7:14 PM Sunday29 - March 2026
ಬ್ರೇಕಿಂಗ್ ನ್ಯೂಸ್
ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌

ಇತ್ತೀಚಿನ ಸುದ್ದಿ

ನಿರ್ಲಕ್ಷ್ಯ ಚಾಲನೆ, ಕರ್ಕಶ ಹಾರ್ನ್: ಖಾಸಗಿ ಬಸ್ ಚಾಲಕನ ವಿರುದ್ಧ ಪ್ರಕರಣ ದಾಣಖಲು

21/06/2023, 21:55

ಮಂಗಳೂರು(reporterkarnataka.com): ಮುಡಿಪುನಿಂದ ತೌಡಗೋಳಿ ಮಾರ್ಗವಾಗಿ ಮಂಗಳೂರು ಕಡೆಗೆ ಸಾಗುತ್ತಿದ್ದ ಖಾಸಗಿ ಬಸ್ಸಿನ ಚಾಲಕನ ನಿರ್ಲಕ್ಷ್ಯ ಚಾಲನೆ ಮತ್ತು ಕರ್ಕಶ ಹಾರ್ನ್ ಹಾಕಿದಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಲಾಗಿದೆ.

KA51AC7835 ನಂಬರಿನ ಗೋಪಾಲಕೃಷ್ಣ ಬಸ್ಸಿನ ಚಾಲಕ ತ್ಯಾಗರಾಜ ಎಂಬಾತ ಜೂನ್ 20ರಂದು ಮಧ್ಯಾಹ್ನ 12 ಗಂಟೆಗೆ ಮುಡಿಪು ಕಡೆಯಿಂದ ತೌಡಗೋಳಿ ಮಾರ್ಗವಾಗಿ ಮಂಗಳೂರು ಕಡೆಗೆ ದುಡುಕುತನ ಹಾಗೂ ನಿರ್ಲಕ್ಷ ತನದಿಂದ ಸಾರ್ವಜನಿಕ ರಸ್ತೆಯಲ್ಲಿ ಮಾನವ ಜೀವಕ್ಕೆ ಹಾನಿಯಾಗುವ ರೀತಿಯಲ್ಲಿ ಕರ್ಕಶ ಹಾರ್ನ್ ಹಾಕುತ್ತಾ ಬಸ್ಸನ್ನು ಚಲಾಯಿಸಿದ್ದರಿಂದ ಆತನ ಮೇಲೆ ಸಂಚಾರ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.


ಮಂಗಳೂರು ನಗರದೊಳಗೆ ಕೂಡ ಕರ್ಕಶ ಹಾರ್ನ್ ಮತ್ತು ನಿರ್ಲಕ್ಷ್ಯ ಚಾಲನೆಯ ಸಮಸ್ಯೆ ಕಾಡುತ್ತಿದೆ. ನಗರದೊಳಗೆ ಪ್ರವೇಶಿಸುತ್ತಿದ್ದಂತೆ ಖಾಸಗಿ ಸರ್ವಿಸ್ ಮತ್ತು ಸಿಟಿ ಬಸ್ ಗಳ ವೇಗ ತಗ್ಗಬೇಕಾಗಿದ್ದರೂ ಹೆಚ್ಚಿನ ಬಸ್ ಚಾಲಕರು ವೇಗವನ್ನು ಹೆಚ್ಚಿಸುತ್ತಾರೆ. ಅದಲ್ಲದೆ ಕರ್ಕಶ ಹಾರ್ನ್ ಗಳ ಹಾವಳಿ ವಿಪರೀತವಾಗಿದೆ. ದ್ವಿಚಕ್ರ ವಾಹನಗಳನ್ನು ಓವರ್ ಟೇಕ್ ಮಾಡುತ್ತಿದ್ದಂತೆ ಕರ್ಕಶ ಹಾರ್ನ್ ಒತ್ತುವ ಚಾಲಕರು ನಮ್ಮಲ್ಲಿ ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಇದಕ್ಕೆ ಟ್ರಾಫಿಕ್ ಪೊಲೀಸರು ಕಡಿವಾಣ ಹಾಕುವ ಅಗತ್ಯವಿದೆ.

ಇತ್ತೀಚಿನ ಸುದ್ದಿ

ಜಾಹೀರಾತು