1:08 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಬಿಜೆಪಿ ರಾಜ್ಯಾಧ್ಯಕ್ಷರ ಹುದ್ದೆ ಖಾಲಿ ಇಲ್ಲ, ನಳಿನ್ ಬದಲಾವಣೆ ಸಾಧ್ಯತೆ ಕಡಿಮೆ: ಮಾಜಿ ಡಿಸಿಎಂ ಆರ್. ಅಶೋಕ್

24/06/2023, 21:34

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಹುದ್ದೆ ಖಾಲಿ ಇಲ್ಲ, ನಳಿನ್ ಕುಮಾರ್ ಕಟೀಲ್ ಇದ್ದಾರೆ. ಸದ್ಯ ರಾಜ್ಯಾಧ್ಯಕ್ಷರ ಬದಲಾವಣೆ ಸಾಧ್ಯತೆ ತೀರಾ ಕಡಿಮೆ ಎಂದು ಮಾಜಿ ಉಪ ಮುಖ್ಯಮಂತ್ರಿ ಆರ್. ಅಶೋಕ್ ಹೇಳಿದರು.
ಚಿಕ್ಕಮಗಳೂರಿನಲ್ಲಿ ಶನಿವಾರ ಮಾಧ್ಯಮ ಜತೆ ಮಾತನಾಡಿದ ಅವರು, ಸೋಮಣ್ಣ ಹೇಳಿಕೆ ಬಗ್ಗೆ ನನಗೇನೂ ಗೊತ್ತಿಲ್ಲ, ರಾಜ್ಯಾಧ್ಯಕ್ಷರ ಸೀಟ್ ಖಾಲಿ ಇಲ್ಲ. ಸದ್ಯಕ್ಕೆ ಕಟೀಲ್ ಅವರನ್ನು ತೆಗೆಯುವ ಸಂದರ್ಭ ಕಾಣುತ್ತಿಲ್ಲ. ಪಾರ್ಲಿಮೆಂಟ್ ಚುನಾವಣೆ ಇದೆ. ರಾಷ್ಟ್ರಾಧ್ಯಕ್ಷರ ತೀರ್ಮಾನ ಗೊತ್ತಿಲ್ಲ ಎಂದರು.
ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಬಳ್ಳಾರಿಯಲ್ಲಿ ಕಟೀಲ್ ರಾಜೀನಾಮೆ ನೀಡಿದ್ದೇನೆ ಎಂಬ ಹೇಳಿಕೆ ನೀಡಿದ್ದಾರೆ ಎಂಬ ಕುರಿತು ಮಾಧ್ಯಮ ಮಂದಿಯ ಪ್ರಶ್ನೆಗೆ ಉತ್ತರಿಸಿದ ಅವರು, ನನ್ನ ಬಳಿ ಯಾವ ಮಾಹಿತಿ ಇಲ್ಲ. ನಮ್ಮದು ರಾಷ್ಟ್ರೀಯ ಪಕ್ಷ, ಡೆಲ್ಲಿಯವರು ಅಂಗೀಕಾರ ಮಾಡಬೇಕಲ್ವಾ. ಪಾರ್ಲಿಮೆಂಟ್ ಚುನಾವಣೆ ಇದೆ, ಈಗ ಬದಲಾವಣೆ ಬಗ್ಗೆ ರಾಷ್ಟ್ರೀಯ ಅಧ್ಯಕ್ಷರು ಚರ್ಚಿಸುತ್ತಾರೆ. ಅಲ್ಲಿವರೆಗೆ ರಾಜ್ಯಾಧ್ಯಕ್ಷರ ಪದವಿ ಖಾಲಿ ಇಲ್ಲ ಎಂದು ಆರ್. ಅಶೋಕ್ ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು