7:25 AM Monday21 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ತನಿಖೆಯ ಅಗತ್ಯವಿಲ್ಲ, ಆಡಿಯೋ ನಳಿನ್ ಅವರದ್ದೇ ಎನ್ನುವುದರಲ್ಲಿ ಎರಡು ಮಾತಿಲ್ಲ: ಹೀಗೆಂತ ಹೇಳಿದರೇ ಸಿಎಂ ಯಡಿಯೂರಪ್ಪ? 

20/07/2021, 18:30

ಬೆಂಗಳೂರು(reporterkarnataka news): ತನಿಖೆ ನಡೆಸುವ ಅಗತ್ಯವೇ ಇಲ್ಲ, ಆ ಆಡಿಯೋ ನಳಿನ್ ಕುಮಾರ್ ಕಟೀಲ್ ಅವರದ್ದೇ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ ಎನ್ನಲಾಗಿದೆ.

ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಸೋಮವಾರ ಸಂಜೆ ತನ್ನ ಆಪ್ತ ಸಚಿವರು ಹಾಗೂ ಮುಖಂಡರ ಜತೆ ಸಭೆ ನಡೆಸಿದ ಮುಖ್ಯಮಂತ್ರಿಯವರು ಈ ಸಂದರ್ಭದಲ್ಲಿ ಆಡಿಯೋ ಕುರಿತು ಮಾತನಾಡಿದ್ದಾರೆ ಎನ್ನಲಾಗಿದೆ.

ಆ ಆಡಿಯೋ ಆತನದ್ದೇ. ಅದರಲ್ಲಿ ಎರಡು ಮಾತಿಲ್ಲ. ತನಿಖೆ ನಡೆಸುವ ಅಗತ್ಯವೇ ಇಲ್ಲ ಎಂದು ಆಪ್ತರ ಜತೆಗಿನ ಸಭೆಯಲ್ಲಿ ಯಡಿಯೂರಪ್ಪ ಹೇಳಿದ್ದಾರೆ ಎಂದು ತಿಳಿದು ಬಂದಿದೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರದ್ದು ಎನ್ನಲಾದ ಆಡಿಯೋ ಬಹಿರಂಗಗೊಂಡು ರಾಜ್ಯ ಬಿಜೆಪಿಯಲ್ಲಿ ಮತ್ತೊಮ್ಮೆ ಭಾರಿ ಸಂಚಲನ ಮೂಡಿಸಿತ್ತು. ನಳಿನ್  ಅವರು ತಮ್ಮ ಅಪ್ತರ ಜತೆ ತುಳು ಭಾಷೆಯಲ್ಲಿ ನಡೆಸಿದ ಸಂಭಾಷಣೆಯ ತುಣುಕು ವೈರಲ್ ಆಗಿತ್ತು.

ನಳಿನ್‌ ಅವರು ತುಳುವಿನಲ್ಲಿ ಸಂಭಾಷಣೆ ನಡೆಸುತ್ತಾ, ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪದಚ್ಯುತಿಯ ಸುಳಿವು ನೀಡಿದ್ದಾರಲ್ಲದೆ ಶೆಟ್ಟರ್, ಈಶ್ವರಪ್ಪ ಅವರನ್ನು ಕೈಬಿಡುವ ಬಗ್ಗೆ ಮಾಹಿತಿಯನ್ನು ತನ್ನ ಆಪ್ತನ ಜತೆ
ಹಂಚಿಕೊಂಡಿದ್ದಾರೆ. 

ಯಾರಿಗೂ ಹೇಳಬೇಡ ಎಂದು ತುಳು ಭಾಷೆಯಲ್ಲಿ ಹೇಳುತ್ತಾ, ನಂತರ ನಾವು ಹೇಳಿದಂತೆಯೇ ನಡೆಯಲಿದೆ. ಯಾರೇ ಬಂದರೂ ನಮಗೆ ಬೇಕಾದವರೇ ಆಗಿರಲಿದ್ದು ಮೂರು ಜನರ ಹೆಸರು ಹೈಕಮಾಂಡ್‌ ಗಮನದಲ್ಲಿದೆ ಎಂದು ನಳಿನ್ ಮಾಹಿಯನ್ನು ತನ್ನ ಆಪ್ತರು ಜತೆ ಹೇಳಿಕೊಂಡಿದ್ದಾರೆ.

ಆದರೆ ಈ ಆಡಿಯೋ ಕುರಿತು ಸ್ಪಷ್ಟನೆ ನೀಡಿದ ನಳಿನ್ ಅವರು, ಅದು ತನ್ನದಲ್ಲ, ಕಿಡಿಗೇಡಿಗಳ ಕೆಲಸ. ಸತ್ಯಾಸತ್ಯತೆ ಹೊರಬರಲು ತನಿಖೆ ನಡೆಸಲಿ. ಈ ಕುರಿತು ಮುಖ್ಯಮಂತ್ರಿಗೆ ಪತ್ರ ಬರೆಯುವುದಾಗಿ ಹೇಳಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು