7:53 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಮಲೆ ಮಹಾದೇಶ್ವರ ಬೆಟ್ಟಕ್ಕೆ ಮಹಿಳಾ ಭಕ್ತರ ದಂಡು: ಟ್ರಾಫಿಕ್ ಜಾಮ್; 5 ಕಿಮೀಗೂ ಹೆಚ್ಚು ಉದ್ದಕ್ಕೆ ವಾಹನಗಳ ಸಾಲು

21/06/2023, 13:45

ಶ್ರುತಿ ಹಾನಗಲ್ ಚಾಮರಾಜನಗರ

info.reporterkarnataka@gmail.com

ಸಾಮಾನ್ಯವಾಗಿ ಭಕ್ತರಿಂದ ತುಂಬಿ ತುಳುಕುತ್ತಿರುವ ಮಲೆ ಮಹಾದೇಶ್ವರ ಬೆಟ್ಟಕ್ಕೆ ಶಕ್ತಿ ಯೋಜನೆ ಅನುಷ್ಠಾನಗೊಂಡ ಬಳಿಕ ಯಾತ್ರಿಕರ ಸಂಖ್ಯೆ 4 ಪಟ್ಟು ಜಾಸ್ತಿಯಾಗಿದ್ದು, 5 ಕಿಮೀ ಉದ್ದಕ್ಕೆ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ.

ಮಹಿಳೆಯರಿಗೆ ಉಚಿತ ಬಸ್ ಯಾನ ಬಳಿಕ ಮಲೆ ಮಹಾದೇಶ್ವರ ಸ್ವಾಮಿಗೆ ಬೇಡಿಕೆ ಇನ್ನಷ್ಟು ಜಾಸ್ತಿಯಾಗಿದೆ. ಮಹಿಳಾ ಯಾತ್ರಾರ್ಥಿಗಳ ಸಂಖ್ಯೆ ಬಹಳಷ್ಟು ಹೆಚ್ಚಾಗಿದೆ. ಬೆಟ್ಟವೇರುವ ಪ್ರತಿಯೊಂದು ಬಸ್ಸುಗಳು ಮಹಿಳಾ ಪ್ರಯಾಣಿಕರಿಂದ ತುಂಬಿ ತುಳುಕುತ್ತಿದೆ. ಸರಕಾರ ಉಚಿತ ಬಸ್ ಪ್ರಯಾಣವನ್ನೇನೊ ಮಹಿಳೆಯರಿಗೆ ಕಲ್ಪಿಸಿದೆ. ಆದರೆ ಬಸ್ಸಿನ ಸಂಖ್ಯೆಯನ್ನು ಹೆಚ್ಚಿಸಿಲ್ಲ ಎಂದು ಭಕ್ತಾಧಿಗಳು ಆಡಿಕೊಳ್ಳುತ್ತಿದ್ದಾರೆ. ಮಲೆ ಮಹದೇಶ್ವರ ಬೆಟ್ಟದಿಂದ ನಿರ್ಗಮಿಸಲು ಯಾತ್ರಿಕರು ಬಸ್ಸುಗಳಿಗೆ ಮುಗಿಬೀಳುತ್ತಾರೆ. ಕಿಟಕಿ ಮೂಲಕ ಬಸ್ಸೇರುವುದು, ಚಾಲಕನ ಸೀಟು ಬಳಿಯ ಡೋರ್ ಮೂಲಕ ಬಸ್ ಹತ್ತುವ ದೃಶ್ಯಗಳು ಸಾಮಾನ್ಯವಾಗಿದೆ. ಜಗಳ, ಕಾದಾಟ, ಬೈಗಳು ಕೂಡ ಪರಸ್ಪರ ವಿನಿಮಯವಾಗುತ್ತದೆ.
ಖಾಸಗಿ ವಾಹನಗಳ,ಕಾರು ಬೈಕ್ ಸಂಖ್ಯೆಯೂ ಅತ್ಯಧಿಕವಾಗಿದೆ.
ಹನೂರು ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಈ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಣ್ಣೆತ್ತಿನ ಅಮವಾಸ್ಯೆ ವಿಶೇಷವಾಗಿ ಸಹಸ್ರಾರರು ಭಕ್ತಸಾಗರ ಹರಿದು ಬರುತ್ತಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು