2:04 AM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಕೊರೊನಾದಿಂದ ಸತ್ತವರು 30 ಸಾವಿರ ಅಲ್ಲ, 3 ಲಕ್ಷಕ್ಕೂ ಅಧಿಕ: ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್

20/07/2021, 17:53

ಮಂಗಳೂರು(reporterkarnataka): ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ. ಈ ನಿಟ್ಟಿನಲ್ಲಿ ರಾಜ್ಯಾದ್ಯಂತ ಪಕ್ಷದ ಮುಖಂಡರಿಗೆ ಹಾಗೂ ಕಾರ್ಯ ಕರ್ತರಿಗೆ ಪಕ್ಷ ಬಲಗೊಳಿಸುವ ನಿಟ್ಟಿನಲ್ಲಿ ಸಭೆ ನಡೆಸಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ  ಸಲೀಂ ಅಹಮ್ಮದ್ ಹೇಳಿದರು.

ಅವರು  ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. 

ಜುಲೈ 23ರಿಂದ 31ವರೆಗೆ ದಕ್ಷಿಣ ಕನ್ನಡ ಸೇರಿದಂತೆ ರಾಜ್ಯಾದ್ಯಂತ ಕಾಂಗ್ರೆಸ್ ಮುಖಂಡರುಗಳಿಗೆ ಪಕ್ಷ ಸಂಘಟನೆಯನ್ನು ಬಲಗೊಳಿಸುವ ನಿಟ್ಟಿನಲ್ಲಿ   ಸಭೆ ನಡೆಸಲಾಗುವುದು. ಆಗಸ್ಟ್ 23ಕ್ಕೆ ಮಂಗಳೂರಿಗೆ   ರಣದೀಪ್ ಸಿಂಗ್ ಸುರ್ಜೇವಾಲ ಆಗಮಿಸಿ ಸಭೆಯ ನೇತೃತ್ವ ವಹಿಸಲಿದ್ದಾರೆ.ಸಭೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ,
ಹಾಲಿ ಮಾಜಿ, ಶಾಸಕರು, ಸಂಸದರು, ಜಿಲ್ಲಾವಾರು ಮುಖಂಡರುಗಳು ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಕೊರೊನಾ 2ನೇ ಅಲೆಯ ಬಗ್ಗೆ ಕಾಂಗ್ರೆಸ್ ಎಚ್ಚರಿಕೆ ನೀಡಿದ್ದರೂ ಬಿಜೆಪಿ ಸರ್ಕಾರ ಜನರ ಜೀವದ ಜತೆ ಚೆಲ್ಲಾಟವಾಡಿದೆ. ಸರಕಾರ ಕೊರೊನಾದಿಂದ ಸತ್ತವರಿಗೆ  ಪರಿಹಾರ ನಿಧಿ ಕೊಡಬೇಕಾದ್ದರಿಂದ ಸತ್ತವರು 30 ಸಾವಿರ ಎಂದು ಘೋಷಿಸಿದೆ. ಆದರೆ ಸತ್ತವರ ಸಂಖ್ಯೆ 3 ಲಕ್ಷಕ್ಕಿಂತ ಹೆಚ್ಚಿದೆ ಎಂದು ಆರೋಪಿಸಿದರು. ಈ ಬಗ್ಗೆ ಕಾಂಗ್ರೆಸ್ ಡೆತ್ ಸಮೀಕ್ಷೆ ನಡೆಸಲಿದೆ ಎಂದು ಹೇಳಿದರು. 

3ನೇ ಅಲೆಯ ಬರುತ್ತಿದೆ. ನಿಮ್ಮ ರಾಜಕೀಯ ಡೊಂಬರಾಟ ನಿಲ್ಲಿಸಿ ಜನರ ಪ್ರಾಣ ರಕ್ಷಿಸಿ ಎಂದು  ಬಿಜೆಪಿ ಸರಕಾರಕ್ಕೆ ಎಚ್ಚರಿಕೆ  ನೀಡುತ್ತಿದ್ದೇವೆ. ಎಂದರು. 

ಸಂಸದ ನಳಿನ್ ಕುಮಾರ್ ಆಡಿಯೋ ಬಗ್ಗೆ ಪ್ರತಿಕ್ರಿಯಿಸಿ ಯು. ಟಿ. ಖಾದರ್ ಈ ಧ್ವನಿ ಅವರದಲ್ಲ ಎಂದು ಮುಖ್ಯ ಮಂತ್ರಿ ಪ್ರಮಾಣೀಕರಿಸಲಿ ಎಂದು ಕುಟುಕಿದರು. 

ಮಾಜಿ ಸಚಿವ ರಮಾನಾಥ ರೈ, ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ದ. ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಹರೀಶ್ ಕುಮಾರ್, ಮಾಜಿ ಶಾಸಕ ಜೆ. ಆರ್. ಲೋಬೊ, ಯುತ್ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಮತ್ತಿತರರು ಉಪಸ್ಥಿತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು