಣೆ; ಆರೋಪಿ ಬಂಧನ

18/06/2023, 13:05

ಮಂಗಳೂರು(reporterkarnataka.com): ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೊಬ್ಬನನ್ನು ಪಣಂಬೂರು ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಬಂಧಿಸಲಾಗಿದೆ.
ಪಣಂಬೂರು ಠಾಣೆ ಪೊಲೀಸ್ ನಿರೀಕ್ಷಕರ ನೇತೃತ್ವದ ತಂಡ ನಡೆಸಿದ ಕಾರ್ಯಚರಣೆಯಲ್ಲಿ ಸುಲಿಗೆ ಪ್ರಕರಣದ ಆರೋಪಿ ನಿಹಾಲ್ ಎಂಬಾತನನ್ನು ದಸ್ತಗಿರಿ ಮಾಡಲಾಗಿದೆ.
ಬೈಕಂಪಾಡಿ ರೈಲ್ವೇ ಟ್ರ್ಯಾಕ್ ಎಂಬಲ್ಲಿ ಚಿನ್ನದ ಸರ ಮತ್ತು ಮೊಬೈಲ್ ಪೋನ್ ಸುಲಿಗೆ ಮಾಡಿದ್ದ ಆರೋಪಿಗಳ ಪೈಕಿ ನಿಹಾಲ್ ನನ್ನು ಬಂಧಿಸಲಾಗಿದೆ.
ಮಂಗಳೂರು ತಾಲೂಕು ಮತ್ತು ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಪ್ರಕರಣ ವರದಿಯಾದ ಕೆಲವೇ ಗಂಟೆಗಳಲ್ಲಿ ಪಣಂಬೂರು ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಸೋಮಶೇಖರ್ ರವರ ನೇತ್ರತ್ವದ ಪೊಲೀಸ್ ತಂಡ ಪತ್ತೆ ಮಾಡಿ ರೂಪಾಯಿ 35,000/- ಮೌಲ್ಯದ ಸುಮಾರು 5,95 ಗ್ರಾಂ ತೂಕದ ಚಿನ್ನದ ಸರ ಹಾಗೂ ರೂಪಾಯಿ 10,000/- ಮೌಲ್ಯದ ಮೊಬೈಲ್ ಪೋನ್ ಸೇರಿದಂತೆ ಒಟ್ಟು 45,000/-ಮೌಲ್ಯದ ಸ್ವತ್ತುಗಳನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಾಧೀನಪಡಿಸಿಕೊಂಡಿರುತ್ತಾರೆ.
ಆರೋಪಿಯು ಈ ಪ್ರಕರಣದ ದೂರುದಾರರ ಮಗ ಪರಿಚಯದ ವ್ಯಕ್ತಿಯಾಗಿದ್ದು, ದೂರದಾರರ ಮಗನನ್ನು ಬೈಕಂಪಾಡಿ ಹತ್ತಿರದ ರೈಲ್ವೇ ಟ್ರಾಕ್ ಗೆ ಫೋನ್ ಮಾಡಿ ಕರೆಸಿಕೊಂಡು ಆತನ ಸ್ನೇಹಿತ ಕಾನೂನಿನೊಂದಿಗೆ ಸಂಘರ್ಷಕ್ಕೆ ಇಳಿದ ಬಾಲಕನೊಂದಿಗೆ ಸೇರಿ ದೂದುದಾರರನ ಮಗನ ಕಣ್ಣಿಗೆ ಮೆಣಸಿನ ಹುಡಿ ಎರಚಿ ಅವನ ಮೊಬೈಲ್ ಮತ್ತು ಚಿನ್ನದ ಸರವನ್ನು ಸುಲಿಗೆ ನಡೆಸಿರುತ್ತಾನೆ. ಈ ಪ್ರಕರಣದ ಪತ್ತೆ ಕಾರ್ಯವು ಮಂಗಳೂರು
ಪೊಲೀಸು ಆಯುಕ್ತ ಕುಲದೀಪ್ ಕುಮಾರ್ ಆರ್ ಜೈನ್ ನಿರ್ದೇಶನದಂತೆ ಉಪ ಪೊಲೀಸ್ ಆಯುಕ್ತರಾದ ಅಂಶು ಕುಮಾರ್, ದಿನೇಶ್ ಕುಮಾರ್ ಬಾರಿಕೆ, ಸಹಾಯಕ ಪೊಲೀಸ್ ಆಯುಕ್ತ
ಮನೋಜ್ ಕುಮಾರ್ ನಾಯ್ಕ ಅವರ ನೇತೃತ್ವದಲ್ಲಿ ಪಣಂಬೂರು ಠಾಣಾ ಪೊಲೀಸ್ ನಿರೀಕ್ಷಕರಾದ ಸೋಮಶೇಖರ್ ಜೆ.ಸಿ, ಪೊಲೀಸ್‌ ಉಪ ನಿರೀಕ್ಷಕ
ಕುಮಾರೇಶನ್, ಜ್ಞಾನಶೇಖರ್ ಹಾಗೂ ಪಣಂಬೂರು ಪೊಲೀಸ್ ಠಾಣಾ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು