2:30 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಡಿ.ಕೆ. ಶಿವಕುಮಾರ್ ಅವರು ಆ್ಯಕ್ಟಿಂಗ್ ಸಿಎಂ ರೀತಿ ವರ್ತಿಸುತ್ತಿದ್ದಾರೆ: ಮಾಜಿ ಡಿಸಿಎಂ ಆರ್. ಅಶೋಕ್ ಟೀಕೆ

24/06/2023, 20:43

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರದ್ದು ಒಂದು ರೀತಿ ಅತಿರೇಕದ ನಡೆ.ಅವರು ಸಿಎಂ ಅಲ್ಲ, ಆದರೆ ಆ್ಯಕ್ಟಿಂಗ್ ಸಿಎಂ ರೀತಿ ಮಾಡುತ್ತಿದ್ದಾರೆ ಎಂದು ಮಾಜಿ ಡಿಸಿಎಂ, ಬಿಜೆಪಿ ನಾಯಕ ಆರ್. ಅಶೋಕ್ ಹೇಳಿದರು.
ಚಿಕ್ಕಮಗಳೂರಿನಲ್ಲಿ ಶನಿವಾರ ಮಾಧ್ಯಮ ಜತೆ ಮಾತನಾಡಿದ ಅವರು, ಮುಖ್ಯಮಂತ್ರಿ ಸ್ಥಾನವನ್ನು ಸಿದ್ದರಾಮಯ್ಯ ಬಿಟ್ಟುಕೊಡಲ್ಲ, ತನಗೆ ಸಿಎಂ ಸ್ಥಾನ ಸಿಗಲ್ಲ ಅನ್ನೋ ಗ್ಯಾರಂಟಿ ಇದೆ. ಅದಕ್ಕಾಗಿ ಈಗಿನಿಂದಲೇ ಓವರ್ಟೇಕ್ ಮಾಡಿ ಏನಾದರೂ ಕಿರಿಕಿರಿ ಮಾಡಲು ಹೊರಟಿದ್ದಾರೆ. ಕಿರಿಕಿರಿ ಬೀದಿಗೆ ಬಂದರೆ ಈ ಸರಕಾರ ಬಿದ್ದು ಹೋಗುತ್ತದೆ ಎಂದರು.
ಇದೇನು ಸಮ್ಮಿಶ್ರ ಸರ್ಕಾರವಾ? ನಾನೇ ಸಿಎಂ ಎಂದು ಸಿದ್ದರಾಮಯ್ಯ ದೆಹಲಿಯಲ್ಲಿ ಹೇಳಿದ್ದಾರೆ. ಇದು ಅವರು ಡಿ.ಕೆ. ಶಿವಕುಮಾರ್ ಅವರಿಗೆ ಹೇಳಿದ್ದು ಎನ್ನುವುದು ಜಗಜ್ಜಾಹೀರು ಎಙದು ಅವರು ನುಡಿದರು.
ಸಿಎಂ ಆದವರು ಹಿಂದಿನ ಸಿಎಂರನ್ನ ಭೇಟಿ ಮಾಡೋದು ಮಾಮೂಲಿ. ನಾನು ಕೂಡ ಡಿಸಿಎಂ ಆಗಿದ್ದೆ, ನಿವೃತ್ತ ಮುಖ್ಯಮಂತ್ರಿಯನ್ನು ಭೇಟಿ ಮಾಡಿಲ್ಲ. 3ನೇ ತಾರೀಖು ಪ್ರತಿಪಕ್ಷ ನಾಯಕನನ್ನ ಅನೌನ್ಸ್ ಮಾಡುತ್ತಾರೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು