10:56 PM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಗೆ ಚಾಲನೆ: ರೈತರಿಂದಲೇ ಬೆಳೆ ಸಮೀಕ್ಷೆಗೆ ಅವಕಾಶ

24/06/2023, 11:46

ಉಡುಪಿ(reporterkarnataka.com):ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು, ರೈತರಿಂದಲೇ ಬೆಳೆ ಸಮೀಕ್ಷೆ ಕೈಗೊಳ್ಳಲು ಮೊಬೈಲ್ ಆ್ಯಪ್‌ನ್ನು ಅಭಿವೃದ್ಧಿಪಡಿಸಲಾಗಿರುತ್ತದೆ.
ಇಲಾಖೆಯ ಫ್ರೂಟ್ಸ್ ತಂತ್ರಾಂಶದ ಎಫ್.ಐ.ಡಿ ಸಂಖ್ಯೆಯನ್ನು ಹೊಂದಿರುವ ರೈತರು ಗೂಗಲ್ ಪ್ಲೇ ಸ್ಟೋರ್‌ನಿಂದ “ಮುಂಗಾರು ರೈತರ ಬೆಳೆ ಸಮೀಕ್ಷೆ 2023” ಆ್ಯಪ್‌ನ್ನು ಡೌನ್‌ಲೋಡ್ ಮಾಡಿಕೊಂಡು, “ಇ-ಕೆವೈಸಿ ಮೂಲಕ ಆಧಾರ್ ದೃಢೀಕರಿಸಿ” ಆಯ್ಕೆ ಮಾಡಿ ಆಧಾರ್ ಸಂಖ್ಯೆಯನ್ನು ದಾಖಲಿಸಿ
ಆಯ್ಕೆ ಮಾಡಬೇಕು. ನಂತರದಲ್ಲಿ ಆಧಾರ್ ಸಂಖ್ಯೆಗೆ ಜೋಡಣೆಯಾಗಿರುವ ಮೊಬೈಲ್ ಸಂಖ್ಯೆಗೆ ಸ್ವೀಕೃತವಾಗುವ ಓ.ಟಿ.ಪಿ ಯನ್ನು ದಾಖಲಿಸಿದಾಗ, ರೈತರ ಎಫ್.ಐ.ಡಿ ಸಂಖ್ಯೆಗೆ ಜೋಡಣೆಯಾಗಿರುವ ಎಲ್ಲಾ ಜಮೀನುಗಳ ಮಾಹಿತಿಯು ಡೌನ್‌ಲೋಡ್ ಆಗುತ್ತದೆ. ಎಫ್.ಐ.ಡಿ ಸಂಖ್ಯೆಗೆ ಯಾವುದಾದರೂ ಸರ್ವೆ ನಂಬರ್‌ಗಳು ಜೋಡಣೆಯಾಗದಿದ್ದಲ್ಲಿ ಸೇರಿಸಿಕೊಳ್ಳಲು ಸಹ ಮೊಬೈಲ್ ಆಪ್‌ನಲ್ಲಿ ಅವಕಾಶ ಕಲ್ಪಿಸಲಾಗಿದೆ.
ನಂತರ ಸರ್ವೆ ನಂಬರ್, ಹಿಸ್ಸಾ, ಮಾಲೀಕನ ಹೆಸರು, ಆಯ್ಕೆ ಮಾಡಿ ಕ್ಷೇತ್ರವನ್ನು ನಮೂದಿಸಿ, ಸರ್ವೆ ನಂಬರ್‌ಗಳ ಗಡಿ ರೇಖೆಯೊಳಗೆ ನಿಂತು ಬೆಳೆ ವಿವರವನ್ನು ದಾಖಲಿಸಿ ಫೋಟೋ ತೆಗೆದು ಮಾಹಿತಿಯನ್ನು ಅಪ್‌ಲೋಡ್ ಮಾಡಬೇಕು. ರೈತರು ಎಫ್.ಐ.ಡಿ ಸಂಖ್ಯೆಯನ್ನು ಹೊಂದಿಲ್ಲದಿದ್ದಲ್ಲಿ ಹತ್ತಿರದ ಕೃಷಿ ಅಥವಾ ತೋಟಗಾರಿಕ ಇಲಾಖೆಗಳ ಕಛೇರಿಗಳನ್ನು ಸಂಪರ್ಕಿಸಿ ಎಫ್.ಐ.ಡಿ ಸಂಖ್ಯೆಯನ್ನು ಮಾಡಿಸಿಕೊಳ್ಳಬಹುದು.
ಬೆಳೆ ಸಮೀಕ್ಷೆ ಮಾಹಿತಿಯನ್ನು ಪ್ರಕೃತಿ ವಿಕೋಪಗಳ ಪರಿಹಾರ ವಿತರಣೆ, ಬೆಂಬಲ ಬೆಲೆ ಯೋಜನೆಯ ಅರ್ಹ ಫಲಾನುಭವಿಗಳ ಗುರುತಿಸುವಿಕೆ, ಬೆಳೆ ವಿಮೆ ಯೋಜನೆ ಅನುಷ್ಠಾನ, ಋತುಮಾನವಾರು ವಿವಿಧ ಬೆಳೆಗಳ ವಿಸ್ತೀರ್ಣ ವರದಿ ಕಾರ್ಯ, ಬೆಳೆ ಕಟಾವು ಪ್ರಯೋಗ ಅನುಷ್ಠಾನ, ಕೃಷಿ, ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆಗಳ ಫಲಾನುಭವಿ ಆಧಾರಿತ ಯೋಜನೆಗಳ ಅನುಷ್ಠಾನ ಹಾಗೂ ಪಹಣಿಯಲ್ಲಿ ಬೆಳೆ ವಿವರ ದಾಖಲಿಸಲು ಬಳಸಲಾಗುವುದು.
ರೈತರು ತಮ್ಮ ಜಮೀನಿನ ಬೆಳೆ ವಿವರವನ್ನು ಯಾವುದೇ ಲೋಪದೋಷಗಳಿಗೆ ಆಸ್ಪದವಿಲ್ಲದಂತೆ ತಾವೇ ದಾಖಲಿಸಲು ಸುವರ್ಣಾವಕಾಶ ಕಲ್ಪಿಸಿದ್ದು, ಇದರ ಸಂಪೂರ್ಣ ಪ್ರಯೋಜನವನ್ನು ಪಡೆಯುವಂತೆ ಹಾಗೂ ಜಿಲ್ಲೆಯ ರೈತರು ನಿಗದಿತ ಅವಧಿಯೊಳಗೆ ಮೊಬೈಲ್ ಆ್ಯಪ್‌ನಲ್ಲಿ ತಮ್ಮ ಜಮೀನಿನ ಸರ್ವೆ ನಂಬರ್‌ವಾರು ಬೆಳೆ ವಿವರವನ್ನು ನಿಖರವಾಗಿ ದಾಖಲಿಸಿ ಮುಂಗಾರು -2023ರ ಬೆಳೆ ಸಮೀಕ್ಷೆ ಕಾರ್ಯವನ್ನು ಸಂಪೂರ್ಣವಾಗಿ ಯಶಸ್ವಿಗೊಳಿಸುವಂತೆ ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು