10:38 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ನಿರ್ಲಕ್ಷ್ಯ ಚಾಲನೆ, ಕರ್ಕಶ ಹಾರ್ನ್: ಖಾಸಗಿ ಬಸ್ ಚಾಲಕನ ವಿರುದ್ಧ ಪ್ರಕರಣ ದಾಣಖಲು

21/06/2023, 21:55

ಮಂಗಳೂರು(reporterkarnataka.com): ಮುಡಿಪುನಿಂದ ತೌಡಗೋಳಿ ಮಾರ್ಗವಾಗಿ ಮಂಗಳೂರು ಕಡೆಗೆ ಸಾಗುತ್ತಿದ್ದ ಖಾಸಗಿ ಬಸ್ಸಿನ ಚಾಲಕನ ನಿರ್ಲಕ್ಷ್ಯ ಚಾಲನೆ ಮತ್ತು ಕರ್ಕಶ ಹಾರ್ನ್ ಹಾಕಿದಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಲಾಗಿದೆ.

KA51AC7835 ನಂಬರಿನ ಗೋಪಾಲಕೃಷ್ಣ ಬಸ್ಸಿನ ಚಾಲಕ ತ್ಯಾಗರಾಜ ಎಂಬಾತ ಜೂನ್ 20ರಂದು ಮಧ್ಯಾಹ್ನ 12 ಗಂಟೆಗೆ ಮುಡಿಪು ಕಡೆಯಿಂದ ತೌಡಗೋಳಿ ಮಾರ್ಗವಾಗಿ ಮಂಗಳೂರು ಕಡೆಗೆ ದುಡುಕುತನ ಹಾಗೂ ನಿರ್ಲಕ್ಷ ತನದಿಂದ ಸಾರ್ವಜನಿಕ ರಸ್ತೆಯಲ್ಲಿ ಮಾನವ ಜೀವಕ್ಕೆ ಹಾನಿಯಾಗುವ ರೀತಿಯಲ್ಲಿ ಕರ್ಕಶ ಹಾರ್ನ್ ಹಾಕುತ್ತಾ ಬಸ್ಸನ್ನು ಚಲಾಯಿಸಿದ್ದರಿಂದ ಆತನ ಮೇಲೆ ಸಂಚಾರ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.


ಮಂಗಳೂರು ನಗರದೊಳಗೆ ಕೂಡ ಕರ್ಕಶ ಹಾರ್ನ್ ಮತ್ತು ನಿರ್ಲಕ್ಷ್ಯ ಚಾಲನೆಯ ಸಮಸ್ಯೆ ಕಾಡುತ್ತಿದೆ. ನಗರದೊಳಗೆ ಪ್ರವೇಶಿಸುತ್ತಿದ್ದಂತೆ ಖಾಸಗಿ ಸರ್ವಿಸ್ ಮತ್ತು ಸಿಟಿ ಬಸ್ ಗಳ ವೇಗ ತಗ್ಗಬೇಕಾಗಿದ್ದರೂ ಹೆಚ್ಚಿನ ಬಸ್ ಚಾಲಕರು ವೇಗವನ್ನು ಹೆಚ್ಚಿಸುತ್ತಾರೆ. ಅದಲ್ಲದೆ ಕರ್ಕಶ ಹಾರ್ನ್ ಗಳ ಹಾವಳಿ ವಿಪರೀತವಾಗಿದೆ. ದ್ವಿಚಕ್ರ ವಾಹನಗಳನ್ನು ಓವರ್ ಟೇಕ್ ಮಾಡುತ್ತಿದ್ದಂತೆ ಕರ್ಕಶ ಹಾರ್ನ್ ಒತ್ತುವ ಚಾಲಕರು ನಮ್ಮಲ್ಲಿ ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಇದಕ್ಕೆ ಟ್ರಾಫಿಕ್ ಪೊಲೀಸರು ಕಡಿವಾಣ ಹಾಕುವ ಅಗತ್ಯವಿದೆ.

ಇತ್ತೀಚಿನ ಸುದ್ದಿ

ಜಾಹೀರಾತು