2:12 PM Tuesday10 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ನೇಣು ಬಿಗಿದು ಯುವಕ ಆತ್ಮಹತ್ಯೆ: ಸಾವಿಗೆ ಮುನ್ನ ಆತ ಡೆತ್ ನೋಟ್ ನಲ್ಲಿ ಬರೆದದ್ದು ಏನು? ಆತನಿಗೆ ಕಿರುಕುಳ ಕೊಟ್ಟವನು ಯಾರು?

21/06/2023, 21:21

ಉಳ್ಳಾಲ(reporterkarnataka.com): ತೊಕ್ಕೊಟ್ಟು ಸಮೀಪದ ಕಾಪಿಕಾಡು ಬಳಿಯ ಸತ್ಯನಾರಾಯಣ ಕಂಪೌಂಡ್ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿದ ಘಟನೆ ನಡೆದಿದೆ.
ಸತ್ಯನಾರಾಯಣ ಕಂಪೌಂಡ್‌ ನಿವಾಸಿ ನಿತಿನ್ ಪೂಜಾರಿ(36) ಆತ್ಮಹತ್ಯೆ ಮಾಡಿಕೊಂಡ ಯುವಕ. ನಿತಿನ್ ಇಂದು ಮಧ್ಯಾಹ್ನ ತನ್ನ ಮನೆಯ ಕೋಣೆಯೊಳಗೆ ಹೋಗಿ ಬಾಗಿಲು ಮುಚ್ಚಿದ್ದ. ನೆರೆಯ ಮನೆಯಲ್ಲಿ ಬೀಡಿ ಕಟ್ಟುತ್ತಿದ್ದ ಆತನ ತಾಯಿ ಬಂದು ಕೋಣೆಯ ಬಾಗಿಲು ಬಡಿದಿದ್ದು ಬಾಗಿಲ ಎಡೆಯಿಂದ ನೋಡಿದಾಗ ಮಗ ಫ್ಯಾನಿಗೆ ನೇಣು ಬಿಗಿದಿರುವುದು ಕಂಡು ಬಂತು.



ನಿತಿನ್ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಡೆತ್ ನೋಟ್ ಬರೆದಿದ್ದಾನೆ ಎಂದು ತಿಳಿದು ಬಂದಿದೆ. ಡೆತ್ ನೋಟ್ ನಲ್ಲಿ ತನ್ನ ಸಾವಿಗೆ ಪ್ರವೀಣ್ ಶೆಟ್ಟಿ ಚೆಂಬುಗುಡ್ಡೆ ಎಂಬಾತ ನೇರ ಕಾರಣ. ಇವರಿಂದ ಮಾನಸಿಕವಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುತ್ತೇನೆ. ಇವನಿಗೆ ಕಠಿಣ ಶಿಕ್ಷೆಯನ್ನು ನೀಡಬೇಕಾಗಿ ವಿನಂತಿ ಎಂದು ಬರೆದಿದ್ದಾನೆ ಎಂದು ತಿಳಿದು ಬಂದಿದೆ.
ಮೃತ ನಿತಿನ್ ಈ ಮೊದಲು ಮಾಂಡೋವಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದು, ಈಗ ಸಿಕ್ಕಿದ ಸಣ್ಣ ಪುಟ್ಟ ಕೆಲಸಕ್ಕೆ ತೆರಳುತ್ತಿದ್ದನಂತೆ. ನಿತಿನ್ ಅಕ್ಕ ಬಾವ, ಅಮ್ಮನನ್ನ ಅಗಲಿದ್ದಾರೆ. ಸ್ಥಳಕ್ಕೆ ಬಂದ ಉಳ್ಳಾಲ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು ಪ್ರಕರಣ ದಾಖಲಿಸಿ ತನಿಖೆ ಕೈಗೆತ್ತಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು