3:12 AM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಜಲ್ಲಿಗುಡ್ಡೆ ಜಯನಗರದ ಹದಗೆಟ್ಟ ರಸ್ತೆ: ಕೂಡಲೇ ಕಾಂಕ್ರಿಟೀಕರಣಕ್ಕೆ ಒತ್ತಾಯಿಸಿ ಪಾಲಿಕೆ ಆಡಳಿತಕ್ಕೆ ಮನವಿ

23/06/2023, 19:13

ಮಂಗಳೂರು(reporterkarnataka.com):ನಗರ ಹೊರವಲಯದ ಮಹಾನಗರ ಪಾಲಿಕೆ ವ್ಯಾಪ್ತಿಯ ಬಜಾಲ್ ವಾರ್ಡಿನ ಜಲ್ಲಿಗುಡ್ಡೆಯಿಂದ ಜಯನಗರ ಪ್ರದೇಶಕ್ಕೆ ಸಂಪರ್ಕಿಸುವ ಮುಖ್ಯರಸ್ತೆಯು ಸಂಪೂರ್ಣವಾಗಿ ಹದಗೆಟ್ಟಿದ್ದು, ತಕ್ಷಣ ರಸ್ತೆ ದುರಸ್ತಿ ಮಾಡುವಂತೆ ಪಾಲಿಕೆ ಆಡಳಿತಕ್ಕೆ ಮನವಿ ಸಲ್ಲಿಸಲಾಯಿತು.
ಸ್ಥಳೀಯ ನಿವಾಸಿಗಳ ಸುಗಮ ಸಂಚಾರಕ್ಕೆ ಬಹಳ ಅಡಚಣೆಯುಂಟಾಗಿದೆ. ರಸ್ತೆಯುದ್ದಕ್ಕೂ ಇರುವ ಗುಂಡಿಗಳಿಗೆ ಮಣ್ಣು ಮತ್ತು ಜಲ್ಲಿ ಮಿಶ್ರಣ ಮಾಡಿದ ಪರಿಣಾಮ ರಸ್ತೆಯಲ್ಲೆಲ್ಲ ಕೆಸರುಮಯವಾಗಿದೆ. ಈ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು ಉರುಳಿ ಬೀಳುವಂತಹ ಅಪಾಯಕಾರಿ ಸ್ಥಿತಿ ನಿರ್ಮಾಣವಾಗಿದ್ದು ರಸ್ತೆಯಲ್ಲಿ ವಾಹನ ಸಂಚಾರ ಮಾಡಲು ಕೂಡಾ ಅಯೋಗ್ಯವಾಗಿದೆ.ಮಾತ್ರವಲ್ಲ ನಡೆದಾಡಲೂ ಆಗದಂತಹ ಪರಿಸ್ಥಿತಿಯಿಂದ ಸ್ಥಳೀಯ ನಾಗರಿಕರು ದಿನನಿತ್ಯ ಸಮಸ್ಯೆಯನ್ನು ಅನುಭವಿಸುವಂತಾಗಿದೆ. ಈ ಬಗ್ಗೆ ಊರ ನಾಗರೀಕರು ಹಲವಾರು ಬಾರಿ ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತಂದರೂ ಈ ರಸ್ತೆಯನ್ನು ದುರಸ್ತಿಗೊಳಿಸಲು ಸಾಧ್ಯವಾಗಿಲ್ಲ. ಈಗಾಗಲೇ ನಗರದಲ್ಲೆಲ್ಲ ಎಲ್ಲಾ ಮುಖ್ಯ ರಸ್ತೆ ಹಾಗೂ ಒಳರಸ್ತೆಗಳಿಗೆಲ್ಲ ಕಾಂಕ್ರಟೀಕರಣಗೊಳಿಸಲಾಗುತ್ತಿದ್ದೆ. ಆದರೆ ಬಜಾಲ್ ವಾರ್ಡಿನ ಮುಖ್ಯರಸ್ತೆಯಿಂದ ಹಿಡಿದು ಒಳರಸ್ತೆಗಳ ವರೆಗೂ ಯಾವುದೇ ರಸ್ತೆಗಳನ್ನು ಕಾಂಕ್ರಟೀಕರಣಗೊಳಿಸಲು ಸಾಧ್ಯವಾಗದೆ ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ.

ಈ ಎಲ್ಲಾ ಹಿನ್ನಲೆಯಲ್ಲಿ ಪಾಲಿಕೆ ಆಡಳಿತ ಈ ಕೂಡಲೇ ಬಜಾಲ್ ವಾರ್ಡಿನ ಜಲ್ಲಿಗುಡ್ಡೆ ಜಯನಗರದ ಹದಗೆಟ್ಟ ರಸ್ತೆಯನ್ನು ಕೂಡಲೇ ಕಾಂಕ್ರಟೀಕರಣಗೊಳಿಸಲು ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿ ಮನವಿಯನ್ನು ಸಲ್ಲಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು