2:20 AM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಗುತ್ತಿಗೆದಾರರಿಂದ ತುಘಲಕ್‌ ದರ್ಬಾರ್‌: ಕಾರ್ಕಳ ಬಿಜೆಪಿ ಆರೋಪ; ಪ್ರತಿಭಟನೆಯ ಎಚ್ಚರಿಕೆ

21/06/2023, 19:54

ಕಾರ್ಕಳ(reporterkarnataka.com): ರಾಜ್ಯದಲ್ಲಿ ಕಾಂಗ್ರೆಸ್‌ ಆಡಳಿತಕ್ಕೆ ಬಂದಂದಿನಿಂದ ಕಾರ್ಕಳದಲ್ಲಿ ಒಬ್ಬರು ತಾನೇ ಜನಪ್ರತಿನಿಧಿಯ ತರಹ ತನ್ನ ತಂಡದೊಂದಿಗೆ ಯಾವುದಾದರೊಂದು ಇಲಾಖೆ ಕಚೇರಿಗೆ ಹೋಗಿ ಅಧಿಕಾರಿಗಳಿಗೆ ಬೆದರಿಕೆ ಹಾಕುತ್ತಿರುವುದು, ಕೇಳದಿದ್ದಲ್ಲಿ ವರ್ಗಾವಣೆ ಮಾಡುತ್ತೇವೆ ಎಂದು ಬೆದರಿಸುತ್ತಿದ್ದಾರೆ. ಒಂದು ವೇಳೆ ಇಂತಹ ಚಾಳಿ ಮುಂದುವರೆದಲ್ಲಿ ಈ ವಿಷಯವನ್ನೇ ಮುಂದಿಟ್ಟುಕೊಂಡು ಕಾರ್ಕಳ ಭಾರತೀಯ ಜನತಾ ಪಕ್ಷವು ಮುಂದಿನ ದಿನಗಳಲ್ಲಿ ಬೃಹತ್‌ ಪ್ರತಿಭಟನೆ ಮಾಡಬೇಕಾದೀತು ಎಂದು ಎಚ್ಚರಿಕೆ ನೀಡಿದೆ.
ಚುನಾವಣಾ ಫಲಿತಾಂಶದ ದಿನ ಒಂದು ಕ್ಷಣಕ್ಕೆ ತಾನೇ ವಿಜಯಿ ಆಗಿದ್ದೇನೆಂದು ಬೀಗಿದ ಕಾರ್ಕಳದ ಗುತ್ತಿಗೆದಾರರೊಬ್ಬರು ಅದರ ಗುಂಗಿನಿಂದ ಹೊರಬಾರದೆ ಕಾರ್ಕಳದ ಸಾರ್ವಜನಿಕ ಆಸ್ಪತ್ರೆಯಲ್ಲಿ ಆಡಳಿತ ವೈದ್ಯಾಧಿಕಾರಿ ಹಾಗೂ ಇತರ ವೈದ್ಯರ ಹಾಗೂ ಸಿಬ್ಬಂಧಿಗಳ ಸಭೆ ಮಾಡಿರುವ ಬಗ್ಗೆ ಮಾಧ್ಯಮಗಳಲ್ಲಿ ಸುದ್ಧಿ ಹರಡಿದಾಡುತ್ತಿರುವುದು ಗಮನಕ್ಕೆ ಬಂದಿದೆ. ಒಬ್ಬ ಯಾವುದೇ ಹಂತದ ಜನಪ್ರತಿನಿಧಿ ಅಲ್ಲದವರು ಈ ತರಹ ಇಲಾಖೆಯ ಸಭೆ ನಡೆಸಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾಡಿದ ಅವಮಾನವಾಗಿದೆ. ಇಡೀ ಉಡುಪಿ ಜಿಲ್ಲೆಯ ಜನತೆ ಕಾಂಗ್ರೆಸ್‌ ಪಕ್ಷವನ್ನು ಎಲ್ಲ ಕಡೆ ತಿರಸ್ಕರಿಸಿದ್ದಾರೆ. ಆದರೂ ತಾನೇ ಜನಪ್ರತಿನಿಧಿಗಳಂತೆ ವರ್ತಿಸುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾಡುತ್ತಿರುವ ಅವಮಾನ. ಯಾವುದೋ ಒಬ್ಬ ಚುನಾವಣೆಯಲ್ಲಿ ಸೋತ ಅಭ್ಯರ್ಥಿ ಸರಕಾರಿ ಕಚೇರಿಯಲ್ಲಿ, ಇಲಾಖೆಯಲ್ಲಿ ಸಭೆ ನಡೆಸಬಹುದಾದರೆ ಕಾರ್ಕಳದ ಒಟ್ಟು 8 ಜನ ಸೋತ ಅಭ್ಯರ್ಥಿಗಳೂ ಇದೇ ತರಹ ಇನ್ನು ಅನುಕರಣೆ ಮಾಡಿದರೆ ಸರಕಾರಿ ಆಡಳಿತ ವ್ಯವಸ್ಥೆಯು ಕುಸಿಯುವ ಸಾಧ್ಯತೆ ಇದೆ.
ಇಂತಹ ಬೆದರಿಕೆ ತಂತ್ರವನ್ನು ಮುಂದುವರೆಸಿದರೆ ಕಾರ್ಕಳ ಭಾರತೀಯ ಜನತಾ ಪಾರ್ಟಿಯು ಇದಕ್ಕೆ ತಕ್ಕುದಾದ ಪ್ರತಿಕ್ರಿಯೆಯನ್ನು ನೀಡಲಿದೆ ಎಂದು ಈ ಮೂಲಕ ತಿಳಿಯಪಡಿಸುತ್ತೇನೆ ಎಂದು ಕಾರ್ಕಳ ಬಿಜೆಪಿ ವಕ್ತಾರ ಹರೀಶ್ ಶೆಣೈ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು