3:42 AM Thursday18 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ದ.ಕ.ಜಿಲ್ಲೆಯಲ್ಲಿ ಡ್ರಗ್ಸ್ ನಿರ್ಮೂಲನೆ: ಪೊಲೀಸ್ ಇಲಾಖೆಗೆ ಸ್ಪೀಕರ್ ಖಾದರ್ ಹಾಗೂ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಖಡಕ್ ವಾರ್ನಿಂಗ್

24/06/2023, 20:13

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಇಡೀ ದೇಶವನ್ನೇ ಕಾಡುತ್ತಿರುವ ಡ್ರಗ್ಸ್ ಜಾಲವನ್ನು ದ.ಕ.ಜಿಲ್ಲೆಯಲ್ಲಿ ಸಂಪೂರ್ಣ ನಿರ್ಮೂಲನೆ ಮಾಡಲು ಸ್ಪೀಕರ್ ಯು.ಟಿ. ಖಾದರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಪಣ ತೊಟ್ಟಿದ್ದಾರೆ.
ರಾಜ್ಯದಲ್ಲಿ ಹೊಸ ಸರಕಾರ ಆಡಳಿತಕ್ಕೆ ಬಂದ ಬಳಿಕ ದಿನೇಶ್ ಗುಂಡೂರಾವ್ ಅವರನ್ನು ದ.ಕ. ಜಿಲ್ಲೆಯ ಉಸ್ತುವಾರಿ ಸಚಿವರನ್ನಾಗಿ ನಿಯೋಜಿಸಲಾಗಿದೆ. ಜಿಲ್ಲೆಯವರೇ ಆದ ಯು.ಟಿ. ಖಾದರ್ ಅವರಿಗೆ ರಾಜ್ಯದಲ್ಲೇ 2ನೇ ಅತ್ಯುನ್ನತ ಸ್ಥಾನ ನೀಡಿ ಗೌರವಿಸಲಾಗಿದೆ. ಇದೀಗ ಸ್ಪೀಕರ್ ಹಾಗೂ ಉಸ್ತುವಾರಿ ಸಚಿವರು ಜಿಲ್ಲೆಯಲ್ಲಿ ಬೇರು ಬಿಟ್ಟಿರುವ ಡ್ರಗ್ಸ್ ಹಾವಳಿಯನ್ನು ಸಂಪೂರ್ಣ ತೆಗೆದು ಹಾಕಲು ಪಣ ತೊಟ್ಟಿದ್ದಾರೆ. ಈ ನಿಟ್ಟಿನಲ್ಲಿ ಜಿಲ್ಲಾ ಪೊಲೀಸ್ ಇಲಾಖೆಗೆ ಖಡಕ್ ಸೂಚನೆಯನ್ನು ನೀಡಿದ್ದಾರೆ.
ಜಿಲ್ಲೆಯಲ್ಲಿ ಹೈಸ್ಕೂಲ್ ಮಕ್ಜಳಿನಿಂದ ಆರಂಭಗೊಂಡು ಪಿಜಿ ವಿದ್ಯಾರ್ಥಿಗಳು ಹಾಗೂ ಯುವ ಸಮುದಾಯವನ್ನು ಟಾರ್ಗೆಟ್ ಮಾಡಿಕೊಂಡು ಡ್ರಗ್ಸ್ ಜಾಲ ಅಮೀಬಾ ತನ್ನ ಪಾದವನ್ನು ಬೆಳೆಸಿದಂತೆ ಹಬ್ಬಿಕೊಂಡಿದೆ. ಇದು ಸಾವಿರಾರು ವಿದ್ಯಾರ್ಥಿ- ವಿದ್ಯಾರ್ಥಿ ನಿಯರನ್ನು, ಯುವ ಸಮುದಾಯವನ್ನು ಆಪೋಷಣ ಮಾಡಲು ತನ್ನ ಕಬಂಧ ಬಾಹುಗಳನ್ನು ಚಾಚುತ್ತಿದೆ. ಡ್ರಗ್ಸ್ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಹಲವು ಆತ್ಮಹತ್ಯೆ, ಕೊಲೆಗಳು ನಡೆದಿವೆ. ಇದನ್ನೆಲ್ಲ ತಪ್ಪಿಸಿ ಯುವಕರನ್ನು ಸರಿಯಾದ ಹಾದಿಯಲ್ಲಿ ಮುನ್ನಡೆಸುವ ನಿಟ್ಟಿನಲ್ಲಿ ಡ್ರಗ್ಸ್ ನಿಯಂತ್ರಣ ಮುಖ್ಯವಾಗಿದೆ. ಇದಕ್ಕೆ ಪೊಲೀಸ್ ಇಲಾಖೆಯ ಸಹಕಾರ ಮೊದಲು ಸಿಗಬೇಕಾಗಿದೆ. ಡ್ರಗ್ಸ್ ಬಗ್ಗೆ ಮಾಹಿತಿ ಕೊಟ್ಟವನ ಮಾಹಿತಿಯನ್ನೇ ಡ್ರಗ್ಸ್ ಪೂರೈಕೆದಾರರಿಗೆ ನೀಡುವ ಕೆಲಸವನ್ನು ಮಾಡುತ್ತಿರುವ ಕೆಲವು ಪೊಲೀಸ್ ಸಿಬ್ಬಂದಿಗಳು ಕೂಡ ಇಲಾಖೆಯಲ್ಲಿದ್ದಾರೆ ಎಂಬ ಆರೋಪ ಸಾರ್ವಜನಿಕರಿಂದ ಕೇಳಿ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಸ್ಪೀಕರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ನೀಡಿದ ಖಡಕ್ ವಾರ್ನಿಂಗ್ ಬಗ್ಗೆ ನಾಗರಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ‌.


ಈ ನಿಟ್ಟಿನಲ್ಲಿ ಇಂದು ನಗರದ ಶಾಲಾ ಕಾಲೇಜುಗಳಲ್ಲಿ ಡ್ರಗ್ಸ್ ಎವರ್ ನೆಸ್ ಶುರುವಾಗಿದೆ.
ಶಾಲಾ-ಕಾಲೇಜುಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಿಗರೇಟ್ ಮತ್ತು ಗುಟ್ಕಾ ಬಳಕೆಯ ವಿರುದ್ಧ ವಿಶೇಷ ಮತ್ತು ಸಾಮೂಹಿಕ ಅಭಿಯಾನದಲ್ಲಿ ನಗರದಾದ್ಯಂತ ಒಟ್ಟು 348 ಅಂಗಡಿಗಳು, ಸಂಸ್ಥೆಗಳನ್ನು ಶೋಧಿಸಲಾಯಿತು. 153 ಸಿಗರೇಟ್ / ಗುಟ್ಕಾ ಎರಡನ್ನೂ ಹೊಂದಿರುವ ಅಂಗಡಿಗಳು ಕಂಡುಬಂದಿವೆ. ಅವರಿಗೆಲ್ಲ COTPA – ಸಿಗರೇಟ್‌ಗಳು ಮತ್ತು ಇತರ ತಂಬಾಕು ಉತ್ಪನ್ನಗಳ ಕಾಯಿದೆಯಡಿಯಲ್ಲಿ ಕೇಸು ಹಾಕಲಾಗಿದೆ. ಎಲ್ಲರಿಗೂ 200 ರೂ ದಂಡವನ್ನು ವಿಧಿಸಲಾಗಿದೆ ಮತ್ತು ಹಾಗೆ ಮಾಡದಂತೆ ಎಚ್ಚರಿಕೆ ನೀಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು