11:08 PM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಬಜೆ ಡ್ಯಾಮ್ ಗೆ ಭಾರೀ ಪ್ರಮಾಣದಲ್ಲಿ ಮಳೆ ನೀರು: ಕುದಿಸಿ ಕುಡಿಯಲು ನಾಗರಿಕರಿಗೆ ಸೂಚನೆ

26/06/2023, 23:20

ಉಡುಪಿ (reporterkarnataka.com): ಬಜೆ ಡ್ಯಾಂಗೆ ಸ್ವರ್ಣ ನದಿಯಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ನೀರು ಬಂದಿದ್ದು, ಸದರಿ ನೀರಿನಲ್ಲಿ ಬಂದ ಕಸ , ಕಡ್ಡಿಗಳನ್ನು ಗೇಟ್ ತೆಗೆದು ನದಿಯಿಂದ ಹೊರ ಬಿಡಲಾಗಿದೆ. ಅದೇ ನೀರನ್ನು ತೆಗೆದುಕೊಂಡು ಶುದ್ಧೀಕರಣ ಮಾಡಿ, ಸಾರ್ವಜನಿಕರಿಗೆ ಸರಬರಾಜು ಮಾಡಲಾಗಿರುತ್ತದೆ. ಆದ್ದರಿಂದ ನೀರನ್ನು ಕುದಿಸಿ ಕುಡಿಯಲು ಸೂಚಿಸಲಾಗಿದೆ.
ಇದು ಪ್ರಥಮ ಮಳೆಯಾಗಿರುವುದರಿಂದ ಆಲಂ ಪ್ರಮಾಣ ಈ ಹಿಂದೆ ನಿಗಧಿಪಡಿಸಿದಂತೆ ಇರುವುದರಿಂದ ಸಾರ್ವಜನಿಕರಿಗೆ ಸ್ವಲ್ಪ ಪ್ರಮಾಣದಲ್ಲಿ ಕೆಂಪು ನೀರು ಸರಬರಾಜು ಆಗಿರುತ್ತದೆ.
ಈಗಾಗಲೇ ಆಲಂ ಪ್ರಮಾಣವನ್ನು ಸರಿಪಡಿಸಲಾಗಿದ್ದು, ನಗರಸಭೆ ನೀರು, ಸರಬರಾಜು ಮಾಡುತ್ತಿರುವ ನೀರಿನಲ್ಲಿ ಕಸ-ಕಡ್ಡಿಗಳು ಬಂದಿರುವುದಿಲ್ಲ. ನೀರಿನ ಬಣ್ಣ ಮಾತ್ರ ಬದಲಾವಣೆ ಆಗಿರುತ್ತದೆ. ಇದು ಹೆಚ್ಚು ಮಳೆ ಬಿದ್ದಾಗ ಸ್ವಾಭಾವಿಕವಾಗಿ ಸಂಪೂರ್ಣ ಬಣ್ಣ ತೆಗೆಯಲು ಸಾಧ್ಯವಾಗಿರುವುದಿಲ್ಲ. ಆದಾಗ್ಯೂ ನಗರಸಭೆ ಸಾರ್ವಜನಿಕರ ಸುರಕ್ಷತೆಗೋಸ್ಕರ ಸಂಪೂರ್ಣ ಶುದ್ದೀಕರಣ ಮಾಡಿ ನೀರು ವಿತರಿಸಲು ಕ್ರಮ ಕೈಗೊಳ್ಳಲಿದ್ದು , ಮಳೆಗಾಲ ಆಗಿರುವ ಕಾರಣ ನೀರನ್ನು ಕಾಯಿಸಿ ಕುಡಿಯುವಂತೆ ತಿಳಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು