3:30 PM Tuesday10 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ವಿದ್ಯಾರ್ಥಿನಿಯ ಬೆತ್ತಲೆ ವೀಡಿಯೊ ಮಾಡಿ ಹಣಕ್ಕಾಗಿ ಬ್ಲ್ಯಾಕ್ ಮೇಲ್ ಆರೋಪ: ಪ್ರತೀಕ್ ಗೌಡ ಬಂಧನ; ಈತ ಎಬಿವಿಪಿ ಮುಖಂಡನೇ?

19/06/2023, 16:22

ಶಿವಮೊಗ್ಗ(reporterkarnataka.com): ಕಾಲೇಜು ವಿದ್ಯಾರ್ಥಿನಿಯೊಬ್ಬಳ ಬೆತ್ತಲೆ ವಿಡಿಯೋ ಮಾಡಿ ಹಣಕ್ಕಾಗಿ ಬ್ಲಾಕ್‌ಮೇಲ್‌ ಮಾಡುತ್ತಿದ್ದ ಪ್ರತೀಕ್ ಗೌಡ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಈತ ಎಬಿವಿಪಿ ತಾಲೂಕು ಘಟಕದ ಅಧ್ಯಕ್ಷ ಎನ್ನಲಾಗಿದೆ. ಆದರೆ ಎಬಿವಿಪಿಯು ತಮ್ಮ ಸಂಘಟನೆಗೂ ಆರೋಪಿ ಪ್ರತೀಕ್ ಗೌಡನಿಗೂ ಸಂಬಂಧವಿಲ್ಲ ಎಂದು ಹೇಳಿಕೊಂಡಿದೆ.

ಪ್ರತೀಕ್ ಗೌಡ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ
ಯುವತಿಯೊಬ್ಬಳಿಗೆ ವೀಡಿಯೋ ಕಾಲ್‌ ಮಾಡಿ ನಗ್ನಳಾಗುವಂತೆ ಒತ್ತಾಯಿಸಿದ್ದನು. ಅದನ್ನು ರೆಕಾರ್ಡ್ ಮಾಡಿದ ನಂತರ
ಹಣ ನೀಡುವಂತೆ ಯುವತಿಯನ್ನು ಬ್ಲಾಕ್‌ ಮಾಡಲಾರಂಭಿಸಿದನು. ವಿದ್ಯಾರ್ಥಿನಿ ಹಣ ನೀಡಲು ನಿರಾಕರಿಸಿದಾಗ ಆಕ್ರೋಶಗೊಂಡ ಆತ
ವಾಟ್ಸಾಪ್ ಗುಂಪುಗಳಲ್ಲಿ ವಿಡಿಯೋ ಷೇರ್ ಮಾಡಿ ವಿಕೃತಿ ಮೆರೆದಿದ್ದನು ಎಂದು ಆರೋಪಿಸಿ ಆತನ ಮೇಲೆ ದೂರು ನೀಡಿತ್ತು.
ಈ ನಡುವೆ ಪ್ರತೀಕ್ ಗೌಡ ವಿರುದ್ಧ ಪ್ರಕರಣ ದಾಖಲಾಗುತ್ತಿದ್ದಂತೆ ತೀರ್ಥಹಳ್ಳಿ ಎಬಿವಿಪಿ ಘಟಕವು ಪ್ರತೀಕ್ ಗೌಡ ನಮ್ಮ ಸಂಘಟನೆಯಲ್ಲೇ ಇಲ್ಲ. ಈತನಿಗೂ ಸಂಘಟನೆಗೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟನೆ ನೀಡಿದೆ. ಆದರೆ ಪ್ರತೀಕ್ ಗೌಡ ಎಬಿವಿಪಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ಹಲವು ಫೋಟೋಗಳು ಲಭ್ಯವಿದೆ.

ಇತ್ತೀಚಿನ ಸುದ್ದಿ

ಜಾಹೀರಾತು