6:42 PM Monday30 - March 2026
ಬ್ರೇಕಿಂಗ್ ನ್ಯೂಸ್
ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್…

ಇತ್ತೀಚಿನ ಸುದ್ದಿ

ಮಲೆ ಮಹಾದೇಶ್ವರ ಬೆಟ್ಟಕ್ಕೆ ಮಹಿಳಾ ಭಕ್ತರ ದಂಡು: ಟ್ರಾಫಿಕ್ ಜಾಮ್; 5 ಕಿಮೀಗೂ ಹೆಚ್ಚು ಉದ್ದಕ್ಕೆ ವಾಹನಗಳ ಸಾಲು

21/06/2023, 13:45

ಶ್ರುತಿ ಹಾನಗಲ್ ಚಾಮರಾಜನಗರ

info.reporterkarnataka@gmail.com

ಸಾಮಾನ್ಯವಾಗಿ ಭಕ್ತರಿಂದ ತುಂಬಿ ತುಳುಕುತ್ತಿರುವ ಮಲೆ ಮಹಾದೇಶ್ವರ ಬೆಟ್ಟಕ್ಕೆ ಶಕ್ತಿ ಯೋಜನೆ ಅನುಷ್ಠಾನಗೊಂಡ ಬಳಿಕ ಯಾತ್ರಿಕರ ಸಂಖ್ಯೆ 4 ಪಟ್ಟು ಜಾಸ್ತಿಯಾಗಿದ್ದು, 5 ಕಿಮೀ ಉದ್ದಕ್ಕೆ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ.

ಮಹಿಳೆಯರಿಗೆ ಉಚಿತ ಬಸ್ ಯಾನ ಬಳಿಕ ಮಲೆ ಮಹಾದೇಶ್ವರ ಸ್ವಾಮಿಗೆ ಬೇಡಿಕೆ ಇನ್ನಷ್ಟು ಜಾಸ್ತಿಯಾಗಿದೆ. ಮಹಿಳಾ ಯಾತ್ರಾರ್ಥಿಗಳ ಸಂಖ್ಯೆ ಬಹಳಷ್ಟು ಹೆಚ್ಚಾಗಿದೆ. ಬೆಟ್ಟವೇರುವ ಪ್ರತಿಯೊಂದು ಬಸ್ಸುಗಳು ಮಹಿಳಾ ಪ್ರಯಾಣಿಕರಿಂದ ತುಂಬಿ ತುಳುಕುತ್ತಿದೆ. ಸರಕಾರ ಉಚಿತ ಬಸ್ ಪ್ರಯಾಣವನ್ನೇನೊ ಮಹಿಳೆಯರಿಗೆ ಕಲ್ಪಿಸಿದೆ. ಆದರೆ ಬಸ್ಸಿನ ಸಂಖ್ಯೆಯನ್ನು ಹೆಚ್ಚಿಸಿಲ್ಲ ಎಂದು ಭಕ್ತಾಧಿಗಳು ಆಡಿಕೊಳ್ಳುತ್ತಿದ್ದಾರೆ. ಮಲೆ ಮಹದೇಶ್ವರ ಬೆಟ್ಟದಿಂದ ನಿರ್ಗಮಿಸಲು ಯಾತ್ರಿಕರು ಬಸ್ಸುಗಳಿಗೆ ಮುಗಿಬೀಳುತ್ತಾರೆ. ಕಿಟಕಿ ಮೂಲಕ ಬಸ್ಸೇರುವುದು, ಚಾಲಕನ ಸೀಟು ಬಳಿಯ ಡೋರ್ ಮೂಲಕ ಬಸ್ ಹತ್ತುವ ದೃಶ್ಯಗಳು ಸಾಮಾನ್ಯವಾಗಿದೆ. ಜಗಳ, ಕಾದಾಟ, ಬೈಗಳು ಕೂಡ ಪರಸ್ಪರ ವಿನಿಮಯವಾಗುತ್ತದೆ.
ಖಾಸಗಿ ವಾಹನಗಳ,ಕಾರು ಬೈಕ್ ಸಂಖ್ಯೆಯೂ ಅತ್ಯಧಿಕವಾಗಿದೆ.
ಹನೂರು ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಈ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಣ್ಣೆತ್ತಿನ ಅಮವಾಸ್ಯೆ ವಿಶೇಷವಾಗಿ ಸಹಸ್ರಾರರು ಭಕ್ತಸಾಗರ ಹರಿದು ಬರುತ್ತಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು