9:15 AM Wednesday24 - September 2025
ಬ್ರೇಕಿಂಗ್ ನ್ಯೂಸ್
Kodagu | ವಿರಾಜಪೇಟೆ, ಕುಶಾಲನಗರ ಮತ್ತು ಹುದಿಕೇರಿ ಆಸ್ಪತ್ರೆ ಮೇಲ್ದರ್ಜೆಗೆ: ಆರೋಗ್ಯ ಸಚಿವ… ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರ ಬದುಕು ಸುಧಾರಣೆ: ಮಹಿಳಾ ದಸರಾ ಉದ್ಘಾಟಿಸಿ… ಪೊನ್ನಂಪೇಟೆ ಕೋಣಗೇರಿಯಲ್ಲಿ ಸೈನಿಕ ಪತಿಯಿಂದಲೇ ಪತ್ನಿಗೆ ಗುಂಡು: ಮೈಸೂರಿಗೆ ರವಾನೆ ಗೋಣಿಕೊಪ್ಪಲು ಬಿಟ್ಟಂಗಾಲ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ – ಜೀಪು ಅಪಘಾತ: ಅದೃಷ್ಟವಶಾತ್ ಎಲ್ಲರೂ… Kodagu | ಐತಿಹಾಸಿಕ ಮಡಿಕೇರಿ ದಸರಾಕ್ಕೆ ಚಾಲನೆ: 4 ಶಕ್ತಿ ದೇವತೆಗಳಿಗೆ ವಿಶೇಷ… ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ

ಇತ್ತೀಚಿನ ಸುದ್ದಿ

ದ.ಕ.ಜಿಲ್ಲೆಯಲ್ಲಿ ಡ್ರಗ್ಸ್ ನಿರ್ಮೂಲನೆ: ಪೊಲೀಸ್ ಇಲಾಖೆಗೆ ಸ್ಪೀಕರ್ ಖಾದರ್ ಹಾಗೂ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಖಡಕ್ ವಾರ್ನಿಂಗ್

24/06/2023, 20:13

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಇಡೀ ದೇಶವನ್ನೇ ಕಾಡುತ್ತಿರುವ ಡ್ರಗ್ಸ್ ಜಾಲವನ್ನು ದ.ಕ.ಜಿಲ್ಲೆಯಲ್ಲಿ ಸಂಪೂರ್ಣ ನಿರ್ಮೂಲನೆ ಮಾಡಲು ಸ್ಪೀಕರ್ ಯು.ಟಿ. ಖಾದರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಪಣ ತೊಟ್ಟಿದ್ದಾರೆ.
ರಾಜ್ಯದಲ್ಲಿ ಹೊಸ ಸರಕಾರ ಆಡಳಿತಕ್ಕೆ ಬಂದ ಬಳಿಕ ದಿನೇಶ್ ಗುಂಡೂರಾವ್ ಅವರನ್ನು ದ.ಕ. ಜಿಲ್ಲೆಯ ಉಸ್ತುವಾರಿ ಸಚಿವರನ್ನಾಗಿ ನಿಯೋಜಿಸಲಾಗಿದೆ. ಜಿಲ್ಲೆಯವರೇ ಆದ ಯು.ಟಿ. ಖಾದರ್ ಅವರಿಗೆ ರಾಜ್ಯದಲ್ಲೇ 2ನೇ ಅತ್ಯುನ್ನತ ಸ್ಥಾನ ನೀಡಿ ಗೌರವಿಸಲಾಗಿದೆ. ಇದೀಗ ಸ್ಪೀಕರ್ ಹಾಗೂ ಉಸ್ತುವಾರಿ ಸಚಿವರು ಜಿಲ್ಲೆಯಲ್ಲಿ ಬೇರು ಬಿಟ್ಟಿರುವ ಡ್ರಗ್ಸ್ ಹಾವಳಿಯನ್ನು ಸಂಪೂರ್ಣ ತೆಗೆದು ಹಾಕಲು ಪಣ ತೊಟ್ಟಿದ್ದಾರೆ. ಈ ನಿಟ್ಟಿನಲ್ಲಿ ಜಿಲ್ಲಾ ಪೊಲೀಸ್ ಇಲಾಖೆಗೆ ಖಡಕ್ ಸೂಚನೆಯನ್ನು ನೀಡಿದ್ದಾರೆ.
ಜಿಲ್ಲೆಯಲ್ಲಿ ಹೈಸ್ಕೂಲ್ ಮಕ್ಜಳಿನಿಂದ ಆರಂಭಗೊಂಡು ಪಿಜಿ ವಿದ್ಯಾರ್ಥಿಗಳು ಹಾಗೂ ಯುವ ಸಮುದಾಯವನ್ನು ಟಾರ್ಗೆಟ್ ಮಾಡಿಕೊಂಡು ಡ್ರಗ್ಸ್ ಜಾಲ ಅಮೀಬಾ ತನ್ನ ಪಾದವನ್ನು ಬೆಳೆಸಿದಂತೆ ಹಬ್ಬಿಕೊಂಡಿದೆ. ಇದು ಸಾವಿರಾರು ವಿದ್ಯಾರ್ಥಿ- ವಿದ್ಯಾರ್ಥಿ ನಿಯರನ್ನು, ಯುವ ಸಮುದಾಯವನ್ನು ಆಪೋಷಣ ಮಾಡಲು ತನ್ನ ಕಬಂಧ ಬಾಹುಗಳನ್ನು ಚಾಚುತ್ತಿದೆ. ಡ್ರಗ್ಸ್ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಹಲವು ಆತ್ಮಹತ್ಯೆ, ಕೊಲೆಗಳು ನಡೆದಿವೆ. ಇದನ್ನೆಲ್ಲ ತಪ್ಪಿಸಿ ಯುವಕರನ್ನು ಸರಿಯಾದ ಹಾದಿಯಲ್ಲಿ ಮುನ್ನಡೆಸುವ ನಿಟ್ಟಿನಲ್ಲಿ ಡ್ರಗ್ಸ್ ನಿಯಂತ್ರಣ ಮುಖ್ಯವಾಗಿದೆ. ಇದಕ್ಕೆ ಪೊಲೀಸ್ ಇಲಾಖೆಯ ಸಹಕಾರ ಮೊದಲು ಸಿಗಬೇಕಾಗಿದೆ. ಡ್ರಗ್ಸ್ ಬಗ್ಗೆ ಮಾಹಿತಿ ಕೊಟ್ಟವನ ಮಾಹಿತಿಯನ್ನೇ ಡ್ರಗ್ಸ್ ಪೂರೈಕೆದಾರರಿಗೆ ನೀಡುವ ಕೆಲಸವನ್ನು ಮಾಡುತ್ತಿರುವ ಕೆಲವು ಪೊಲೀಸ್ ಸಿಬ್ಬಂದಿಗಳು ಕೂಡ ಇಲಾಖೆಯಲ್ಲಿದ್ದಾರೆ ಎಂಬ ಆರೋಪ ಸಾರ್ವಜನಿಕರಿಂದ ಕೇಳಿ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಸ್ಪೀಕರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ನೀಡಿದ ಖಡಕ್ ವಾರ್ನಿಂಗ್ ಬಗ್ಗೆ ನಾಗರಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ‌.


ಈ ನಿಟ್ಟಿನಲ್ಲಿ ಇಂದು ನಗರದ ಶಾಲಾ ಕಾಲೇಜುಗಳಲ್ಲಿ ಡ್ರಗ್ಸ್ ಎವರ್ ನೆಸ್ ಶುರುವಾಗಿದೆ.
ಶಾಲಾ-ಕಾಲೇಜುಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಿಗರೇಟ್ ಮತ್ತು ಗುಟ್ಕಾ ಬಳಕೆಯ ವಿರುದ್ಧ ವಿಶೇಷ ಮತ್ತು ಸಾಮೂಹಿಕ ಅಭಿಯಾನದಲ್ಲಿ ನಗರದಾದ್ಯಂತ ಒಟ್ಟು 348 ಅಂಗಡಿಗಳು, ಸಂಸ್ಥೆಗಳನ್ನು ಶೋಧಿಸಲಾಯಿತು. 153 ಸಿಗರೇಟ್ / ಗುಟ್ಕಾ ಎರಡನ್ನೂ ಹೊಂದಿರುವ ಅಂಗಡಿಗಳು ಕಂಡುಬಂದಿವೆ. ಅವರಿಗೆಲ್ಲ COTPA – ಸಿಗರೇಟ್‌ಗಳು ಮತ್ತು ಇತರ ತಂಬಾಕು ಉತ್ಪನ್ನಗಳ ಕಾಯಿದೆಯಡಿಯಲ್ಲಿ ಕೇಸು ಹಾಕಲಾಗಿದೆ. ಎಲ್ಲರಿಗೂ 200 ರೂ ದಂಡವನ್ನು ವಿಧಿಸಲಾಗಿದೆ ಮತ್ತು ಹಾಗೆ ಮಾಡದಂತೆ ಎಚ್ಚರಿಕೆ ನೀಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು