1:28 PM Wednesday28 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಉಂದು ನಾಟಕ..ಬಲೆ ಬುಲಿಪಾಲೆ ಸೀಸನ್ 3 ಉದ್ಘಾಟನೆ: ಸಾಧಕಿ ಮಹಿಳೆಯರಿಂದ ಚಾಲನೆ; ಪ್ರಥಮ ಬಹುಮಾನ 2 ಲಕ್ಷ

20/06/2023, 18:46

ಮಂಗಳೂರು(reporterkarnataka.com): ಕರಾವಳಿ ಕರ್ನಾಟಕದ ನಾಡಿಮಿಡಿತ ನಮ್ಮ ಟಿವಿಯ ಜನಪ್ರಿಯ ಕಾರ್ಯಕ್ರಮ ಉಂದು ನಾಟಕ…ಬಲೆ ಬುಲಿಪಾಲೆ ಸ್ಪರ್ಧೆಯ ಮೂರನೇ ಆವೃತ್ತಿಯನ್ನು ಸಾಧಕ ಮಹಿಳೆಯರಾದ ಹರೇಕಳದ ನಫೀಸಾ ಹಾಗೂ ಅವರ ಮಗಳು ನಜ್ರೀನ ಇತ್ತೀಚೆಗೆ ಉದ್ಘಾಟಿಸಿದರು.


ಉಂದು ನಾಟಕ ಬಲೆ ಬುಲೆಪಾಲೆಯ 2 ಆವೃತ್ತಿಗಳು ಈಗಾಗಲೇ ಅಪಾರ ಜನಪ್ರಿಯತೆಯನ್ನು ಪಡೆದುಕೊಂಡಿದ್ದು ಹಲವಾರು ಕಲಾವಿದರು ಮುನ್ನಡೆಗೆ ಬರುವಂತೆ ಮಾಡಿದೆ. ಮಾತ್ರವಲ್ಲದೆ ಈ ಕಾರ್ಯಕ್ರಮದ ಮೂಲಕ ಹಲವಾರು ಕಲಾವಿದರಿಗೆ ಸಿನಿಮಾಗಳಲ್ಲಿ ಅವಕಾಶಗಳು ದೊರಕಿವೆ. ಇತ್ತೀಚೆಗೆ ಇದರ ಮೂರನೇ ಆವೃತ್ತಿಯ ಚಿತ್ರೀಕರಣ ಆರಂಭಗೊಂಡಿದ್ದು, ಇತ್ತೀಚೆಗೆ ಮಂಗಳೂರಿನ ಪುರಭವನದಲ್ಲಿ ಉದ್ಘಾಟನೆಗೊಂಡಿತು.
ಬಡತನದ ಬೇಗೆಯಲ್ಲಿ ಬೆಂದರೂ ಸಾಧಿಸುವ ಛಲ ದೊಂದಿಗೆ ಹೈನುಗಾರಿಕೆಯನ್ನು ಆರಂಭಿಸಿ, ಇದೀಗ ಸುಮಾರು 75 ಗೋವುಗಳನ್ನು ಸ್ವತಹ ತಾವೇ ಸಾಕುವ ಮೂಲಕ ಯಶಸ್ಸನ್ನು ಕಂಡಿರುವ, ಮಾತ್ರವಲ್ಲದೆ ಹೈನುಗಾರಿಕೆಯಿಂದ ಬರುವ ಲಾಭಾಂಶದ ಬಹುಪಾಲನ್ನು ಸಮಾಜಮುಖಿ ಕಾರ್ಯಗಳಿಗೆ ವಿನಿಯೋಗಿಸಿ ಮಾದರಿಯಾಗಿರುವ ಹರೇಕಳದ ನಫೀಸಾ ಮತ್ತು ಆಕೆಯ ಮಗಳು ನಜ್ರೀನಾ ಉಂದು ನಾಟಕ ಬಲಿಬುಲಿಪಾಲೆ ಮೂರನೇ ಆವೃತ್ತಿಯನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.
ಕಿತ್ತಲೆ ಹಣ್ಣು ಮಾರಿ ಬಂದ ದುಡ್ಡಿನಲ್ಲಿ ಶಾಲೆ ನಿರ್ಮಿಸಿ ಸಹಸ್ರಾರು ಮಕ್ಕಳಿಗೆ ವಿದ್ಯಾಭ್ಯಾಸವನ್ನು ಕಲ್ಪಿಸಿಕೊಟ್ಟು ಪದ್ಮಶ್ರೀ ಪ್ರಶಸ್ತಿಯಿಂದ ಪುರಸ್ಕೃತರಾಗಿರುವ ಹಾಜಬ್ಬರಿಂದಾಗಿ ರಾಜ್ಯಾದ್ಯಂತ ಸುದ್ದಿಯಾಗಿರುವ
ಹರೇಕಳ ಎಂಬ ಊರು ಇದೀಗ ಮತ್ತೊಮ್ಮೆ ಈ ಸಾಧಕ ಮಹಿಳೆಯರಿಂದ ಸುದ್ದಿಯಾಗುತ್ತಿದೆ. ಬಡತನದಲ್ಲಿರುವ ವಿದ್ಯಾರ್ಥಿಗಳಿಗೆ ವಿದ್ಯೆಗೆ ಸಹಾಯ, ಬಡ ರೋಗಿಗಳ ಚಿಕಿತ್ಸೆಗೆ ಹಣ, ಕಷ್ಟದಲ್ಲಿರುವ ಕುಟುಂಬದ ಹೆಣ್ಣು ಮಗಳ ಮದುವೆಗೆ ಆರ್ಥಿಕ ನೆರವು, ಹೀಗೆ ಹಲವಾರು ಉತ್ತಮ ಕಾರ್ಯಗಳನ್ನು ನಡೆಸುತ್ತಾ ಬಂದಿರುವ ನಫೀಸಾ ಹಾಗೂ ಅವರ ಮಗಳು ನಜ್ರೀನಾ ಇತರರಿಗೆ ಮಾದರಿಯಾಗಿದ್ದಾರೆ. ಅದರಲ್ಲೂ ನಜ್ರೀನಾ ಇಂಜಿನಿಯರಿಂಗ್ ಪದವೀಧರೆಯಾಗಿದ್ದರು ಹಸು ಕರುಗಳ ಮೇಲೆ ವಿಶೇಷ ಅಕ್ಕರೆಯನ್ನು ಹೊಂದಿದ್ದು ,ಅವುಗಳ ಆರೈಕೆಗಾಗಿ ತನ್ನ ಜೀವನವನ್ನು ಮುಡಿಪಾಗಿಟ್ಟಿದ್ದು ವಿಶೇಷ.ಉಂದು ನಾಟಕ ಬಲೆ ಬಲಿಪಾಲೆಯ ತೀರ್ಪುಗಾರರಾಗಿರುವ ತುಳುರಂಗಭೂಮಿ ಹಾಗೂ ಸಿನಿಮಾ ಕ್ಷೇತ್ರದ ದಿಗ್ಗಜ ನಿರ್ದೇಶಕರಾಗಿರುವ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಹಾಗೂ ತೆಲಿಕೆದ ಬೊಳ್ಳಿ ಡಾ. ದೇವದಾಸ್ ಕಾಪಿಕಾಡ್ ಉದ್ಘಾಟನಾ ಸಮಾರಂಭದಲ್ಲಿ ತಾರಾ ಮೆರುಗು ನೀಡಿದರು.
ಉಂದು ನಾಟಕ ಬಲೆ ಬುಲೆಪಾಲೆಯ ಮೂರನೇ ಆವೃತ್ತಿಯ ಸ್ಪರ್ಧೆಯ ಪ್ರಥಮ ಸ್ಥಾನಿಗೆ ರೂಪಾಯಿ ಎರಡು ಲಕ್ಷ ಹಾಗೂ ದ್ವಿತೀಯ ಸ್ಥಾನಿಗೆ ರುಪಾಯಿ ಒಂದು ಲಕ್ಷ ನಗದು ಬಹುಮಾನ ದೊರೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು