4:54 PM Monday30 - March 2026
ಬ್ರೇಕಿಂಗ್ ನ್ಯೂಸ್
Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ

ಇತ್ತೀಚಿನ ಸುದ್ದಿ

ಕೇಂದ್ರ ಸರಕಾರದಿಂದ ಅಕ್ಕಿ ನಿರಾಕರಣೆ: ಜೂ. 20ರಂದು ರಾಜ್ಯಾದ್ಯಂತ ‘ಭೂತ ದಹನ’ ಪ್ರತಿಭಟನೆಗೆ ಸಿಪಿಎಂ ಕರೆ

18/06/2023, 20:10

ಬೆಂಗಳೂರು(reporterkarnataka.com):ಕರ್ನಾಟಕ ಸರಕಾರ ಜೂಲೈ ಒಂದರಿಂದ ಎಲ್ಲ ಬಿಪಿಎಲ್, ಅಂತ್ಯೋದಯ ಕಾರ್ಡದಾರರಿಗೆ ಈಗ ನೀಡಲಾಗುತ್ತಿದ್ದ 5 ಕೆಜಿ ಅಕ್ಕಿಯನ್ನು ಹೆಚ್ಚಿಸಿ ತಲಾ 10 ಕೆಜಿ ಅಕ್ಕಿ ಅಥವಾ ಆಹಾರಧಾನ್ಯ ನೀಡಲು ನಿರ್ಧರಿಸಿ ಪ್ರಕಟಿಸಿದ್ದು ಸ್ವಾಗತಾರ್ಹವಾಗಿದೆ.
ಆದರೇ, ಒಕ್ಕೂಟ ಸರಕಾರವು ರಾಜ್ಯಕ್ಕೆ ಹೆಚ್ಚುವರಿ ಆಹಾರಧಾನ್ಯ ನೀಡುವಲ್ಲಿ ಸಂಕುಚಿತ ರಾಜಕೀಯ ಮಾಡುತ್ತಿರುವುದು ತೀವ್ರ ಖಂಡನೀಯವಾಗಿದೆ.

ರಾಜ್ಯ ಸರಕಾರದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿ ಹೆಚ್ಚುವರಿ ಆಹಾರಧಾನ್ಯ ನೀಡಲು ಭಾರತ ಆಹಾರ ನಿಗಮದ ಅಧಿಕಾರಿಗಳು ಒಪ್ಪಿದ್ದರೂ ಕೂಡಾ, ಒಕ್ಕೂಟ ಸರಕಾರ ಬಡವರ ವಿರೋಧಿಯಾಗಿ ನಿಂತಿರುವುದು ಅಕ್ಷಮ್ಯವಾಗಿದೆ. ಬಿಜೆಪಿ ಮತ್ತು ಒಕ್ಕೂಟ ಸರಕಾರ ತಮ್ಮ ಸಂಕುಚಿತ ಜನ ವಿರೋದಿ ರಾಜಕಾರಣವನ್ನು ಈ ಕೂಡಲೇ ಕೈ ಬಿಟ್ಟು ಒಪ್ಪಂದದಂತೆ ಭಾರತ ಆಹಾರ ನಿಗಮದ ಮೂಲಕ ಆಹಾರ ಧಾನ್ಯಗಳನ್ನು ಒದಗಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಿಪಿಐಎಂ ಪಕ್ಷವು ಒಕ್ಕೂಟ ಸರಕಾರ ಹಾಗೂ ಪ್ರಧಾನ ಮಂತ್ರಿಗಳನ್ನು ಬಲವಾಗಿ ಒತ್ತಾಯಿಸುತ್ತದೆ.
ರಾಜ್ಯ ಸರಕಾರದ ಈ ಯೋಜನೆಯು ಬಡವರ ಹಸಿವು ನೀಗಿಸಲು ನೆರವಾಗುವ ಯೋಜನೆಯಾಗಿದ್ದು ಇದು ಹಸಿವಿನ ಸೂಚ್ಯಂಕದಲ್ಲಿ ಅತ್ಯಂತ ತಳ ಮಟ್ಟದಲ್ಲಿರುವ ನಮ್ಮ ದೇಶವನ್ನು ಸ್ವಲ್ಪವಾದರೂ ಮೇಲೆತ್ತುವ ಯೋಜನೆಯೆಂಬುದನ್ನು ಒಕ್ಕೂಟ ಸರಕಾರ ಅರಿಯ ಬೇಕು.
ಒಕ್ಕೂಟ ಸರಕಾರ ರಾಜ್ಯ ಹಿತದ ವಿರುದ್ದ ನಗ್ಙವಾಗಿ ನಿಂತಿರುವಾಗ ನಮ್ಮ ರಾಜ್ಯ ಬಹುತೇಕರು ಬಿಜೆಪಿ ಎಂಪಿಗಳಿರುವಾಗ ಅವರು ಬಾಯಿ ಹೊಲೆದುಕೊಂಡಿರುವುದು ಅವರ ವಿರೋದಿ ನೀತಿಯನ್ನು ಬಯಲುಗೊಳಿಸುತ್ತದೆ ಎಂದು ಕಟುವಾಗಿ ಠೀಕಿಸಿದೆ.
ಜನರಿಗೆ ಆಹಾರಧಾನ್ಯದ ಬದಲು ನಗದು ವರ್ಗಾವಣೆ ಮಾಡುವಂತೆ ಸೂಚಿಸುವ ಬಿಜೆಪಿ ಧೋರಣೆಯು ಬಡವರಪರವಾಗಿರದೇ ಲೂಟಿಕೋರ ಕಾರ್ಪೊರೇಟ್ ಕಂಪನಿಗಳ ಪರವಾದ ನೀತಿಯಾಗಿದೆ.
ಒಕ್ಕೂಟ ಸರಕಾರದ ಈ ಜನ ವಿರೋಧಿ ನೀತಿಯನ್ನು ಖಂಡಿಸಿ ರಾಜ್ಯದಾದ್ಯಂತ ಜೂನ್ 20 ರಂದು ಒಕ್ಕೂಟ ಸರಕಾರದ ಬಡವರ ವಿರೋಧಿ ನೀತಿಯ ಭೂತ ದಹನ ಮಾಡುವ‌ ಮೂಲಕ ತೀವ್ರ ಪ್ರತಿಭಟನಾ ಪ್ರದರ್ಶನ ನಡೆಸಲು ಸಿಪಿಎಂ ರಾಜ್ಯ ಸಮಿತಿ ತನ್ನೆಲ್ಲಾ ಘಟಕಗಳಿಗೆ ಮತ್ತು ರಾಜ್ಯದ ಜನತೆಗೆ ಕರೆ ನೀಡುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು