3:01 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಪ್ರಾಣಿಗಳಿಗೂ ಮನುಷ್ಯರಷ್ಟೇ ಬದುಕುವ ಹಕ್ಕಿದೆ: ಅಧಿಕಾರಿಗಳಿಗೆ ಪಾಠ ಮಾಡಿದ ಸ್ಪೀಕರ್ ಖಾದರ್

24/06/2023, 12:52

ಮಂಗಳೂರು(reporterkarnataka.com): ಮನುಷ್ಯರಷ್ಟೇ ಪ್ರಾಣಿಗಳಿಗೂ ಬದುಕಲು ಹಕ್ಕು ಇದೆ. ಅವುಗಳ ಹೆಸರಿನಲ್ಲಿ ಯೋಜನೆ ರೂಪಿಸಿ ಸೂಕ್ತ ವ್ಯವಸ್ಥೆ ಮಾಡದಿದ್ದರೆ ಏನು ಪ್ರಯೋಜನ?
ಪಶು ಸಂಜೀವಿನಿ ಆಂಬುಲೆನ್ಸ್ ಯೋಜನೆಯಲ್ಲಿ ಪ್ರತಿ ಗೋವಿಗೆ ಸರಕಾರದಿಂದ ಎಷ್ಟು ಹಣ ಬರುತ್ತದೆ? ಎಷ್ಟು ಅನುದಾನ ಬರಲು ಬಾಕಿ ಇದೆ ಎಂದು ಸ್ಪೀಕರ್ ಯು.ಟಿ.ಖಾದರ್ ಪ್ರಶ್ನಿಸಿದರು.
ಹೋಮ್ ವರ್ಕ್ ಮಾಡಿ ಬಾರದ ಅಧಿಕಾರಿಗಳ ಬಳಿ ಈ ಕುರಿತು ಯಾವುದೇ ಅಂಕಿಅಂಶ ಮಾಹಿತಿ ಇರಲಿಲ್ಲ. ಹಾಗಾಗಿ ಜಿಲ್ಲಾಮಟ್ಟದ ಅಧಿಕಾರಿಗಳೇ ಸ್ಪೀಕರ್ ಪ್ರಶ್ನೆಗೆ ನಿರುತ್ತರರಾದರು.
ಇದೆಲ್ಲ ನಡೆದದ್ದು ದ.ಕ. ಜಿಪಂ ಕಚೇರಿಯ ನೇತ್ರಾವತಿ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ. ಸಭೆಯಲ್ಲಿ ಪಾಲನಾ ವರದಿ ವೇಳೆ ಸ್ಪೀಕರ್ ಯು.ಟಿ.ಖಾದರ್ ವಿಷಯ ಪ್ರಸ್ತಾಪಿಸಿದರು.

ಅಧಿಕಾರಿಗಳು ಮಾಹಿತಿ ನೀಡಲು ತಡವರಿಸಿದಾಗ ಸ್ಪೀಕರ್ ಖಾದರ್ ತರಾಟೆಗೆ ತೆಗೆದುಕೊಂಡರು. ಜಿಲ್ಲಾಮಟ್ಟದ ಅಧಿಕಾರಿ ಬಳಿ ಲೆಕ್ಕ ಇಲ್ಲವೇ ಎಂದು ಅಸಮಾಧಾನ ವ್ಯಕ್ತಪಡಿಸಿದ ಖಾದರ್, ಈ ಕುರಿತು ಉಸ್ತುವಾರಿ ಸಚಿವರಿಗೆ ಸಮಗ್ರ ವರದಿ ಕೊಡಿ, ವರದಿ ಬಗ್ಗೆ ಸದನದಲ್ಲಿ ಚರ್ಚಿಸಲಾಗುವುದು ಎಂದು ಹೇಳಿದರು.
ದ.ಕ.ಜಿಲ್ಲೆಗೆ ಮಂಜೂರಾದ 9 ಪಶು ಆಂಬುಲೆನ್ಸ್‌ಗಳಿಗೆ ಇನ್ನೂ ಚಾಲಕರ ನೇಮಕವಾಗದಿರುವ ವಿಚಾರ ಪ್ರಸ್ತಾಪವಾಗಿ, ಚಾಲಕರ ನೇಮಿಸದ ಏಜೆನ್ಸಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಪಶುಸಂಗೋಪನಾ ಇಲಾಖಾಧಿಕಾರಿಗೆ ಸೂಚನೆ ನೀಡಿದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ಗೋಶಾಲೆಗಳಿದ್ದು, ಇದರಲ್ಲಿ 17 ಖಾಸಗಿ, 2 ಧಾರ್ಮಿಕ ದತ್ತಿ ಇಲಾಖೆ ಹಾಗೂ 1 ಪಶು ಇಲಾಖೆಗೆ ಸಂಬಂಧ ಪಟ್ಟದ್ದಾಗಿದೆ. ಜಿಲ್ಲೆಯಲ್ಲಿ 107 ಕ್ಲಿನಿಕ್‌ಗಳಿದ್ದು 74 ಮಂದಿ ವೈದ್ಯರಲ್ಲಿ 28 ಮಂದಿ ಮಾತ್ರ ಕಾರ್ಯನಿರ್ವಹಿಸುತ್ತಿದ್ದಾರೆ. ಕಳೆದ 5 ವರ್ಷದಲ್ಲಿ ಹೊಸ ಪಶು ವೈದ್ಯರ ನೇಮಕವಾಗಿಲ್ಲ ಎಂದರು. ಗೋವುಗಳ ತುರ್ತು ಚಿಕಿತ್ಸೆಗೆ ಸ್ಪಂದಿಸುವ ನಿಟ್ಟಿನಲ್ಲಿ ಪಶು ಸಂಜೀವಿನಿ ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಗೆ 9 ಆಂಬುಲೆನ್ಸ್‌ಗಳು ಮಂಜೂರಾಗಿದ್ದು, ಇದರ ನಿರ್ವಹಣೆಯನ್ನು ಏಜೆನ್ಸಿಯೊಂದಕ್ಕೆ ಟೆಂಡರ್ ನೀಡಲಾಗಿದೆ. ಆದರೆ ಈವರೆಗೆ ಚಾಲಕರ ನೇಮಕವಾಗಿಲ್ಲ ಎಂದು ಅಧಿಕಾರಿ ಉತ್ತರಿಸಿದರು. ಇದರಿಂದ ಅಸಮಾಧಾನಗೊಂಡ ಯು.ಟಿ.ಖಾದರ್, ಮನುಷ್ಯರ ಹಾಗೆ ಪ್ರಾಣಿಗಳಿಗೂ ಬದುಕುವ ಹಕ್ಕಿದೆ. ಅವುಗಳ ಹೆಸರಿನಲ್ಲಿ ಯೋಜನೆ ತಯಾರಿಸಿ ಅದಕ್ಕೆ ಸೂಕ್ತ ವ್ಯವಸ್ಥೆ ಮಾಡದಿದ್ದರೆ ಏನು ಪ್ರಯೋಜನ ಎಂದರಲ್ಲದೆ, ಈ ಬಗ್ಗೆ ವಿಸ್ತತ ವರದಿಯನ್ನು ಜಿಲ್ಲಾ ಉಸ್ತುವಾರಿ ಸಚಿವರಿಗೆ ಒದಗಿಸುವಂತೆ ಅಧಿಕಾರಿಗೆ ಸೂಚಿಸಿದರು. ಹೊಸ ಆಂಬುಲೆನ್ಸ್ ಖರೀದಿಸಿ 6 ತಿಂಗಳು ಕಳೆದರೂ ಚಾಲಕರ ನೇಮಕವಾಗಿಲ್ಲ. ಪಶುಗಳ ಬಳಿಗೆ ತೆರಳಬೇಕಾದ ಆಂಬುಲೆನ್ಸ್ಗಳು ಪಾಳುಬಿದ್ದಸ್ಥಿತಿಯಲ್ಲಿವೆ.ಚಾಲಕರ ನೇಮಿಸದ ಏಜೆನ್ಸಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಪಶು ಸಂಗೋಪನಾ ಇಲಾಖೆ ಅಧಿಕಾರಿಗೆ ಸೂಚನೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು