10:23 AM Wednesday21 - January 2026
ಬ್ರೇಕಿಂಗ್ ನ್ಯೂಸ್
ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,…

ಇತ್ತೀಚಿನ ಸುದ್ದಿ

ಬಜೆ ಡ್ಯಾಮ್ ಗೆ ಭಾರೀ ಪ್ರಮಾಣದಲ್ಲಿ ಮಳೆ ನೀರು: ಕುದಿಸಿ ಕುಡಿಯಲು ನಾಗರಿಕರಿಗೆ ಸೂಚನೆ

26/06/2023, 23:20

ಉಡುಪಿ (reporterkarnataka.com): ಬಜೆ ಡ್ಯಾಂಗೆ ಸ್ವರ್ಣ ನದಿಯಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ನೀರು ಬಂದಿದ್ದು, ಸದರಿ ನೀರಿನಲ್ಲಿ ಬಂದ ಕಸ , ಕಡ್ಡಿಗಳನ್ನು ಗೇಟ್ ತೆಗೆದು ನದಿಯಿಂದ ಹೊರ ಬಿಡಲಾಗಿದೆ. ಅದೇ ನೀರನ್ನು ತೆಗೆದುಕೊಂಡು ಶುದ್ಧೀಕರಣ ಮಾಡಿ, ಸಾರ್ವಜನಿಕರಿಗೆ ಸರಬರಾಜು ಮಾಡಲಾಗಿರುತ್ತದೆ. ಆದ್ದರಿಂದ ನೀರನ್ನು ಕುದಿಸಿ ಕುಡಿಯಲು ಸೂಚಿಸಲಾಗಿದೆ.
ಇದು ಪ್ರಥಮ ಮಳೆಯಾಗಿರುವುದರಿಂದ ಆಲಂ ಪ್ರಮಾಣ ಈ ಹಿಂದೆ ನಿಗಧಿಪಡಿಸಿದಂತೆ ಇರುವುದರಿಂದ ಸಾರ್ವಜನಿಕರಿಗೆ ಸ್ವಲ್ಪ ಪ್ರಮಾಣದಲ್ಲಿ ಕೆಂಪು ನೀರು ಸರಬರಾಜು ಆಗಿರುತ್ತದೆ.
ಈಗಾಗಲೇ ಆಲಂ ಪ್ರಮಾಣವನ್ನು ಸರಿಪಡಿಸಲಾಗಿದ್ದು, ನಗರಸಭೆ ನೀರು, ಸರಬರಾಜು ಮಾಡುತ್ತಿರುವ ನೀರಿನಲ್ಲಿ ಕಸ-ಕಡ್ಡಿಗಳು ಬಂದಿರುವುದಿಲ್ಲ. ನೀರಿನ ಬಣ್ಣ ಮಾತ್ರ ಬದಲಾವಣೆ ಆಗಿರುತ್ತದೆ. ಇದು ಹೆಚ್ಚು ಮಳೆ ಬಿದ್ದಾಗ ಸ್ವಾಭಾವಿಕವಾಗಿ ಸಂಪೂರ್ಣ ಬಣ್ಣ ತೆಗೆಯಲು ಸಾಧ್ಯವಾಗಿರುವುದಿಲ್ಲ. ಆದಾಗ್ಯೂ ನಗರಸಭೆ ಸಾರ್ವಜನಿಕರ ಸುರಕ್ಷತೆಗೋಸ್ಕರ ಸಂಪೂರ್ಣ ಶುದ್ದೀಕರಣ ಮಾಡಿ ನೀರು ವಿತರಿಸಲು ಕ್ರಮ ಕೈಗೊಳ್ಳಲಿದ್ದು , ಮಳೆಗಾಲ ಆಗಿರುವ ಕಾರಣ ನೀರನ್ನು ಕಾಯಿಸಿ ಕುಡಿಯುವಂತೆ ತಿಳಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು